ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

Date:

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ ನಗರಸಭೆ ಮತ್ತು ಪೊಲೀಸ್ ಇಲಾಖೆ ಯಾವುದೇ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸದೇ ಇರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸುತ್ತದೆ ಎಂದಿದ್ದಾರೆ.

ಅಲ್ಲದೇ ಮನವಿಯಲ್ಲಿ, ಕಡ್ಡಾಯ ಕನ್ನಡ ನಾಮಫಲಕಗಳನ್ನು ಹಾಕುವಂತೆ 2023ರ ಡಿಸೇಂಬರ್ 27ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಐತಿಹಾಸಿಕ ಹೋರಾಟದ ಫಲಶೃತಿಯಾಗಿ ರಾಜ್ಯ ಸರ್ಕಾರ, 2023 ಡಿ.28ರಂದು ಶೇ.60ರಷ್ಟು ಕನ್ನಡ ಬಳಸುವಂತೆ ಸುಗ್ರೀವಾಜ್ಞೆ ಹೊರಡಿಸಿತ್ತು. ಸದರಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ ಹಾಕದೇ ಅಧಿವೇಶನದಲ್ಲಿ ಅಂಗೀಕಾರಗೊಳಿಸಿ ಎಂದು ಪ್ರತಿಕ್ರಿಯಿಸಿದ ನಂತರ ರಾಜ್ಯ ಸರ್ಕಾರ ಇತ್ತೀಚೆಗೆ ನಡೆದ ಬಜೆಟ್ ಅಧಿವೇಶನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ 2024ನ್ನು ಅಂಗೀಕರಿಸಿ ಜಾರಿಗೆ ತಂದು 2024,ಫೆ.28ರ ಒಳಗಾಗಿ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಬೇಕು ಇಲ್ಲದಿದ್ದರೆ ದಂಡದ ಜೊತೆಗೆ ಪರವಾನಗಿ ರದ್ದುಗೊಳಿಸಬೇಕೆಂದು ಆದೇಶವಿದೆ ಎಂದು ತಿಳಿಸಿರುವ ಕರವೇ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣವೇ ನಗರಸಭೆ ಮತ್ತು ಆರಕ್ಷಕ ಇಲಾಖೆ ಎಚ್ಚೆತ್ತುಕೊಂಡು ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸದಿದ್ದರೆ 2023ರ ಡಿ.27ರಂದು ಬೆಂಗಳೂರಿನಲ್ಲಿ ನಡೆದ ಹೋರಾಟದ ಮಾದರಿಯಲ್ಲಿಯೇ ಮತ್ತೇ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ.ಡಿ, ರಾಹುಲ್ ಶೆಟ್ಟರ್, ನಾಗರಾಜ ಜಾಲಗಾರ, ಬಸವರಾಜ್ ಅಂಬಿಗೇರ, ಸಂಗಮೇಶ ಅಂಬಿಗೇರ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...