ಬಾಗಲಕೋಟೆ | ಆರು ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ: ರೈತರಿಗೆ ಅನ್ಯಾಯ; ಆರೋಪ

Date:

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ರೈತರಿಗೆ ತಲುಪದೇ ಇರುವ ಬೆಳವಣಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಬೆಳಕಿಗೆ ಬಂದಿದೆ.

“ರೈತರಿಗೆ ಅನುಕೂಲ ಆಗಲೆಂದು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸರ್ಕಾರ ರೈತರಿಗೆ ಕೆಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇಲಾಖೆಯ ಮೂಲಕ ರೈತರಿಗೆ ತಲುಪಿಸುವಂತಹ ಕೆಲಸ ಮಾಡಲು ಸೂಚಿಸಿದೆ. ಕೆಲ ಅಧಿಕಾರಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಸರ್ಕಾರಿ ಯೋಜನೆಗಳನ್ನು ರೈತರಿಗೆ ತಲುಪಿಸದೆ ದಿಕ್ಕು ತಪ್ಪಿಸುವಂಥ ಕೆಲಸ ಮಾಡಿದ್ದಾರೆ” ಎಂದು ನೊಂದ ರೈತ ಶ್ರೀಶೈಲ ದಳವಾಯಿ ಆರೋಪಿಸಿದ್ದಾರೆ.

“ರೈತರ ಹೆಸರಿನಲ್ಲಿ ಮಂಜೂರಾದ ಯೋಜನೆಯನ್ನು ರೈತರಿಗೆ ತಲುಪಿಸದೆ ಬೀಳಗಿಯ ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಅನ್ಯಾಯ ಎಸಗಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2018ರಲ್ಲಿ ಜನರಲ್ ಸ್ಕೀಮ್‌ನಡಿ ಬೀಳಗಿ ಪಟ್ಟಣದ ರವಿ ಶಿವನಗೌಡ ಪಾಟೀಲ್, ಶ್ರೀಶೈಲ ರಾಮಣ್ಣ ದಳವಾಯಿ, ಸೋಮಯ್ಯ ಸಿದ್ದಯ್ಯ ಪರಡಿಮಠ, ರಾಮಪ್ಪ ಶಿವಪ್ಪ ಕಣ್ಣಿ ಎಂಬ ನಾಲ್ಕು ಮಂದಿ ರೈತರಿಗೆ ʼಟ್ರಾನ್‌ಫಾರ್ಮರ್‌ ಸರ್ಕ್ಯೂಟ್‌ʼ(ಟಿಸಿ) ಸಹಿತ ವಿದ್ಯುತ್ ಸಂಪರ್ಕ ಮಾಡಿಕೊಡಲು ಆದೇಶ ಆಗಿತ್ತು. 2018ರಲ್ಲಿ ಬೀಳಗಿ ಹೆಸ್ಕಾಂ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ಎ ಎಚ್ ಅತ್ತಾರ ಮತ್ತು ಪ್ರತಿಭಾ ನಾವಲಗಿ ಇವರುಗಳು ಈಗಾಗಲೇ, ರೈತರ ಹೆಸರಿನಲ್ಲಿ ಅಂದಾಜು ₹9 ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯುತ್ ಸಲಕರಣೆಗಳನ್ನು ಖರೀದಿಸಿದ್ದಾರೆ” ಎಂದು ಹೇಳಿದರು.

ಎಸ್ಕಾಂನಿಂದ ಅನ್ಯಾಯ

“ವಿದ್ಯುತ್‌ ಸಂಪರ್ಕಕ್ಕೆ ಸಲಕರಣಗಳನ್ನು ಸಂಪರ್ಕಿಸಿ ಸುಮಾರು 6 ವರ್ಷ ಕಳೆದರೂ ಕೂಡ ಈವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ನೆಪ ಮಾತ್ರಕ್ಕೆ ಕೆಲವೆಡೆ ಕಂಬಗಳನ್ನು ನಿಲ್ಲಿಸಿದ್ದಾರೆ. ಈವರೆಗೂ ಸಂಪರ್ಕ ಕಲ್ಪಿಸಿಲ್ಲ. ಟಿಸಿ ಅಳವಡಿಸಿಲ್ಲ. ಹಾಗಾದರೆ ವಿದ್ಯುತ್ ಸಲಕರಣೆಗಳನ್ನು ಖರೀದಿಸಿದ್ದು ಯಾರಿಗೆ? ಆ ಟಿಸಿ ವಿದ್ಯತ್ ಸಲಕರಣೆಗಳು ಎಲ್ಲಿ ಹೋದವು? ಸುಮಾರು 6 ವರ್ಷ ಕಳೆಯುತ್ತ ಬಂದರೂ ಅಧಿಕಾರಿಗಳು ಮೌನ ವಹಿಸಿದ್ದು ಯಾಕೆ? ಎಂಬುದೇ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ಹಲವು ಬಾರಿ ಹೆಸ್ಕಾಂ ಇಲಾಖೆ ಕಚೇರಿಗೆ ಹೋಗಿ ಲೋಣಿಯವರಿಗೆ, ಎ ಎಚ್ ಅತ್ತಾರ ಮತ್ತು ಪ್ರತಿಭಾ ನಾವಲಗಿಯವರಿಗೆ ಕೇಳಿದರೆ ಮಾಡೋಣ, ನೋಡೋಣವೆಂದು ಹಾರಿಕೆ ಉತ್ತರ ನೀಡುತ್ತಿದ್ದಾರೆಯೇ ಹೊರತು ಕೆಲಸ ಮಾಡಿಕೊಡುತ್ತಿಲ್ಲ. 2018ರಿಂದ ಈವರೆಗೆ ಬೀಳಗಿ ಹೆಸ್ಕಾಂ ಇಲಾಖೆಗೆ ಬಹುತೇಕ ಅಧಿಕಾರಿಗಳು ಬಂದು ಕಾರ್ಯ ನಿರ್ವಹಿಸಿದ್ದಾರೆ. ಈ ವಿಷಯವನ್ನು ಅವರೆಲ್ಲರ ಗಮನಕ್ಕೂ ತಂದಿದ್ದೇವೆ. ಆದರೆ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಶೇ. 40ರಷ್ಟು ಬಡ್ಡಿ ದಂಧೆ; ಕ್ರಮಕ್ಕೆ ಮನವಿ

“ರೈತರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಿದ್ಯುತ್ ಸಲಕರಣೆಗಳನ್ನು ಬಿಡುಗಡೆ ಮಾಡಿದ್ದು, ರೈತರಿಗೆ ತಲುಪಿಸದೆ ದಿಕ್ಕು ತಪ್ಪಿಸಿದ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನೊಂದ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ರಾಮಣ್ಣ ಶಿವಪ್ಪ ಕಣ್ಣಿ, ಪ್ರಕಾಶ್ ಮಾನಿಂಗಪ್ಪ ಕಟಗೇರಿ, ಗುರುಲಿಂಗಯ್ಯ ಪರಡಿಮಠ ಸೇರಿದಂತೆ ಇತರರು ಇದ್ದರು.

ವರದಿ: ಈ ದಿನ.ಕಾಮ್ ಮೀಡಿಯಾ ಜರ್ನಲಿಸ್ಟ್ ರಾಜು ಬುಕಿಟಗಾರ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...