ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಆಗಸ್ಟ್ ನಗರದ ಕಂದಗಲ್ ರಸ್ತೆಯಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಭೂಮಿ ಪೂಜೆ ನೆರವೇರಿಸಿದರು.
ಪೂಜೆ ನೆರವೇರಿಸಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶದ ಮಹಿಳಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಬಾಲಕಿಯರ ವಸತಿ ನಿಲಯವನ್ನು ಪ್ರಾರಂಭಿಸಿದ್ದೆವು. ಅದರಂತೆ ಹೆಚ್ಚುವರಿ ಕೊಠಡಿ ಹಾಗೂ ನವೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದೇವೆ” ಎಂದು ಹೇಳಿದರು.
“ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಮಾಡಲು ಈ ಕೊಠಡಿಗಳು ಅನುಕೂಲವಾಗಲಿವೆ. ದಲಿತ ಸಮುದಾಯದ ವಿದ್ಯಾರ್ಥಿನಿಯರು ಹಾಸ್ಟೆಲ್ಗಳ ಕೊರತೆಯಿಂದ ಅವರ ಶಿಕ್ಷಣ ಕುಂಠಿತಗೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಸತಿನಿ ಲಯಗಳು ಬಹುಮುಖ್ಯ ಪಾತ್ರ ವಹಿಸಲಿವೆ. ದಲಿತ ಸಮುದಾಯದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮುಂದುವರೆಸಿ ಸಮಾಜದಲ್ಲಿ ಉನ್ನತ ಕೊಡುಗೆ ನೀಡಲು ಮುಂದಾಗಬೇಕು” ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ
ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ಕಾಂಗ್ರೆಸ್ ಮುಖಂಡ ಶರಣಪ್ಪ ಅಮದಿಹಾಳ, ಜಬ್ಬಾರ, ಕಲಬುರಗಿ, ಮೆಹಬೂಬ್ ಸರಕಾವಸ್, ವಿಠ್ಠಲ್ ಜಕ್ಕಾ, ಸುರೇಶ್ ಜಂಗ್ಲಿ, ಅಮೃತ್ ಬಿಜ್ಜಲ್, ಮೌಲೇಶ್ ಬಂಡಿವಡ್ಡರ್, ಎಂ ಎಚ್ ಕಟ್ಟಿಮನಿ, ಮಹೆಬೂಬ್ ಗದ್ವಾಲ್, ಮಲ್ಲು ಮಡಿವಾಳರ್, ಹನುಮನಾಳ ಮಹಾಂತೇಶ, ಟಿಪ್ಪು ಸುಲ್ತಾನ್ ಭಂಡಾರಿ, ರಾಜು ಬನ್ನಿಗೋಳ ಹಾಗೂ ನಗರಸಭೆ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು, ಮಹಿಳಾ ಕಾಂಗ್ರೆಸ್ ಪಕ್ಷದ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.





