ಬಾಗಲಕೋಟೆ | ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯ

Date:

ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ಸಂಘಟನೆ, ಕಾಂಗ್ರೆಸ್‌ನ ಹಿಂದುಳಿದ ಘಟಕದಿಂದ ಮುಧೋಳ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಸರ್ಕಲ್‌ನಿಂದ ತಹಶೀಲ್ದಾರ್‌ ಕಚೇರಿವರೆಗೆ ಪಾದಯಾತ್ರೆ ತೆರಳಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಮಾತನಾಡಿ, “ಜಾತಿ ಜನಾಂಗದ ಸಬಲೀಕರಣದ ಗುರಿ ಹೊಂದಲು ಮತ್ತು ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಗೊಳಿಸಲು ʼಕಾಂತರಾಜ ಆಯೋಗದ ವರದಿʼ ಜಾರಿಗೆ ತರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಿಂದ ಸಂಘಟನೆಗಳ ಅಧ್ಯಕ್ಷ ಗೋವಿಂದ ಕೌಲಗಿ ಮಾತನಾಡಿ, “ರಾಜ್ಯದಲ್ಲಿ ಅತಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕ ಸಬಲೀಕರಣಕ್ಕಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ಜಾತಿಗಣತಿ ಜಾರಿ ಮಾಡುವ ಮೂಲಕ ಇತಿಹಾಸದ ಪುಟದಲ್ಲಿ ತಮ್ಮ ಹೆಸರು ಉಳಿಯುತ್ತದೆ. ಹಿಂಜರಿಯದೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಗಳಿಗೆ ಸದಾ ನಾವು ಬೆಂಬಲಸುತ್ತ ಬಂದಿದ್ದೇವೆ, ಮುಂದೆಯೂ ಕೂಡ ನಿಮ್ಮ ಬೆಂಬಲಕ್ಕೆ ಗಟ್ಟಿಯಾಗಿ ನಿಂತು ಹೋರಾಡುತ್ತೇವೆ” ಎಂದು ಮನವಿ ಮಾಡಿಕೊಂಡರು.

ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟದ ನಿರ್ದೇಶಕ ಲಕ್ಷ್ಮಣ ಮಾಲಗಿ ಮಾತನಾಡಿ, “ಸಮಾಜದಲ್ಲಿ ಹಿಂದುಳಿದ ವರ್ಗಗಳು ಪ್ರಬಲವಾದ ರಾಜಕೀಯ, ಆರ್ಥಿಕವಾಗಿ ವಾಣಿಜ್ಯೋದ್ಯಮದಲ್ಲಿ ಧ್ವನಿ ಹೊಂದಲು ಕಾಂತರಾಜ ಆಯೋಗದ ವರದಿ ಕೂಡಲೇ ಜಾರಿಗೆ ಬಂದರೆ ಮಾತ್ರ ಸಮಾನತೆ ಮತ್ತು ನ್ಯಾಯವನ್ನು ಸಾಧಿಸಲು ಸಾಧ್ಯ” ಎಂದು ನುಡಿದರು. 

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಸ್‌ಬಿಯುಡಿಎ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ: ಇಮ್ರಾನ್

“ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನಿಮ್ಮ ಬದ್ಧತೆಗೆ ಹಿಂದುಳಿದ ವರ್ಗದ ಜನರು ತಮ್ಮನ್ನು ಬೆಂಬಲಿಸುತ್ತ ಬಂದಿದೆ. ಸದಾ ನಿತ್ಯವೂ ನಿಮ್ಮ ಜತೆಗೆ ನಿಲ್ಲುತ್ತೇವೆ. ಯಾವುದೇ ಕಾರಣದಿಂದ ಜಾತಿ ಜನಗಣತಿಯಿಂದ ಹಿಂದೆ ಸರಿಯದೆ ಜಾರಿ ಮಾಡಿ ಅನುಷ್ಠಾನ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯನವರ ಮೇಲೆ ಅಚಲವಾದ ನಂಬಿಕೆಯಿದೆ” ಎಂದು ಕಾಂಗ್ರೆಸ್ ಮುಖಂಡ ಸಂಗಪ್ಪ ಇಮ್ಮನವರ ಹೇಳಿದರು.‌

ಕಾಂಗ್ರೆಸ್‌ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಶೇಪಿಕ ಬೇಪಾರಿ ಗಣೇಶ ಮೇತ್ರಿ, ಅಹಿಂದ ಉಪಾಧ್ಯಕ್ಷ ಜಾವೇದ ಹವಾಲ್ದಾರ, ರವಿ ರೊಡ್ಡಪ್ಪನವರ, ಲಕಪ್ಪ ಕರೊಲಿ, ಶಿವಾನಂದ ಮ್ಯಾಗೇರಿ, ಶಿದ್ದಣ್ಣ ಬಾಡಿಗೆ, ಯಲ್ಲಪ್ಪ ಗಳಕಣವರ, ಮಲ್ಲಿಕಾರ್ಜುನ ಬಡಿಗೇರ, ಶಿವಪ್ಪ ಡೊಳ್ಳಿ, ನೂರಲ್ಲಿ ಶೇಖ, ಸಂಗಪ್ಪ ಅಮೋತಿ, ಲಕ್ಷ್ಮಣ ಮರಡಿ, ಸುರೇಶ್ ಸಿದ್ದಾಪುರ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...