ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

Date:

ರಾಜ್ಯದ ಪ್ರಬಲ ಸಮುದಾಯವಾದ ಪಂಚಮಸಾಲಿ ಸಮಾಜದಲ್ಲಿ ಆಂತರಿಕ ಕಲಹಗಳು ತಾರಕಕ್ಕೇರಿದ್ದು, ಕೂಡಲಸಂಗಮ ಪೀಠ ಹಾಗೂ ಸಮಾಜದ ಮೇಲೆ ಹಿಡಿತ ಸಾಧಿಸಲು ಎರಡು ಗುಂಪುಗಳ ನಡುವೆ ತಿಕ್ಕಾಟ ಏರ್ಪಟ್ಟಿದೆ.

ಕೂಡಲಸಂಗಮ ಪೀಠದ ಭವಿಷ್ಯ ನಿರ್ಧರಿಸಲು ಬಾಗಲಕೋಟೆಯಲ್ಲಿ ಏಪ್ರಿಲ್‌ 19ರಂದು ಅಖಿಲ ಭಾರತ ಪಂಚಮಸಾಲಿ ಸಮಾಜ ಟ್ರಸ್ಟ್ ಕರೆದಿದ್ದ ಸಭೆ, ಏಪ್ರಿಲ್‌ 20ರಂದು ಪೀಠಾಧ್ಯಕ್ಷ ಬಸವಜಯಮೃತ್ಯಂಜಯ ಸ್ವಾಮೀಜಿ ಕರೆದಿದ್ದ ಸಭೆಗಳು ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿವೆ. ಆದರೆ, ಸಮಾಜದ ನಾಯಕರೊಳಗಿನ ಅಸಮಾಧಾನ ಶಮನವಾಗಿಲ್ಲ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಬೇಕು ಎಂಬ ಹೋರಾಟವು ರಾಜಕೀಯ ಮೇಲಾಟಕ್ಕೆ ಬಳಕೆಯಾಗುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ, ಕಾಂಗ್ರೆಸ್‌ ಶಾಸಕರು ಹೋರಾಟದ ನೇತೃತ್ವ ವಹಿಸಿದ್ದರು. ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರು. ಈಗ ಕಾಂಗ್ರೆಸ್‌ ಸರ್ಕಾರ ಆಡಳಿತವಧಿಯಲ್ಲಿ ಬಿಜೆಪಿ ಶಾಸಕರು ಹೋರಾಟದ ಮುಂಚೂಣಿಯಲ್ಲಿದ್ದರೆ, ಕಾಂಗ್ರೆಸ್‌ ಶಾಸಕರು ಅಂತರ ಕಾಯ್ದುಕೊಂಡಿದ್ದಾರೆಂಬ ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿಗಾಗಿ ಹೋರಾಟಕ್ಕಿಳಿದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರವಾಗಿತ್ತು. ಅಲ್ಲಿಂದಲೇ ಸಮಾಜದೊಳಗೆ ತಿಕ್ಕಾಟ ತೀವ್ರವಾಗಿತ್ತು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯೊಂದಿಗೆ ಹೋರಾಟ ತಾರಕಕ್ಕೇರಿದೆ.

ಶಾಸಕ ಬಸನಗೌಡ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ್ದನ್ನು ಖಂಡಿಸಿ ಕೂಡಲಸಂಗಮ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಬಹಿರಂಗವಾಗಿ ಹೋರಾಟದ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸ್ವಾಮೀಜಿ ಪರ, ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಪೀಠದಿಂದ ಅವರನ್ನು ಕೆಳಗಿಳಿಸುವ ಯತ್ನವೂ ನಡೆದಿವೆ ಎನ್ನಲಾಗಿದೆ.

ಪಂಚಮಸಾಲಿ ಸಮಾಜ ದೊಡ್ಡದಿದೆ. 80 ಲಕ್ಷ ಜನಸಂಖ್ಯೆ ಇದೆ. ದೊಡ್ಡ ಜನಸಂಖ್ಯೆಗೆ ಮೂರು ಪೀಠ ಸಾಕಾಗಲ್ಲ. ಇನ್ನೂ ಎರಡು ಪೀಠ ಮಾಡುತ್ತೇವೆಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳುತ್ತಿದ್ದಾರೆ.

ಏಪ್ರಿಲ್‌ 19ರಂದು ಕರೆದಿದ್ದ ಸಭೆಯನ್ನು ಮಾಜಿ ಸಚಿವ ಎ ಬಿ ಪಾಟೀಲ ಮತ್ತು ಕೆಲ ಪ್ರಮುಖರ ಕೋರಿಕೆಯಂತೆ ಮುಂದೂಡಲಾಗಿದೆ. ಶೀಘ್ರದಲ್ಲೇ ಕೂಡಲಸಂಗಮದಲ್ಲಿ ಸಭೆ ಕರೆಯಲಾಗುವುದೆಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಜಿ+1 ಮನೆಗಳನ್ನು ವಿತರಣೆ ಮಾಡದಿದ್ದರೆ ಪುರಸಭೆ ಎದುರು ಧರಣಿ ನಡೆಸಲಾಗುವುದು: ಬಸವರಾಜ ಪೂಜಾರ ಎಚ್ಚರಿಕೆ

ಪಂಚಮಸಾಲಿ ಸಮಾಜದ ಮೊದಲ ಪೀಠ ಹರಿಹರದಲ್ಲಿದೆ. ರಾಜಕೀಯ ಮೇಲಾಟದ ಕಾರಣಕ್ಕೆ ಕೂಡಲಸಂಗಮದಲ್ಲಿ ಎರಡನೇ ಪೀಠ ಆರಂಭವಾಯಿತು. ಎರಡನೇ ಪೀಠದ ಸ್ವಾಮೀಜಿ ತಮಗೆ ಸಮರ್ಪಕವಾಗಿ ಸ್ಪಂದಿಸಲಿಲ್ಲವೆಂಬ ಕಾರಣಕ್ಕೆ ಕೆಲ ರಾಜಕಾರಣಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರಿನಲ್ಲಿ ಮೂರನೇ ಪೀಠ ಸ್ಥಾಪಿಸಿದರು.

“ಕೂಡಲಸಂಗಮ ಪೀಠದಿಂದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೆಳಗಿಳಿಸಿದರೆ ಅಲ್ಲಿಯೇ ಜಾಗ ತೆಗೆದುಕೊಂಡು ಮತ್ತೊಂದು ಪೀಠ ಸ್ಥಾಪಿಸಲಾಗುವುದು” ಎಂದು ಮಾಜಿ ಸಚಿವ ಸಿ ಸಿ ಪಾಟೀಲ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...