ಬಾಗಲಕೋಟೆ | ಲೋಕಾಪುರ ಸವದತ್ತಿ ರೈಲುಮಾರ್ಗ ನಿರ್ಮಾಣಕ್ಕೆ ಆಗ್ರಹ

Date:

ಉತ್ತರ ಕರ್ನಾಟಕದಲ್ಲಿಯೇ ಶಕ್ತಿ ದೇವತೆ ಹಾಗೂ ಈ ಭಾಗದ ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಲೋಕಾಪುರ-ಸವದತ್ತಿ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಕರ್ನಾಟಕದ ಜನರು ಈ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಕರ್ನಾಟಕ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ ಮನವಿ ಮಾಡಿದರು.

ಬಾಗಲಕೋಟೆ ನಗರದ ಚರಂತಿಮಠ ಸಮುದಾಯ ಭವನದಲ್ಲಿ ಲೋಕಾಪುರ-ರಾಮದುರ್ಗ-ಸವದತ್ತಿ ಯಲ್ಲಮ್ಮ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಹೋರಾಟ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

“ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣಕ್ಕಾಗಿ ಹೋರಾಟದ ಆಂದೋಲನವೇ ನಡೆದಿತ್ತು. ಇದಕ್ಕೆ ಜಿಲ್ಲೆಯ ಪ್ರತಿಯೊಬ್ಬರೂ ಬೆಂಬಲ ನೀಡಿ, ಹೋರಾಟದಲ್ಲಿ ಭಾಗಿಯಾಗಿದ್ದರು. ಕರ್ನಾಟಕದ ಅಭಿವೃದ್ಧಿಯ ಜೀವನಾಡಿಯಾಗಲಿದೆ. ಅದೇ ಮಾದರಿಯಲ್ಲಿ ಲೋಕಾಪುರ-ಧಾರವಾಡ ಮಾರ್ಗ ನಿರ್ಮಾಣ ಹೋರಾಟ ನಡೆಯಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಭಾಗಕ್ಕೆ ಅನುಕೂಲ ಆಗಲಿರುವ ಈ ಮಾರ್ಗ ಅನುಷ್ಠಾನಗೊಂಡರೆ, ಉತ್ತರ ಕರ್ನಾಟಕ ಜಿಲ್ಲೆಯ ಜನ ಪಕ್ಷಾತೀತ, ಜಾತ್ಯತೀತವಾಗಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ವಕೀಲ ಜೆ ಜೆ ಕುಲಕರ್ಣಿ ಮಾತನಾಡಿ, “ಧಾರವಾಡದ ಹೈಕೋರ್ಟ್ ಪೀಠಕ್ಕೆ ತೆರಳಲು ವಕೀಲರು, ಜನರಿಗೆ, ಪ್ರವಾಸಿಗರಿಗೆ, ಈ ಮಾರ್ಗ ಬಹಳಷ್ಟು ಅನುಕೂಲವಾಗಲಿದೆ. ಮುಧೋಳ ತಾಲೂಕು ಕೈಗಾರಿಕೆಯ ನಾಡಾಗಿದೆ. ಸರಕು ಸಾಗಾಣಿಕೆಗೆ ರೈಲು ಅನುಕೂಲವಾಗಲಿದೆ. ಹಾಗಾಗಿ ರೈಲುಮಾರ್ಗ ಶೀಘ್ರ ಕಾರ್ಯರೂಪಕ್ಕೆ ಬಂದರೆ ರೈತರಿಗೆ ಸಹಕಾರಿಯಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬಹುರಾಷ್ಟ್ರೀಯ ಕಂಪನಿಗಳಿಂದ ಆಹಾರ ಸಾರ್ವಭೌಮತೆ ಕಸಿಯುವ ಹುನ್ನಾರ : ಸಿ. ಯತಿರಾಜು

ವಕೀಲ ರಾಜು ಮನ್ನಿಕೇರಿ ಮಾತನಾಡಿ, “ರಾಮದುರ್ಗ ಭಾಗದಲ್ಲಿ ಶಬರಿ ಕೊಳ, ಶಿರಸಂಗಿ ಕಾಳಮ್ಮ ದೇವಿ, ಶಿವನ ಮೂರ್ತಿ ಸೇರಿದಂತೆ ಇನ್ನೂ ಹಲವಾರು ಐತಿಹಾಸಿಕ ತಾಣಗಳಿದ್ದು, ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೈಲು ಮಾರ್ಗದಿಂದ ಅನುಕೂಲವಾಗುತ್ತದೆ” ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಧರ್ಮಂತಿ, ರಾಮದುರ್ಗದ ಹೋರಾಟಗಾರ ಅಭಿಷೇಕ ತಳ್ಳಿಕೇರಿ, ಗೈಬು ಜೈನುಖಾನ್, ಡಾ. ಯಾದವಾಡ, ದಾದಾಪೀರ ಕೆರೂರ, ಪ್ರೇಮಾ ರಾಠೋಡ, ರೇಣುಕಾ ನ್ಯಾಮಗೌಡರ, ಮಂಜುಳಾ ಭೂಸಾರೆ, ಮೈನುದ್ದಿನ ಖಾಜಿ, ಸುಭಾಸ್‌ಚಂದ್ರ ಘೋಡಕೆ, ಬಿಬಿಜಾನ ತಾಳಿಕೋಟಿ, ಎ ಆರ್ ಪಠಾಣ, ಡಿ ಎಫ್ ಹಾಜಿ ಮುಂತಾದವರು ದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...