ಬಾಗಲಕೋಟೆ | ಘೋಷಣೆಯಲ್ಲೇ ಉಳಿದ ವೈದ್ಯಕೀಯ ಕಾಲೇಜು; ಅನುದಾನ ನೀಡಲು ಆಗ್ರಹ

Date:

ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, “ಬಾಗಲಕೋಟೆ ಜಿಲ್ಲೆಗೆ 2014-15ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಮಾಡಿತ್ತು. ನಂತರ ಅಧಿಕಾರಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜಿಗೆ ಯಾವುದೇ ಅನುದಾನ ಬಿಡುಗಡೆ ಮಾಡಲಿಲ್ಲ. ಈ ಕಾರಣದಿಂದ ವೈದ್ಯಕೀಯ ಮಹಾವಿದ್ಯಾಲಯದ ನನೆಗುದಿಗೆ ಬಿದ್ದಿತು” ಎಂದು‌ ಅಸಮದಾನ ವ್ಯಕ್ತಪಡಿಸಿದರು.

“ಚುನಾವಣೆ ಪ್ರಚಾರದ ಸಂಧರ್ಭದಲ್ಲಿ ಮುಖ್ಯಮಂತ್ರಸಿ ಸಿದ್ದರಾಮಯ್ಯ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುದಾನ ಒದಗಿಸಿ ಗುದ್ದಲಿ‌ ಪೂಜೆಗೂ ಬರ್ತೀನಿ, ಹಾಗೆಯೇ ಉದ್ಘಾಟನೆಗೂ ನಾನೇ ಬರ್ತೀನಿ ಎಂದು ಭರವಸೆ ನೀಡಿದ್ದು ಮರೆತು ಹೋಯಿತೇ? ನಿಮಗೆ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಗೆ ನೀವು ಮಾಡುತ್ತಿರುವ ಪ್ರತ್ಯುಪಕಾರ ಏನು? ನಿಜವಾಗಿಯೂ ನೀವು ನುಡಿದಂತೆ ನಡೆದಿದ್ದೀರಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅನುದಾನ ಒದಗಿಸುತ್ತೇವೆ’ ಎಂದು ಭರವಸೆ ನೀಡಿದ್ದರು. ಬಾಗಲಕೋಟೆ ಜನರ ಆಶೀರ್ವಾದದಿಂದಲೂ ಕರ್ನಾಟಕದಲ್ಲಿ ನಿಮ್ಮದೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ, 2023-24 ಬಜೆಟ್‌ನಲ್ಲಿ ಬಾಗಲಕೋಟೆ ವೈದ್ಯಕೀಯ ಕಾಲೇಜಿಗೆ ಅನುದಾನ ಬಿಡುಗಡೆ ಮಾಡದೆ ಜಿಲ್ಲೆ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದ್ದೀರಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಕೂಡಲೇ ಗಮನಹರಿಸಿ ಪ್ರೊ. ನಂಜುಂಡಪ್ಪ ವರದಿಯಂತೆ ಹಿಂದುಳಿದಿರುವ ಮತ್ತು ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಾದ ಬಾಗ್ಯ ಬೇಟಗೇರಿ, ರಾಜೇಶ್ವರಿ, ಹಿರೇಮಠ, ಬಸವರಾಜ್ ಅಂಬಿಗೇರ, ಶಿವಾನಂದ ಲೆಕ್ಕನ್ನವರ, ರಾಚಪ್ಪ ಸನದಿ, ದಾದಾಪೀರ್ ಶಿವಳ್ಳಿ, ಹುಚ್ಚಪ್ಪ ಯಡಹಳ್ಳಿ, ಮಂಜುನಾಥ ಯಡಹಳ್ಳಿ, ಹಸನ್ ಕಲಕ‌ಬಂಡಿ ಹಾಗೂ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...