ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

Date:

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ ಹಾಗೂ ಬಾಗಲಕೋಟೆ ತಾಲೂಕಿನ ಕೆಲ ಊರುಗಳಲ್ಲಿ ಪ್ರವಾಹ ಪರಸ್ಥಿತಿ ಮುಂದುವರಿದಿದೆ. ಕೃಷ್ಣೆಯ ಹಿನ್ನೀರಿನ ಒತ್ತಡವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಕೃಷ್ಣಾ ನದಿಗೆ 2.60 ಲಕ್ಷಕ್ಕಿಂತ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಬೀಳಗಿ ತಾಲೂಕಿನ ಅನಗವಾಡಿ, ಕಾತರಾಕಿ ಬಳಿ ಕೃಷ್ಣೆಯ ಹಿನ್ನೀರು ಒತ್ತುತ್ತಿರುವುದರಿಂದ ಘಟಪ್ರಭಾ ನದಿ ನೀರು ವೇಗವಾಗಿ ಮುಂದೆ ಸಾಗದೆ ಪ್ರವಾಹ ಸ್ಥಿತಿ ಯಥಾಸ್ಥಿತಿ ಮುಂದುವರಿಯಲು ಕಾರಣವಾಗುತ್ತಿದೆ.

ಯುಕೆಪಿ 3ನೇ ಹಂತದ ಯೋಜನೆಯಲ್ಲಿ ಮುಳುಗಡೆಗೆ ಗುರುತಿಸಿರುವ ಬೀಳಗಿ ತಾಲೂಕಿನ ಎಸ್ ಕೆ ಕೊಪ್ಪ, ಚಿಕ್ಕಾಲಗುಂಡಿ, ಮುಧೋಳ ತಾಲೂಕಿನ ಆಲಗುಂಡಿ ಬಿ ಕೆ, ಜನ್ನೂರು, ಮಾಚಕನೂರ, ಬುದ್ನಿ ಬಿ ಕೆ, ಚಿಕ್ಕೂರ,ಬದ್ನೋರ, ಭಂಟನೂರ, ಹೆಬ್ಬಾಳ, ಕೆ ಡಿ ಬುದ್ನಿ, ಚಿಚಖಂಡಿ, ರೋಗಿ, ಜಂಬಗಿ, ಗುಲಗಾಲ ಜಂಬಗಿ, ಮಳಲಿ ಗ್ರಾಮಗಳ ಬಳಿ ಕೃಷ್ಣಾ ಹಿನ್ನೀರು ಒತ್ತುತ್ತಿದೆ. ಇದರಿಂದ ಈ ಗ್ರಾಮಗಳಿಗೆ ನೀರು ಸುತ್ತುವರಿದಿದೆ. ಹೊಲಗಳಿಗೆ ಹೋಗುವ ಸಣ್ಣಪುಟ್ಟ ಕಾಲು ದಾರಿಗಳು ಬಂದ್ ಆಗಿವೆ. ಬೆಳಗಾವಿ ಜಿಲ್ಲೆಯಿಂದ ಘಟಪ್ರಭಾ ನದಿಗೆ 16,500 ಕ್ಯೂಸೆಕ್ ನೀರು ಹರಿದು ಬರುತ್ತದೆ. ತೀರದ ಮಿರ್ಜಿ ಬಳಿ ನೀರು ಇಳಿಮುಖವಾಗುತ್ತಾ ಸಾಗಿದೆ. 12 ಬ್ರಿಡ್ಜ್ ಕಂ ಬ್ಯಾರೇಜು ಹಾಗೂ ಕ್ಯಾದವಾಡ ಸೇತುವೆ ಜಲಾವೃತವಾಗಿರುವುದರಿಂದ ಸಂಚಾರ ಸ್ಥಗಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಚೆನ್ನಾಳದಿಂದ ಆಲಗುಂಡಿ ಬಿ ಕೆ ವರಿಗಿನ ನದಿ ತೀರದ ಗ್ರಾಮಗಳ ಜಮೀನು, ತೋಟದ ವಸತಿ, ಮನೆಗಳು ಜಲಾವೃತವಾಗಿವೆ. ಮಿರ್ಜಿ, ನಂದಗಂವಾ, ನಾಗರಹಾಳ ಬಳಿ ಸ್ವಲ್ಪ ಮಟ್ಟಿಗೆ ನೀರು ಇಳಿಮುಖವಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘಟಪ್ರಭಾ ನದಿಯಲ್ಲಿ ನೀರು ಇಳಿದಿದ್ದರೂ ಇದಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳು ಜಾಲವೃತವಾಗಿ ಮುಂದುವರೆದಿದೆ. ಇದೆ ರೀತಿ ನೀರು ಇಳಿಮುಖವಾದರೂ ಸೇತುವೆ ಮೇಲಿನ ಸಂಚಾರಕ್ಕೆ ಎರಡಮೂರು ದಿನ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...