ಬಾಗಲಕೋಟೆ | ಹೂವು ಬೆಳೆಗೆ ಕಂಟಕವಾದ ಸಿಮೆಂಟ್ ಕಾರ್ಖಾನೆಯ ಧೂಳು

Date:

ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ ಧೂಳು ಕಂಟಕವಾಗಿ ಪರಿಣಮಿಸಿದ್ದು, ಬೆಳೆ ಹಾನಿಯ ಆತಂಕ ಎದುರಿಸುತ್ತಿದ್ದಾರೆ.

ರೈತನಿಗೆ ಒಂದು ಕಡೆ ಮಳೆ ಇಲ್ಲದೆ ತೊಂದರೆ ಆದರೆ, ಇನ್ನೊಂದು ಕಡೆ ಅಂತರ್ಜಲ ಕೂಡ ಬತ್ತಿ ಹೋಗಿದೆ. ಮೊದಲೇ ಬರಗಾಲ ಬಿದ್ದು, ಎಲ್ಲ ಬೆಳೆ ಕೈ ಕೊಟ್ಟು ಬರಗಾಲದಿಂದ ರೈತರು ಕಂಗಲಾಗಿದ್ದಾರೆ. ಇಂಥಹ ಸಂದರ್ಭದಲ್ಲೂ ಕೂಡ ಮಲ್ಲಪ್ಪ ಕುರಿ ಎಂಬ ರೈತ ಹೂವು ಬೆಳೆ ಬೆಳೆದಿದ್ದಾರೆ.

ಬರದಲ್ಲೂ ಸಮೃದ್ಧವಾಗಿ ಬೆಳೆದ ಹೂವಿಗೆ ಪಕ್ಕದಲ್ಲಿರುವ ಕೇಶವ ಸಿಮೆಂಟ್ ಕಾರ್ಖಾನೆಯ ದೂಳು ಮೆತ್ತಿಕೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ನಿಮ್ಮ ಕಾರ್ಖಾನೆ ಧೂಳಿನಿಂದ ಇಷ್ಟೊಂದು ಪ್ರಮಾಣದಲ್ಲಿ ನಷ್ಟವಾಗಿದೆ. ಪರಿಹಾರ ಕೊಡಿ ಎಂದು ಕೇಳಿದರೆ, ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿ ರೈತರಿಗೆ ಸ್ಪಂದನೆ ನೀಡಿಲ್ಲ ಎಂದು ರೈತ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ, ಪರಿಸರ ಇಲಾಖೆಗೂ ರೈತ ದೂರು ನೀಡಿದ್ದಾರೆ. ಆದರೇ ಯಾರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ನಮಗೆ ಪರಿಹಾರ ನೀಡಬೇಕು ಇಲ್ಲದಿದ್ದರೆ ನಾನು ಕಾರ್ಖಾನೆ ಮುಂದೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರೈತ ತಮ್ಮ ದುಃಖ ಹೋರಹಾಕುತ್ತಾರೆ.

ರೈತ ಮಲ್ಲಪ್ಪ ಮತ್ತೊಬ್ಬ ರೈತನ ಬಳಿ ವರ್ಷಕ್ಕೆ 75 ಸಾವಿರ ಕೊಟ್ಟು ಐದು ಎಕರೆ ಲಾವಣಿ ಮೇಲೆ ಪಡೆದಿದ್ದಾರೆ. ನಾಲ್ಕು ಎಕರೆಯಲ್ಲಿ ಸೇವಂತಿ ಒಂದು ಎಕರೆಯಲ್ಲಿ ಚಂಡು ಹೂವನ್ನು ಬೆಳೆದಿದ್ದಾರೆ.‌ ಪ್ರತಿ ಎಕರೆಗೆ ಕನಿಷ್ಠ ಒಂದುವರೆ ಲಕ್ಷ ಖರ್ಚು ಮಾಡಿದ್ದಾರಂತೆ ರೈತ. ಆದರೆ, ಸುಂದರವಾಗಿ ಬೆಳೆದ ಹೂವಿಗೆ ನಿತ್ಯ ನಿರಂತರವಾಗಿ ಕೇಶವ ಸಿಮೆಂಟ್ ಕಾರ್ಖಾನೆಯ ಧೂಳು ಸೇವಂತಿ ಹಾಗೂ ಚಂಡು ಹೂವು ಮೇಲೆ ಬೀಳುತ್ತಿದ್ದು, ಸೇವಂತಿ ಹೂಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿದೆ. ಹೂವಿನ ಸೈಜ್ ಕೂಡ ಚಿಕ್ಕದಾಗಿದೆ. ಹೂವು ಕಪ್ಪು ಬಣ್ಣಕ್ಕೆ ತಿರುಗಿದ್ದು, ಮಾರುಕಟ್ಟೆಯಲ್ಲಿ ಇವರ ಹೂವನ್ನು ಖರೀದಿಸಲು ಯಾರು ಮುಂದೆ ಬರುತ್ತಿಲ್ಲ. ಐದು ಎಕರೆಗೆ ಸಂಬಂಧಪಟ್ಟಂತೆ ಸುಮಾರು 8 ಲಕ್ಷ ರೂಪಾಯಿ ಇವರಿಗೆ ಹಾನಿಯಾಗಿದ್ದು, ಸೂಕ್ತ ಪರಿಹಾರ ಕೊಡಬೇಕೆಂದು ರೈತ ಆಗ್ರಹಿಸುತ್ತಿದ್ದಾರೆ.

ಈ ಸಮಸ್ಯೆ ಮಲ್ಲಪ್ಪ ಕುರಿ ರೈತರದ್ದು, ಮಾತ್ರವಲ್ಲ, ಅಕ್ಕ ಪಕ್ಕದಲ್ಲಿರುವ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಕೂಡ ಸಿಮೆಂಟ್ ಕಾರ್ಖಾನೆಯ ದೋಳಿಗೆ ಬಲಿಯಾಗಿವೆ. ಇದರಿಂದ ಲೋಕಾಪುರ ಗ್ರಾಮದ ರೈತರು ಕಾರ್ಖಾನೆಯ ವಿರುದ್ದ ತಿರುಗಿ ಬಿದ್ದಿದ್ದಾರೆ.

ಕಾರ್ಖಾನೆ ಧೂಳಿನಿಂದ ಕನಿಷ್ಠ ಎಂದರೂ ಎರಡು ನೂರರಿಂದ ಎರಡುವರೆ ನೂರು ಎಕರೆ ಹಾಳಾಗುತ್ತಿದೆ. ರೈತರಿಗೆ ಕಾರ್ಖಾನೆಗಳು ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಪರಿಹಾರ ಕೇಳಿದರೆ ಇಂದು-ನಾಳೆ ಹಾಗೂ ಮಾಲೀಕರು ವಿದೇಶದಲ್ಲಿದ್ದಾರೆ ಎಂದು ಸಬೂಬು ನೀಡುತ್ತಿದ್ದಾರೆ. ಈ ಬಗ್ಗೆ ರೈತರು ಗರಂ ಆಗಿದ್ದು, ಕಾರ್ಖಾನೆ ಆಡಳಿತ ಮಂಡಳಿಗೆ ಎರಡು ದಿನ ಕಾಲಾವಕಾಶ ಕೊಡುತ್ತೇವೆ. ರೈತರಿಗೆ ಸೂಕ್ತ ಪರಿಹಾರ ಕೊಡದಿದ್ದರೆ ಕಾರ್ಖಾನೆ ಬಂದ್ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...