ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

Date:

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ.

ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ ಮಾರ್ಚ್‌ನಲ್ಲಿ ಬೇಸಿಗೆಯ ಉರಿ ಆರಂಭವಾದರೆ, ಈ ಬಾರಿ ಮಳೆಯಾಗದೇ ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ ಜನರನ್ನು ಸುಡುತ್ತಿದೆ.

ಜಿಲ್ಲೆಯಲ್ಲಿ ಪ್ರತಿ ನಿತ್ಯ 35ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಇನ್ನೂ ಬೇಸಿಗೆಯ ದಿನಗಳು ಆರಂಭವಾದರೆ ಈ ಧಗೆ ಇನ್ನೂ ಹೆಚ್ಚಾಗಬಹುದು ಎನ್ನುತ್ತಾರೆ ಸ್ಥಳೀಯರು. ಬಿಸಿಲಿನಿಂದಾಗಿ ಮಧ್ಯಾಹ್ನ 12 ಗಂಟೆ ನಂತರ ನಗರದ ರಸ್ತೆಯಲ್ಲಿ ಜನ ಸಂಚಾರ ದಿನೇ ದಿನೆ ವಿರಳವಾಗುತ್ತಿದೆ. ದೇಹವನ್ನು ತಂಪಾಗಿರಿಸಲು ಜನರು ತಂಪುಪಾನೀಯಗಳ ಮೊರೆಹೋಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಸಿಗೆಯಲ್ಲಿ ಮನೆಯಲ್ಲಿ ನೀರು ತಂಪಾಗಿರಿಸಲು ಮಾರುಕಟ್ಟೆಯಲ್ಲಿ ಮಣ್ಣಿನ ವಸ್ತುಗಳ ಮಾರಾಟ ಆರಂಭವಾಗಿದೆ. ಬಡವರ ಫ್ರಿಡ್ಜ್ ಎಂದು ಕರೆಸಿಕೊಳ್ಳುವ ಮಣ್ಣಿನ ಮಡಕೆ, ಹರವೆ ಮತ್ತು ಕೆಂಪು ಮಣ್ಣಿನ ಕೊಡಗಳಿಗೆ ಬೇಡಿಕೆ ಹೆಚ್ಚಾಗಿದೆ. ಮನೆಯಲ್ಲಿ ನೀರನ್ನು ತಂಪಾಗಿರಿಸಲು ಕೆಲವರು ಮಣ್ಣಿನ ಪಾತ್ರೆಗಳ ಖರೀದಿಗೆ ಮೊರೆಹೋಗಿದ್ದಾರೆ.

ಮಣ್ಣಿನ ಪಾತ್ರೆಗಳು ಮಾರಾಟವಾಗುತ್ತಿರುವುದರಿಂದ ಕುಂಬಾರರ ಮೊಗದಲ್ಲಿ ಕೊಂಚ ಸಂತಸ ಮೂಡಿದ್ದು, ಕಪ್ಪು ಮಣ್ಣಿನ ಹರವಿ 150ರೂ.ದಿಂದ 200 ರೂ.ಗೆ ಮಾರಾಟವಾಗುತ್ತಿವೆ. ಕೆಂಪು ಮಣ್ಣಿನ ಕೊಡ 250ರೂ.ಯಿಂದ 400ರೂ.ವರೆಗೂ ತನಕ ಮಾರಾಟವಾಗುತ್ತಿವೆ ಎನ್ನುತ್ತಿದ್ದಾರೆ ಕುಂಬಾರರು.

ಒಟ್ಟಿನಲ್ಲಿ ಬೇಸಿಗೆಯ ಬಿಸಿಗೆ ಸಾಕಾಗಿರುವ ಜನ ದೇಹವನ್ನು ತಂಪಾಗಿಡಲು ನಾನಾ ಮಾರ್ಗಗಳನ್ನು ಹುಡುಕುತ್ತಿದ್ದು, ಮಣ್ಣಿನ ಮಡಿಕೆಗಳಿಗೆ ಬೆಲೆಬಂದಿದೆ. ಇದು ಕುಂಬಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...