ಬಾಗಲಕೋಟೆ | ಏ.29, 30ರಂದು ಕೂಡಲ ಸಂಗಮದಲ್ಲಿ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮ

Date:

ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು.

ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಬಸವಣ್ಣನವರ ತತ್ವ, ಸಂದೇಶಗಳನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಸಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

“ಸಾಂಸ್ಕೃತಿಕ ವೈಭವದಲ್ಲಿ ಮೊದಲ ದಿನ ಏಪ್ರಿಲ್ 29ರಂದು ಬೆಳಿಗ್ಗೆ 10ರಿಂದ ಸಂಜೆ 5:30ರವರೆಗೆ ವಚನ ಸಾಹಿತ್ಯ ಸಮಕಾಲೀನ ಸಂವೇದನ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಗೋಷ್ಟಿಯೊಂದರಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವರ್ತಮಾನದ ಜರೂರು ವಿಷಯ ಕುರಿತು ರಂಜಾನ್ ದರ್ಗಾ, ಡಾ. ತಾರಣಿ ಶುಭದಾಯಿನಿ, ಡಾ. ವಿಕ್ರಂ ವಸಾಜೆ ವಿಷಯ ಮಂಡನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ. ಎಸ್ ಜಿ ಸಿದ್ದರಾಮಯ್ಯ ವಹಿಸುವರು. ಗೋಷ್ಠಿ ಎರಡರಲ್ಲಿ ವಚನ ಸಾಹಿತ್ಯ ಮತ್ತು ಭಾರತದ ಸಂವಿಧಾನ ಕುರಿತು ಡಾ. ಕೆ ನೀಲಾ, ಪ್ರೊ. ಎಂ ಎಸ್ ಶೇಖರ ಮಂಡನೆ ಮಾಡಲಿದ್ದಾರೆ. ಗೋಷ್ಠಿ ಮೂರರಲ್ಲಿ ವಚನ ಸಾಹಿತ್ಯ ಮತ್ತು ಮಹಿಳೆ ಕುರಿತು ಡಾ. ಬಸವರಾಜ ಸಾದಾರ್, ಡಾ. ಸಚಿತ ಬನ್ನಾಡಿ, ಡಾ. ಪ್ರಜ್ಞ ಮತ್ತಿಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ. ಗೋಷ್ಠಿ ನಾಲ್ಕರಲ್ಲಿ ವಿಶ್ವಶಾಂತಿ ಹಾಗೂ ಸಾಮರಸ್ಯ ಕುರಿತು ಡಾ. ಮೀನಾಕ್ಷಿ ಬಾಳಿ, ಡಾ. ಡೊಮನಿಕ್, ಡಾ. ಮೈಸೂರು ಉಮೇಶ್ ಮಂಡನೆ ಮಾಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಸವಿತಾ ನಾಗಭೂಷಣ, ಪ್ರೊ. ಕಾಳೇಗೌಡ ನಾಗವಾರ ವಹಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಮೇ 20ರಂದು ದೇಶವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ; ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮೀ ಕರೆ

“ವೈಭವದ ಎರಡನೇ ದಿನ ಏಪ್ರಿಲ್ 30ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮದ ಉದ್ಘಾಟನೆ ಹಾಗೂ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಲಿದ್ದಾರೆ. ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಪುಸ್ತಕವನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಹೊನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ವಹಿಸಲಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಸಭಾಪತಿ ಯುಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಜ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಸೇರಿದಂತೆ ಇತರರು ಸಚಿವ ಸಂಪುಟದ ಸಚಿವರು ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಶಾಸಕರು ಹಾಗೂ ಗಣ್ಯರು ಸಾಹಿತಿಗಳು ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...