ಬಾಗಲಕೋಟೆ | ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಿ: ಕರವೇ ಶಿವರಾಮೇ ಗೌಡ ಬಣ ಆಗ್ರಹ

Date:

ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇ ಗೌಡ ಬಣದ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ರಾಜ್ಯದ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದರು.

ಕರವೇ ಕಾರ್ಯಕರ್ತರೊಂದಿಗೆ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಅವರು ಮಾತನಾಡಿದರು.

ಕ ರ ವೇ ರಾಜ್ಯ ವಕ್ತಾರ ಬಿ.ಎಂ.ಪಾಟೀಲ ಮಾತನಾಡಿ, ಜಾಗತಿಕವಾಗಿ ವಿದ್ಯೆ ಉದ್ಯೋಗವನ್ನು ಪಡೆಯಲು ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ. ಕೌಶಲ್ಯ ಮತ್ತು ಇತರ ವೃತ್ತಿಪರ ತರಬೇತಿ ಗಳನ್ನು ಪಡೆಯಲು ಆಂಗ್ಲಭಾಷೆ ಬೇಕೇ ಬೇಕಾಗುತ್ತದೆ. ಆಂಗ್ಲಭಾಷೆಯನ್ನು ಕೇವಲ ವ್ಯವಹಾರಿಕವಾಗಿ ಮಾತ್ರ ಬಳಸಲು ಕಲಿಯಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡವನ್ನು ಅನ್ನದ ಭಾಷೆಯಾಗಿ ತಪ್ಪದೇ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ರಾಜ್ಯ ಸರ್ಕಾರ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರತಿಯೊಬ್ಬ ವಿದ್ಯಾವಂತ ಮಕ್ಕಳಿಗೆ ಉದ್ಯೋಗದ ಅವಶ್ಯಕತೆ ಇದ್ದು ಕನ್ನಡ ಭಾಷೆಯಲ್ಲಿ ಉದ್ಯೋಗ ಪಡೆಯುವುದು ಕಷ್ಟದ ಕೆಲಸವಲ್ಲ. ಅನ್ಯ ಭಾಷೆಯ ಮೋಹಕ್ಕೆ ಬಲಿಯಾಗುವ ಅವಶ್ಯಕತೆ ನಮ್ಮ ನಾಡಿನ ಮಕ್ಕಳಿಗೆ ಬೇಕಾಗಿಲ್ಲ. ಆದ್ದರಿಂದ ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಬರಬೇಕು ಎಂದು ಹೇಳುವ ಮೂಲಕ ಅನ್ಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೋರಾಟಗಾರರ ಒತ್ತಾಯಕ್ಕೆ ಮಣಿದು ಅಲ್ಲಿನ ಸರ್ಕಾರಗಳು ದ್ವಿಭಾಷಾ ನೀತಿ ಅನುಸರಿಸಲು ಮುಂದಾಗಿದ್ದು, ನಮ್ಮನ್ನಾಳುವ ಕರ್ನಾಟಕ ಸರ್ಕಾರ ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಪ್ರತಿಭಟನೆಯಲ್ಲಿ ಸಂತೋಷ ಚಿನಿವಾಲ, ಶರಣು ಗಾಣಿಗೇರ ಗಣೇಶ ನಾಯಕ, ಸಂಜು ಗೌಡರ, ವಿಷ್ಣು ಬಾರಕೇರ ಸಾದೀಕ್ ತಾಳಿಕೋಟಿ, ಮಂಜುಳಾ ಅಂಗಡಿ, ಕಸ್ತೂರಿ ಮೆಹರವಾಡೆ, ಶಬಾನಾ ಲಿಂಗಸೂರ, ಶ್ರೀನಿವಾಸ ಮಾರಾ, ಸೋಹೈಲ್ ಸುತಾರ, ಶಂಕರ ಕುರಿ, ನಿಂಬಯ್ಯ ಕುಲಕರ್ಣಿ, ಗುರುನಾಥ ಜಾವಡಗಿ, ಅಭಿಷೇಕ ಮಾದರ, ಪವನ್ ಶಿವಯೋಗಿ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...