ಬಾಗಲಕೋಟೆ | ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರಬೇಕು: ಬಸವರಾಜ ಹೊರಟ್ಟಿ

Date:

ಬೆಂಗಳೂರು ಕೇಂದ್ರಿಕೃತ ಕಲಾವಿದರನ್ನು ಪ್ರೋತ್ಸಾಹಿಸುವುದರ ಹೊರತಾಗಿಯೂ ಉತ್ತರ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ರನ್ನ ವೈಭವದ ಎರಡನೇ ದಿನವಾದ ಭಾನುವಾರ ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

“ಉತ್ತರ ಕರ್ನಾಟಕದಲ್ಲಿ ಸಮರ್ಥ ಕಲಾವಿದರಿದ್ದಾರೆ. ಅವರಿಗೆ ವೇದಿಕೆ ಸಿಗುವ ಕೆಲಸವಾಗಬೇಕು” ಎಂದು ವೇದಿಕೆಯಲ್ಲಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಖಂಡ ವಿಜಯಪುರ ಜಿಲ್ಲೆಯು ರನ್ನ ಹುಟ್ಟಿದ ನಾಡು. ಇಲ್ಲಿ ಜನಸಿರುವ ನಾವುಗಳೇ ಪುಣ್ಯವಂತರು. ನಾವು ರನ್ನನಂತೆ ಆಗದಿದ್ದರೂ ಅವರು ಜನ್ಮತಾಳಿದ ಭೂಮಿಯಲ್ಲಿ ಜನಿಸಿರುವುದು ಹೆಮ್ಮೆಯ ಸಂಗತಿ” ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, “ರನ್ನ ಸೇರಿದಂತೆ ಮಹಾಪುರಷರನ್ನು ಯಾವುದೇ ಜಾತಿ, ಧರ್ಮಕ್ಕೆ ಸೀಮಿತಗೊಳಿಸುವ ಕೆಲಸವಾಗಬಾರದೆಂಬ ಕಾರಣಕ್ಕಾಗಿಯೇ ನಮ್ಮ ಇಲಾಖೆಯಿಂದ ಜಯಂತಿ ಹಾಗೂ ಉತ್ಸವಗಳನ್ನು ಸಂಘಟಿಸುತ್ತಿದ್ದೇವೆ. ಇಂಥ ಕಾರ್ಯಕ್ರಮಗಳ ಮೂಲಕ ಯುವಸಮೂಹಕ್ಕೆ ಮಹಾಪುರುಷರ ಕೊಡುಗೆಗಳನ್ನು ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ” ಎಂದರು.

“ಬಾಗಲಕೋಟೆ ಜಿಲ್ಲೆಯಲ್ಲಿ ಚಾಲುಕ್ಯ ಹಾಗೂ ರನ್ನ ಉತ್ಸವಗಳು ಅದ್ಧೂರಿಯಾಗಿ ಜರುಗುತ್ತವೆ. ನಾನು ಚಿಕ್ಕಿಂದಿನಿಂದಲೂ ಚಾಲುಕ್ಯ ಉತ್ಸವ ನೋಡುತ್ತ ಬೆಳೆದಿದ್ದೇನೆ. ರನ್ನ ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹2 ಕೋಟಿ ಅನುದಾನ ಒದಗಿಸಲಾಗಿದೆ. ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಾಗುವುದು” ಎಂದು ಭರವಸೆ ನೀಡಿದರು.

“ಅದ್ಧೂರಿ ರನ್ನ ಉತ್ಸವ ಸಂಘಟಿಸಿದ ಸಚಿವ ಆರ್ ಬಿ ತಿಮ್ಮಾಪುರ, ಜಿಲ್ಲಾಧಿಕಾರಿ ಕೆ ಎಂ ಜಾನಕಿ ಹಾಗೂ ಜಿಲ್ಲಾಡಳಿತವನ್ನು ಅಭಿನಂದಿಸಲಾಗುವುದು” ಎಂದರು.

ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಹಿಂದೆ ಹಲವು ವರ್ಷಗಳ ಕಾಲ ರನ್ನ ಉತ್ಸವವನ್ನು ಆಚರಿಸಲಾಗಿತ್ತು. ಆದರೆ ಕೋವಿಡ್, ಅತಿವೃಷ್ಟಿ, ಅನಾವೃಷ್ಟಿಯಂಥ ಕಾರಣಗಳಿಂದ ಉತ್ಸವ ನಿಂತುಹೋಗಿತ್ತು. ಆದರೆ ಈಗ ಸಚಿವ ಆರ್ ಬಿ ತಿಮ್ಮಾಪೂರ ಅವರ ಪ್ರಯತ್ನದ ಫಲವಾಗಿ ಅದ್ಧೂರಿ ಉತ್ಸವ ನಡೆಯುತ್ತಿರುವುದು ಖುಷಿಯ ಸಂಗತಿ” ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಫೂರ ಮಾತನಾಡಿ, “ರನ್ನ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೇರಿ ಎಲ್ಲರ ಸಹಕಾರವನ್ನು ಸ್ಮರಿಸುವುದಾಗಿ ಹೇಳಿದರು. ರನ್ನನ ಕಾಲದ ಶಾಸನಗಳು ರೂಗಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಅವುಗಳ ಸಂಶೋಧನೆ ಕಾರ್ಯ ನಡೆಯಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಹಳೆಯ ವೈಷಮ್ಯದ ಹಿನ್ನೆಲೆ ಮಹಿಳೆಯ ಭೀಕರ ಕೊಲೆ

ವಿಧಾನ ಪರಿಷತ್ ಸದಸ್ಯ ಪಿ‌ ಎಚ್ ಪೂಜಾರ ಮಾತನಾಡಿ, “ರನ್ನ ಕುರಿತಾದ ಸಂಶೋಧನೆಗೆ ಹೆಚ್ಚಿನ ಒತ್ತು ಸಿಗಬೇಕು. ಈ ಕುರಿತಾಗಿ ಸಂಶೋಧನೆಯಲ್ಲಿ ತೊಡಗಿರುವವರಿಗೆ ಪ್ರೋತ್ಸಾಹ ಒದಗಿಸುವ ಕೆಲಸವಾಗಬೇಕು” ಎಂದರು.

ಬಂಡಿಗಣಿ ಮಠದ ಬಸವಗೋಪಾಲ, ನೀಲಮಾಣಿಕ ಮಠದ ಚಕ್ರವರ್ತಿ ಶ್ರೀದಾನೇಶ್ವರ ಸ್ವಾಮೀಜಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ವಿಪ ಸದಸ್ಯೆ ಉಮಾಶ್ರೀ, ಜಿಲ್ಲಾಧಿಕಾರಿ ಕೆ ಎಂ ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಎಸ್‌ಪಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಎಸಿ ಶ್ವೇತಾ ಬೀಡಿಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರಣಕುಮಾರ ಜೈನಾಪುರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...