ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

Date:

ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್)‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.

ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು) ಕ್ರಾಸ್‌ ಮೂಲಕ ಭವಾನಿ ದಾಬಕಾ, ಖೇರ್ಡಾ(ಬಿ) ಮೂಲಕ ಔರಾದ್‌ ತಾಲೂಕು ಕೇಂದ್ರಕ್ಕೆ ಸಂಪರ್ಕಿಸುವ ಜಿಲ್ಲಾ ಮುಖ್ಯ ಹೆದ್ದಾರಿ ಇದಾಗಿದೆ.

ಭವಾನಿ ದಾಬಕಾ ಗ್ರಾಮದಿಂದ ಚಿಕ್ಲಿ(ಯು) ಗಡಿ ಭಾಗದವರೆಗೆ ಸುಮಾರು 6 ಕಿ.ಮೀ. ಇರುವ ರಸ್ತೆಯ ಡಾಂಬರ್ ಕಿತ್ತು ಹೋಗಿದೆ. ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ಜಲ್ಲಿಕಲ್ಲುಗಳು ತೇಲಿವೆ. ರಸ್ತೆ ತಗ್ಗುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಹೊಂಡಗಳಂತೆ ಕಾಣುತ್ತಿವೆ. ಇದೇ ರಸ್ತೆಯಲ್ಲಿ ಪ್ರಯಾಣಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಅಳಲು ತೋಡಿಕೊಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 07 28 at 12.34.31 PM 1
ದಾಬಕಾ ಬಳಿ ಸೇತುವೆ ಮೇಲಿನ ರಸ್ತೆಯಲ್ಲಿ ಭಾರಿ ಪ್ರಮಾಣದ ತಗ್ಗು ಬಿದ್ದಿರುವುದು

ಸರ್ಕಾರ ರಸ್ತೆ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಅನುದಾನ ಖರ್ಚು ಮಾಡುತ್ತಿದೆ. ಆದರೆ, ಸಮಪರ್ಕವಾಗಿ ಅನುಷ್ಠಾನವಾಗದ ಕಾರಣ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಅಧೋಗತಿಗೆ ತಲುಪಿವೆ. ಇಂತಹ ದುಸ್ಥಿತಿ ನೋಡಿದರೆ ಸರ್ಕಾರದಿಂದ ಬಿಡಗಡೆಯಾದ ಹಣ ನಿಜಕ್ಕೂ ನಿರ್ದಿಷ್ಷ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಸಣ್ಣ ಅನುಮಾನ ಕಾಡದೇ ಇರದು!

ಮಹಾರಾಷ್ಟ್ರ ಸಂಪರ್ಕ ರಸ್ತೆ :

ʼಔರಾದ್‌ ತಾಲೂಕು ಕೇಂದ್ರದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವುದು ಇದೇ ಜಿಲ್ಲಾ ಹೆದ್ದಾರಿ ರಸ್ತೆಯಾಗಿದ್ದರಿಂದ ನಿತ್ಯ ಮಹಾರಾಷ್ಟ್ರ, ಕರ್ನಾಟಕ ರಾಜ್ಯದ ಹತ್ತಾರು ಸಾರಿಗೆ ಬಸ್‌ ಸೇರಿದಂತೆ ಇತರ ವಾಹನಗಳು ಸಂಚರಿಸುತ್ತವೆ. ಪ್ರಯಾಣದ ವೇಳೆ ಕೆಲ ದ್ವಿಚಕ್ರ ಸವಾರರು ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾದ ಘಟನೆಗಳು ಜರುಗಿವೆʼ ಎಂದು ಚಿಕ್ಲಿ(ಯು) ಗ್ರಾಮದ ಅಸ್ಲಾಂ ತಿಳಿಸುತ್ತಾರೆ.

WhatsApp Image 2024 07 28 at 12.36.37 PM
ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ ಜಾಧವ್‌ ಮಾತನಾಡಿದರು.

ದಾಬಕಾ ಹೋಬಳಿ ಕೇಂದ್ರ ವ್ಯಾಪ್ತಿಗೆ ಸುತ್ತಲಿನ 30ಕ್ಕೂ ಹೆಚ್ಚಿನ ಗ್ರಾಮ, ತಾಂಡಾಗಳು ಬರುತ್ತವೆ. ಹೀಗಾಗಿ ದಿನಾಲೂ ನೂರಾರು ಜನರು ವಿವಿಧ ಕೆಲಸ ಕಾರ್ಯಗಳಿಗೆ ಹಾಗೂ ಸಂತೆ ಮಾಡಲು ಹೋಬಳಿ ಕೇಂದ್ರಕ್ಕೆ ಬರುತ್ತಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆಯಲ್ಲಿ ಗುಂಡಿ ಇದೆಯೋ? ಗುಂಡಿಯಲ್ಲಿ ರಸ್ತೆ ಇದೆಯೋ !

ʼದಾಬಕಾ-ಚಿಕ್ಲಿ ಗಡಿಯವರೆಗೆ ಇರುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯಲ್ಲಿ ಗುಂಡಿ ಇದೆಯೋ? ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎಂಬ ಪ್ರಶ್ನೆ ಮೂಡುತ್ತದೆ. ಅಷ್ಟರ ಮಟ್ಟಿಗೆ ಹೆಜ್ಜೆ ಹೆಜ್ಜೆಗೂ ಗುಂಡಿಗಳಿಂದ ಕೂಡಿದೆ. ಇದರಿಂದ ಮಹಿಳೆಯರು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ದುರಸ್ತಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಹೊಸ ರಸ್ತೆ ನಿರ್ಮಿಸಬೇಕುʼ ಎಂದು ದಾಬಕಾ ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ ಜಾಧವ್ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಔರಾದ ತಾಲೂಕು ಪ್ರಭಾರಿ ಎಇಇ ಸುನೀಲ ಚಿಲ್ಲರ್ಗೆ ಈದಿನ.ಕಾಮ್‌ ಜೊತೆ ಮಾತನಾಡಿ, ʼನಾನು ಹೊಸದಾಗಿ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ರಸ್ತೆ ಸಮಸ್ಯೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಹೊಸ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆʼ ಎಂದು ತಿಳಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...