ಬಾಗಲಕೋಟ | ದಲಿತಪರ ಸಂಘಟನೆಗಳ ಒಕ್ಕೂಟ: ಜ. 20ರಂದು ಬಾಗಲಕೋಟೆ ಬಂದ್ ಕರೆ

Date:

“ದಲಿತ, ಹಿಂದುಳಿದ, ಅಲ್ಪಸಂಖ್ಯಾತರು, ಕಾರ್ಮಿಕರು, ಪ್ರಗತಿಪರ ರೈತರು, ಕನ್ನಡಪರ ಹಾಗೂ ಮಹಿಳಾ ಸಂಘಟನೆಗಳ ಮಹಾ ಒಕ್ಕೂಟದಿಂದ ಜ. 20ರಂದು ಬಾಗಲಕೋಟೆ ಬಂದ್‌ ಕರೆ ನೀಡಲಾಗಿದೆ” ಎಂದು ಪ್ರಗತಿಪರ ಚಿಂತಕ ಪರಶುರಾಮ ಮಹಾರಾಜನ್ ತಿಳಿಸಿದರು.

“ಡಾ.ಬಿ.ಆರ್.ಅಂಬೇಡ್ಕ‌ರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬಾಗಲಕೋಟ ಪಟ್ಟಣದ ನವನಗರದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಸಂಘ ಪರಿವಾರ ಹಾಗೂ ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನದ ವಿರುದ್ಧ ಮಾತನಾಡುವುದನ್ನು ನೋಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಕಾರಣಕ್ಕಾಗಿ ಇವರು ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಹುಸಿ ಪ್ರೇಮ ತೋರಿಸುತ್ತಿದ್ದಾರೆ. ಅವರ ಮನಸ್ಸಿನಲ್ಲಿ ಮನುವಾದ ತುಂಬಿಕೊಂಡಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಟ್ಟಣದ ಎಲ್ಲ ವ್ಯಾಪಾರಸ್ಥರು, ಸಂಘ-ಸಂಸ್ಥೆಗಳು, ಬೀದಿಬದಿ ವ್ಯಾಪಾರಸ್ಥರು, ಸಾರ್ವಜನಿಕರು ಬಂದ್‌ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಬೇಕು. ಇಡೀ ದಿನ ನವನಗರ, ವಿದ್ಯಾಗಿರಿ ಸೇರಿದಂತೆ ನಗರದೆಲ್ಲೆಡೆ ವ್ಯಾಪಾರಸ್ಥರು ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲಿಸಬೇಕು. ಬೆಳಗ್ಗೆ ನಗರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ನಂತರ ವಲ್ಲಭಭಾಯಿ ಚೌಕ್, ಟಾಂಗಾ ನಿಲ್ದಾಣ, ಎಂಜಿ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಸಾಗಿ ಹೊಳೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಗುವುದು” ಎಂದರು.

ಮುಖಂಡ ಪೀರಪ್ಪ ಮ್ಯಾಗೇರಿ ಮಾತನಾಡಿ, “ಡಾ. ಬಿ ಆರ್ ಅಂಬೇಡ್ಕರ್ ಅವರೇ ನಮ್ಮ ಉಸಿರು ಹಾಗೂ ದೇವರು. ಆ ದೇವರಿಗಿಂತ ಬೇರೆ ದೇವರು ನಮಗಿಲ್ಲ. ಅಂತವರ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವಮಾನ ಮಾಡಿರುವುದು ಇಡೀ ದೇಶದ ಎಲ್ಲ ದಲಿತ ಸಮುದಾಯವನ್ನು ಹಿಯಾಳಿಸಿದಂತಾಗಿದೆ. ಸಚಿವ ಸಂಪುಟದಿಂದ ಅವರನ್ನು ವಜಾ ಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಪತ್ರಿಕಾ ಗೋಷ್ಠಿಯಲ್ಲಿ ದಲಿತ ಮುಖಂಡರು ವೈ.ಸಿ. ಕಾಂಬಳೆ, ದ್ಯಾಮಣ್ಣ ಗಾಳಿ, ಹಾಜಿಸಾಬ್ ದಂಡಿನ, ಯುವರಾಜ ಬಂಡಿ, ಪ್ರೇಮನಾಥ, ಗರಸಂಗಿ, ಡಿ.ಬಿ.ಸಿದ್ದಾಪೂರ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...