ಬಾಗಲಕೋಟೆ | ಸರ್ಕಾರಿ ಕಾಲೇಜು ಮೈದಾನದಲ್ಲಿ ಅಕ್ರಮ ಕೃಷಿ, ಕಟ್ಟಡ ನಿರ್ಮಾಣ; ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

Date:

ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಸರ್ಕಾರ ಎಷ್ಟು ಪ್ರಾಮುಖ್ಯತೆ ಕೊಟ್ಟಿರುತ್ತದೆಯೋ, ಅಷ್ಟೆ ಪ್ರಾಮುಖ್ಯತೆಯನ್ನು ಕ್ರೀಡೆಗೂ ಕೊಟ್ಟಿರುತ್ತದೆ. ಹಾಗಾಗಿ ಪ್ರತಿಯೊಂದು ಸರ್ಕಾರಿ ಕಾಲೇಜುಗಳಲ್ಲಿ ವಿ‌ದ್ಯಾರ್ಥಿಗಳಿಗೆ ಕ್ರೀಡೆಗೋಸ್ಕರ ವಿಶಾಲವಾದ ಆಟದ ಮೈದಾನ ಇರುತ್ತದೆ. ಆದರೆ ಈ ಆಟದ ಮೈದಾನವನ್ನು ಹೊರಗಿನ ಖಾಸಗಿ ವ್ಯಕ್ತಿಗಳು ಜಮೀನನ್ನಾಗಿ ಮಾರ್ಪಡಿಸಿಕೊಂಡು ಅದರಲ್ಲಿ ಕೃಷಿ ಮಾಡುತ್ತಿದ್ದುದರಿಂದ ವಿದ್ಯಾರ್ಥಿಗಳಿಗೆ ಆಟದ ಮೈದಾನ ಇದ್ದೂ ಇಲ್ಲದಂತಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಬಾಲಕರ ಸರ್ಕಾರಿ ಪಿ ಬಿ ಕಾಲೇಜಿನಲ್ಲಿ‌ ಇಂತಹ ಘಟನೆ ನಡೆದಿದೆ. ವಿದ್ಯಾರ್ಥಿಗಳು ಆಟ ಆಡುವ ಮೈದಾನವನ್ನು ಹೊರಗಿನ ಖಾಸಗಿ ವ್ಯಕ್ತಿಗಳು ಕೃಷಿಗೆ ಬಳಕೆ ಮಾಡಿಕೊಂಡು ಲಾಭ ಪಡೆಯುತ್ತಿದ್ದಾರೆ. ಇದರಿಂದ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ.

ಆರ್ಥಿಕವಾಗಿ ಹಿಂದುಳಿದ, ಗ್ರಾಮೀಣ ಹಾಗೂ ಪಟ್ಟಣದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ನೂರು ವರ್ಷಗಳ ಹಿಂದೆಯೇ ಜಮಖಂಡಿ ಸಂಸ್ಥಾನದ ಮಹಾರಾಜರು ಪಟ್ಟಣದಲ್ಲಿ ಶಾಲಾ ಕಾಲೇಜನ್ನು ಸ್ಥಾಪನೆ ಮಾಡಿದ್ದರು. ಅದುವೇ ಪಿ ಬಿ ಕಾಲೇಜು. ಆದರೆ ಈ ಕಾಲೇಜು ಈಗ ಹೊರಗಿನ ಖಾಸಗಿ ವ್ಯಕ್ತಿಗಳಿಂದ ವಿದ್ಯಾರ್ಥಿಗಳ ಪಾಲಿಗೆ ಕ್ರೀಡೆ ಎಂಬುದು ಮರೀಚಿಕೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜು ಮೈದಾನ 1

ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರ ಬೇಜವಾಬ್ದಾರಿತನದಿಂದಾಗಿ ಕಾಲೇಜಿನ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕೃಷಿ ಮಾಡುತ್ತಿದ್ದಾರೆ. ಕಟ್ಟಡ ಕಟ್ಟಿತ್ತಿದ್ದಾರೆ. ಈ ಕುರಿತು ಪ್ರಾಚಾರ್ಯರಲ್ಲಿ ಪ್ರಶ್ನಿಸಿದರೆ ಅವರು ಯಾವುದೇ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದಾರೆ.

ಆಟದ ಮೈದಾನವನ್ನು ಕೃಷಿ ಪ್ರದೇಶವಾಗಿ ಮಾಡಿಕೊಂಡಿರುವವರು ಕಾಲೇಜಿನ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದು, “ಕೃಷಿ ಜಾಗಕ್ಕೆ ಕಾಲಿಟ್ಟರೆ ಕಾಲನ್ನೇ ಕತ್ತರಿಸುತ್ತೇವೆಂದು ಬೆದರಿಸುತ್ತಿದ್ದಾರೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತಂದರೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ” ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಬಿರಾದಾರ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಕುರಿತು ನಮ್ಮ ಗಮನಕ್ಕೆ ಬಂದಿದ್ದು, ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೃಹತ್ ಭೂ ಹಗರಣ | ಒತ್ತಾಯದ ಲೋಕಾಯುಕ್ತ ದಾಳಿ; ತನಿಖೆಗೆ ಸಿಪಿಐಎಂ ಆಗ್ರಹ

ಜಮಖಂಡಿ ಶಾಸಕ ಜಗದೀಶ ಗುಡಗಿಂಟಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಿಷಯದ ಕುರಿತು ಕಾಲೇಜಿನಿಂದ ಮಾಹಿತಿ ಪಡೆದು ಖಂಡಿತವಾಗಿ ಸೂಕ್ತ ಕ್ರಮ ತಗೆದುಕೊಳ್ಳುವೆ” ಎಂದು ಭರವಸೆ ನೀಡಿದ್ದಾರೆ.

“ಇಲ್ಲಿಯ ಅಧಿಕಾರಿಗಳು, ಶಾಸಕರು, ಸರ್ಕಾರಿ ಪಿ ಬಿ ಕಾಲೇಜು ಮೈದಾನ ಜಾಗವನ್ನು ಖಾಸಗಿ ವ್ಯಕ್ತಿಗಳಿಂದ ಬಿಡಿಸಿ ಸರ್ಕಾರಿ ಜಾಗವನ್ನು ಉಳಿಸಿಕೊಳ್ಳುವತ್ತ ಮುಂದಾಗಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...