ಬಾಗಲಕೋಟ | ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಕಠಿಣ ಕ್ರಮ: ಸಚಿವ ಆರ್ ಬಿ ತಿಮ್ಮಾಪುರ

Date:

ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದರು.

ಬಾಗಲಕೋಟೆ ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಡಾ. ಜಗಜೀವ್ನ್ ರಾಂ ಸಮುದಾಯ ಭವನದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

“ಸರ್ಕಾರಿ ಆಸ್ಪತ್ರೆಗಿಂತ ಖಾಸಗಿ ಆಸ್ಪತ್ರೆಯಲ್ಲಿಯೇ ಹೆಚ್ಚು ಹೆರಿಗೆಗಳಾಗುತ್ತಿವೆ. ಖಾಸಗಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಗಿಂತ ಶಸ್ತ್ರಚಿಕೆತ್ಸೇ ಮೂಲಕ ಹೆರಿಗೆ ಹೆಚ್ಚಾಗುತ್ತಿವೆ” ಎಂದು ತಾಲ್ಲೂಕು ವೈದ್ಯಧಿಕಾರಿ ಡಾ. ಅಶೋಕ ಸೋರ್ವವಂಶಿ ಅವರನ್ನು ಪ್ರಶ್ನಿಸಿದಾಗ ನಮಗೆ ಸಿಬ್ಬಂದಿ ಕೊರೆತೆಯಿಂದ ಹೀಗೆ ಆಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ನಿಷ್ಕಳಾಜಿಯಿಂದ ಕೆಲಸ ಮಾಡಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಿಮ್ಮ ಜವಾಬ್ದಾರಿಯಿಂದ ನಾವು ಜನರಿಗೆ ಏನೂ ಉತ್ತರ ನೀಡಬೇಕು” ಎಂದು ಸಚಿವ ತಿಮ್ಮಾಪುರ ಆಕ್ರೋಶ ಹೊರಹಾಕಿದರು.

ಆಹಾರ ಇಲಾಖೆ ಶಿರಸ್ತೇದಾರ ಡಿ. ಬಿ. ದೇಶಪಾಂಡೆ ಮಾತನಾಡಿ, “ತಾಲೂಕಿನಲ್ಲಿ ಬಿಪಿಎಲ್ ಕಾರ್ಡ್ ಐವತೈದು ಸಾವಿರ ಇವೆ. 2011 ರ ಜನಗಣತಿ ಪ್ರಕಾರ ಅರವತ್ತೇರಡು
ಸಾವಿರ ಕುಟುಂಬಗಳಿದ್ದು, ಎಪ್ಪತೊಂದು ಸಾವಿರ ಪಡಿತರ ಚೀಟಿಗಳಿವೆ ಎಂದಾಗ, ಮನೆಯಲ್ಲಿ ಹೆಚ್ಚುವರಿ ಜನರು ಕಾರ್ಡ್ ಮಾಡಿಕೊಂಡಿದ್ದರ ಪರಿಣಾಮ ಚೀಟಿಗಳು ಹೆಚ್ಚಾಗಿವೆ. ಅದನ್ನು ಸರಿಪಡಿಸಬೇಕು” ಎಂದು ಸೂಚಿಸದರು.

ತಹಶೀಲ್ದಾರ ಮಹಾದೇವ ಸಣಮರಿ ಮಾತನಾಡಿ, “ತಾಲೂಕಿನಲ್ಲಿ ಆರವತ್ತನಾಲ್ಕು ಎಕರೆ ಅತಿಕ್ರಮಣ ಜಾಗವಿದೆ. ನಗರಸಭೆ ವ್ಯಾಪ್ರಿಯಲ್ಲಿ ಮೂರು ಎಕರೆ ಕೆರೆಗಳ ಪೈಕಿ ಎರಡು ಕೆರೆ ಅತಿಕ್ರಮಣವಾಗಿವೆ. ಅತಿಕ್ರಮಣ ಜಾಗದಲ್ಲಿ ನೂರಾರು ಕುಟುಂಬಗಳು ವಾಸವಾಗಿವೆ. ಅದನ್ನು ಸರ್ವೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ವೇತಾ ಬೇಡಕರ, ತಾಲೂಕು ಪಂಚಾಯಿತಿ ಉಸ್ತುವಾರಿ ಅಧಿಕಾರಿ ಉಕ್ಕಲಿ, ಕೃಷ್ಣ ಮೇಲ್ದಂಡೆ ಯೋಜನೆ ಹೆಚ್ಚುವರಿ ಜಿಲ್ಲಾಧಿಕಾರಿ ರಜಪೂತ, ತಾಲೂಕು ಪಂಚಾಯಿತಿ ಇಓ ಉಮೇಶ್ ಸಿದ್ದಾಳ್, ಕೆಡಿಪಿ ನಾಮ ನಿರ್ದೇಶಕ ಸದಸ್ಯರಾದ ಮುತ್ತಪ್ಪ ಗಣಿ, ಬಸವರಾಜ ಹುಗ್ಗಿ, ಸುರೇಶ ಕುರಿ, ಅಮಜದ್ಖಾನ್ ಜಮಾದಾರ, ರೇಣುಕಾ ತುಬಾಕೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...