ಬಾಗಲಕೋಟೆ | ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯ ಜೀವಂತಿಕೆ ಸಾಧ್ಯ: ಸಾಹಿತಿ ಭೀಮಾಶಂಕರ

Date:

ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ಲಾಭಕೋರ ಸಂಸ್ಕೃತಿಯ ಕಾಲಘಟ್ಟದಲ್ಲಿ ಮಾನವೀಯತೆಯು ಅವನತಿ ಹೊಂದುತ್ತಿರುವ ದುಗುಡವನ್ನು ಮಹಾಂತೇಶ ಪಾಟೀಲ ಅವರು ತಮ್ಮ ಕವಿತೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ಬಸವಕಲ್ಯಾಣದ ಸಾಹಿತಿ ಭೀಮಾಶಂಕರ ಬಿರಾದಾರ ಅಭಿಪ್ರಾಯಪಟ್ಟರು.

ನವ ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯು ಮುಧೋಳನ ಬಿವಿವಿಎಸ್ ಸಂಸ್ಥೆಯ ಎಸ್ ಆರ್ ಕಂಠಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಯುವ ಸಾಹಿತಿ- ಸಾಹಿತ್ಯಾನುಸಂಧಾನ’ ಸಮಾರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ಲೇಖಕ ಮಹಾಂತೇಶ ಪಾಟೀಲ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಸಾಂಸ್ಕೃತಿಕ ಯಜಮಾನಿಕೆ ಪ್ರಶ್ನಿಸುವ, ಅಧಿಕಾರದ ಹಲವು ಮುಖಗಳನ್ನು ಸೂಕ್ಷ್ಮವಾಗಿ ಅರಿಯಲು ಸಾಹಿತ್ಯದ ಗಂಭೀರ ಅನುಸಂಧಾನ ಅಗತ್ಯ ಎಂದು ಹೇಳಿದರು.

“ಜಾಗತೀಕರಣ, ಮುಕ್ತ ಮಾರುಕಟ್ಟೆ, ಬಂಡವಾಳಶಾಹಿ ಸೇರಿದಂತೆ ಹಲವು ಪ್ರಭುತ್ವಗಳು ಜನ ಬದುಕನ್ನು ಹೇಗೆ ನಿಯಂತ್ರಿಸುತ್ತವೆ. ಎಷ್ಟೆಲ್ಲ ಸಂದಿಗ್ಧತೆಗೆ ಕಾರಣವಾಗಿವೆ ಎಂಬುದನ್ನು ಮಹಾಂತೇಶ ಪಾಟೀಲ ಅವರ ಕವಿತೆಗಳು ಧ್ವನಿಸುತ್ತವೆ. ಜನಮುಖಿಯಾಗದ ಯೋಜನೆಗಳು, ರಾಜಕಾರಣದ ಹಲವು ತಂತ್ರಗಳು, ಲೋಕೋದ್ಧಾರದ ಸೂತ್ರಗಳೆಂಬ ಕಣ್ಕಟ್ಟುಗಳು ಹೇಗೆ ಜನರ ಬದುಕಿನ ಸೂತ್ರ ತಪ್ಪಿಸುತ್ತದೆ ಎಂಬುದುರ ಕುರಿತು ಪಾಟೀಲರ ಕಾವ್ಯ ಮಾತನಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಧುನಿಕೋತ್ತರ ಚಿಂತನೆಗಳು, ಪರಿಸರವಾದಿ ತತ್ವಗಳು ತಮ್ಮ ವಿಮರ್ಶೆಗೆ ಪರಿಕರಗಳಾಗಿ ಹಳಗನ್ನಡ ಮತ್ತು ಆಧುನಿಕ ಕನ್ನಡ ಸಾಹಿತ್ಯದ ಪಠ್ಯಗಳನ್ನು ವಿಮರ್ಶಿಸುವಾಗ ಬಳಸಿದ್ದಾರೆ. ‘ಬೆಳಕು ಬೆಳೆಯುವ ಹೊತ್ತು’ ಕೃತಿಯ ಮೂಲಕ ಕನ್ನಡಕ್ಕೆ ಮಹಾಂತೇಶ ಪಾಟೀಲ ಅವರು ಭರವಸೆಯ ವಿಮರ್ಶೆಕರಾಗಿ ಸಿಕ್ಕಿದ್ದಾರೆ” ಎಂದರು.

ಇದನ್ನೂ ಓದಿ: ಬಾಗಲಕೋಟೆ | ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರಿನ ಸಾಹಿತಿ ಸಂಗಮೇಶ ಗಣಿ, ಚೇತನ್ ನಾಗರಾಳ, ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಮಂಡಳಿ ಸದಸ್ಯ ಡಾ. ವಿಜಯಕುಮಾರ ಕಟಗಿಹಳ್ಳಿಮಠ, ಕವಿ-ವಿಮರ್ಶಕ ಮಹಾಂತೇಶ ಪಾಟೀಲ, ಪ್ರಾಂಶುಪಾಲ ಪ್ರೊ. ಎಂ ಆರ್
ಜರಗುಂಟಿ, ಡಾ. ಮಹಾಂತೇಶ ಪಾಟೀಲ, ಪ್ರೊ. ಎಸ್ ಎಸ್ ಬಿರಾದಾರ, ಡಾ. ಪ್ರಹ್ಲಾದ ಕೆ, ಪ್ರೊ. ಆರ್ ಆರ್ ಮಾಲಿಪಾಟೀಲ, ಪ್ರೊ. ಡಿ ಬಿ ಕುಂಬಾರ, ಪ್ರೊ. ವಿ ಎಮ್ ಕಿತ್ತೂರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...