ಬಾಗಲಕೋಟೆ | ಭೂಸ್ವಾಧೀನ ಹಿಂಪಡೆಯುವಂತೆ ರೈತರ ಒತ್ತಾಯ

Date:

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಜೆ.ಟಿ ಪಾಟೀಲ ಮನವಿ ಸಲ್ಲಿಸಿದ್ದಾರೆ.

ಶಾಸಕರಾಗಿ ಆಯ್ಕೆಯಾದ ಬಳಿಕ ಹಲಕುರ್ಕಿ ಗ್ರಾಮದ ನೂರಾರು ರೈತರು ಪಾಟೀಲ ಅವರನ್ನು ಬಾಗಲಕೋಟೆ ಐಬಿಯಲ್ಲಿ ಭೇಟಿಯಾಗಿ ತಮ್ಮ ಗ್ರಾಮದ ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸಬೇಕೆಂದು ಮನವಿ ಸಲ್ಲಿಸಿದ್ದರು. ಈ ಮನವಿ ಸ್ವೀಕರಿಸಿದ ಶಾಸಕ ಜೆ ಟಿ ಪಾಟೀಲ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಖುದ್ದು ಭೇಟಿಯಾಗಿ ಹಲಕುರ್ಕಿ ರೈತರ ಭಾವನೆಗಳನ್ನು ಅವರ ಗಮನಕ್ಕೆ ತಂದು ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸಲು ವಿನಂತಿಸುವುದಾಗಿ ಭರವಸೆ ನೀಡಿದ್ದರು.

ಆರು ತಿಂಗಳುಗಳ ಹಿಂದೆ ರೈತರು ಭೂಸ್ವಾಧೀನ ವಿರುದ್ಧ ಹೋರಾಟ ಆರಂಭಿಸಿದಾಗ ಜೆ‌ ಟಿ ಪಾಟೀಲ ಅವರು ಮೊದಲ ದಿನದಿಂದಲೂ ರೈತರ ಜತೆಗಿದ್ದು ಬೆಂಬಲ ವ್ಯಕ್ತಪಡಿಸಿದ್ದರು. ಅಂದು ವಿರೋಧ ಪಕ್ಷದ ನಾಯಕರಾಗಿದ್ದ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಲಕುರ್ಕಿ ರೈತರು ಬಾದಾಮಿಯಲ್ಲಿ ಭೇಟಿಯಾಗಿ ಮನವಿ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಭರವಸೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಮಗ್ರ ಅಭಿವೃದ್ಧಿಗೆ 21 ಅಂಶಗಳ ಪ್ರಸ್ತಾವನೆ ಸಲ್ಲಿಕೆ

ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದರು. ಈಗ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನಾಯಕರ ಮೇಲೆ ಭರವಸೆ ಇಟ್ಟು ಹಲಕುರ್ಕಿ ಗ್ರಾಮದ ಮತದಾರರು ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲಕುರ್ಕಿ ಗ್ರಾಮದ ರೈತರು ಭೂಸ್ವಾಧೀನ ಪ್ರಕ್ರಿಯೆ ರದ್ದಾಗುತ್ತದೆ. ನೆಮ್ಮದಿಯ ನಿಟ್ಟುಸಿರು ಬಿಡುವ ದಿನಗಳು ಹತ್ತಿರದಲ್ಲಿವೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...