ಬಾಗಲಕೋಟೆ | ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ವಿರುದ್ಧ ರೈತರ ಪ್ರತಿಭಟನೆ

Date:

ವಿದ್ಯುತ್ ಖಾಸಗೀಕರಣ ಮತ್ತು ಮೀಟರ್ ಅಳವಡಿಕೆಯಿಂದ ಭರಿಸಲಾಗದ ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿ, ವಿದ್ಯುತ್ ಸಂಪರ್ಕಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು

ಬಾಗಲಕೋಟೆ ಜಿಲ್ಲೆಯ ಮುಧೋಳ್‌ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಿಂದ ಪ್ರಾರಂಭಿಸಿ ಹೆಸ್ಕಾಂ ಕಚೇರಿ ಎದುರು ಸುಮಾರು ನಾಲ್ಕು ಗಂಟೆಗಳ ಕಾಲ ಮಳೆಯಲ್ಲೇ ಧರಣಿ ಸತ್ಯಾಗ್ರಹ ನಡೆಸಿದರು.

ಕಬ್ಬು ಬೆಳೆಗಾರರ ​​ಸಂಘದ ಅಧ್ಯಕ್ಷ ದುಂಡಪ್ಪ ಯರಗಟ್ಟಿ ಮಾತನಾಡಿ, “ಸರ್ಕಾರ ರೈತರನ್ನು ಆಧಾರ್ ಲಿಂಕ್ ಹೆಸರಿನಲ್ಲಿ ರೈತರ ವಿರುದ್ಧ ಪಿತೂರಿ ಮಾಡುತ್ತಿದೆ. ಸರ್ಕಾರ ಆಧಾರ ನೋಂದಣಿ ಮಾಡುವುದನ್ನು ಕೂಡಲೇ ಕೈಬಿಡಬೇಕು” ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ರೈತ ಸಂಘದ ಜಿಲ್ಲಾಧ್ಯಕ್ಷ  ಬಸವಂತ ಕಾಂಬಳೆ  ಮಾತನಾಡಿ, “ಅಧಿಕಾರಿಗಳ ರೈತರಿಗೆ ಆಗುವ ನಷ್ಟ ಕಷ್ಟಗಳ ಬಗ್ಗೆ ಸ್ವವಿವರವಾಗಿ ಹೇಳುವ ಮೂಲಕ ಅಧಿಕಾರಿಗಳ ಗಮನ ಸೆಳೆದು ಇದು ಸಾಂಕೇತಿಕ ಪ್ರತಿಭಟನೆಯಾಗಿದೆ. ಕದ್ದುಮುಚ್ಚಿ ನೋಂದಣಿ ಕಾರ್ಯ ಮುಂದುವರೆದರೆ ರೈತರು ತೀವ್ರ ಹೋರಾಟಕ್ಕೆ ಇಳಿಯಬೇಕಾದೀತು” ಎಂದು ಎಚ್ಚರಿಕೆ ನೀಡಿದರು.

ಹೆಸ್ಕಾಂ ಅಧಿಕಾರಿ ಮಂಜುನಾಥ್ ಮಾತನಾಡಿ, “ಸರ್ಕಾರ ಆದೇಶದಂತೆ ಆಧಾರ್ ನೋಂದಣಿ ಕಾರ್ಯ ಮಾಡುತ್ತಿದ್ದೇವೆ. ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರದ ಆದೇಶ ಪಾಲನೆ ಮಾಡುತ್ತೇವೆ. ತಾತ್ಕಾಲಿಕವಾಗಿ ಆಧಾರ್ ನೋಂದಣಿ ಕಾರ್ಯವನ್ನು ಸಹಿತಗೊಳಿಸುತ್ತಿದ್ದೇವೆ” ರೈತ ಪ್ರತಿಭಟನಾಕಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಸೆ.1ರಿಂದ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ರಾಷ್ಟ್ರವ್ಯಾಪಿ ಅಭಿಯಾನ

ಕರ್ನಾಟಕ ರಾಜ್ಯ ರೈತಸಂಘ, ಹಸಿರು ಸೇನೆ ಕಬ್ಬು ಬೆಳೆಗಾರರ ಸಂಘದ ಪ್ರಮುಖರಾದ ನಾಗೇಶ್ ಸೊರಗಾಂವಿ, ಹನುಮಂತ ನಬಾಬ, ಮಹೇಶ್ ಪಾಟೀಲ, ಶಿವಪ್ಪ ಚೌದರಿ, ನಾಗೇಶ್ ಗೋಲಶೆಟ್ಟಿ ಮಾತನಾಡಿದರು.

ಕಲ್ಮೇಶ್ ಹಣಗುಜಿ, ಬಸುಮೇತ್ರಿ, ಮುದ್ದೇಶ ಗಾಯಕವಾಡ ಸೇರಿದಂತೆ ಮುಂತಾದ ರೈತ ನಾಯಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...