ಬಾಗಲಕೋಟೆ | ತಮ್ಮ ಸ್ವಾರ್ಥಕ್ಕೆ ಹಿಂದುಳಿದ, ದಲಿತ ಸಮುದಾಯಗಳ ಬಳಕೆ: ಕೆ ಎಸ್‌ ಈಶ್ವರಪ್ಪ ವಿರುದ್ಧ ಆರೋಪ

Date:

ಶರಣರ ನಾಡಿನಲ್ಲಿ ಕೆ ಎಸ್ ಈಶ್ವರಪ್ಪನವರು ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಯುವರೈತ ಮುಖಂಡ ಡಾ. ಯಲ್ಲಪ್ಪ ಹೆಗಡೆ ಆರೋಪಿಸಿದರು.

ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈಶ್ವರಪ್ಪನವರು ಪ್ರಸಕ್ತ ಹಿಂದುಳಿದ, ದಲಿತ ಹಾಗೂ ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳು ಮತ್ತು ಸವಾಲುಗಳ ಚಿಂತನ-ಮಂಥನ ಸಭೆ ಮಾಡುವ ಬದಲು, ಪ್ರಸಕ್ತ ರಾಜಕಾರಣದಲ್ಲಿ ಕೆ ಎಸ್ ಈಶ್ವರಪ್ಪನವರ ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಚಿಂತನ-ಮಂಥನ ಸಭೆ ಮಾಡಿದರೆ ಉಪಯುಕ್ತವಾಗುತ್ತಿತು” ಎಂದು ಟೀಕಿಸಿದರು.

“ಶ್ಯಾಮ್ ಪ್ರಸಾದ್ ಮುಖರ್ಜಿಯವರ ರಾಜಕೀಯ ಸಿದ್ಧಾಂತ ಹೊಂದಿರುವ ತಾವು ಅಧಿಕಾರದಿಂದ ವಂಚಿತರಾದ ಕೂಡಲೇ ದೇವರಾಜ್ ಅರಸು, ಬುದ್ದ, ಬಸವ, ಅಂಬೇಡ್ಕರ್, ಚನ್ನಮ್ಮ, ರಾಯಣ್ಣ ಇನ್ನೂ ಮುಂತಾದ ಮಹನೀಯರ ಭಾವಚಿತ್ರಗಳನ್ನು ತಮ್ಮ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಬಳಸಿಕೊಂಡಿರುವುದು ಆಶ್ಚರ್ಯವಾಗುತ್ತದೆ. ಆದರೂ ಇದು ಸಂತಸದ ವಿಚಾರ. ಈ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಂಡು, ನಂತರ ಭಾವಚಿತ್ರಗಳನ್ನು ಬಳಸಿದ್ದಿದ್ದರೆ ಸೂಕ್ತವಾಗಿರುತ್ತಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಶ್ವರಪ್ಪನವರು ಅವಕಾಶವಾದಿ. ಸ್ಥಿರ ಮನಸ್ಥಿತಿಯ ನಾಯಕತ್ವವಿಲ್ಲ. ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆಯಲ್ಲಿಯೇ 2016ರಲ್ಲಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ಅರ್ಧಕ್ಕೆ ಬಿಟ್ಟರು. 2021ರಲ್ಲಿ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಹೋರಾಟ ಆರಂಭಿಸಿ ಅರ್ಧಕ್ಕೆ ಬಿಟ್ಟರು ಹಾಗೆಯೇ ನೀವು ಸ್ಥಾಪಿಸಲು ಉದ್ದೇಶಿಸಿರುವ ಬ್ರಿಗೇಡ್ ಸಂಘಟನೆಯ ಆಯುಸ್ಸು ಎಷ್ಟು ದಿನ” ಎಂದು ಪ್ರಶ್ನಿಸಿದರು.

“ಈಶ್ವರಪ್ಪನವರು ಬ್ರಿಗೇಡ್ ಸಂಘಟನೆಯನ್ನು ಕೂಡಲಸಂಗಮದಲ್ಲಿ ಉ‌ದ್ಘಾಟನೆ ಮಾಡುವ ಮೊದಲು ರಾಜ್ಯದಲ್ಲಿ ಪಶ್ಚತ್ತಾಪ ಯಾತ್ರೆ ಮಾಡಿ ಈವರೆಗೆ ನಡೆದ ತನ್ನ ಕೋಮು ದ್ವೇಷದ ನಡೆಗಳ ಬಗ್ಗೆ ಜನರ ಬಳಿ ಕ್ಷಮಾಪಣೆ ಕೇಳಲಿ. ನಿಮ್ಮ ಸ್ವಾರ್ಥಕ್ಕಾಗಿ ರಾಯಣ್ಣ ಮತ್ತು ಚನ್ನಮ್ಮಳನ್ನು ಒಂದು ಜಾತಿ ಮತ್ತು ಧರ್ಮಕ್ಕೆ ಸೀಮಿತಗೊಳಿಸಬೇಡಿ. ಅವರು ನಮ್ಮ ನಾಡಿನ ಸಮಸ್ತ ಜನರ ಆಸ್ತಿ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕುಂಟು ನೆಪ ಹೇಳದೆ ಒಳಮೀಸಲಾತಿ ಜಾರಿಯಾಗಲಿ: ಡಿ ಬಿ ಮಧುರ

“ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಇನ್ನುಳಿದ ಎಲ್ಲ ಸ್ವಾಮೀಜಿಗಳಲ್ಲಿ ನನ್ನ ಮನವಿ ಏನೆಂದರೆ, ಈಶ್ವರಪ್ಪನವರ ಕೈಯಲ್ಲಿ ಖಡ್ಗ ನೀಡಬೇಡಿ. ಸಂವಿಧಾನ ಪುಸ್ತಕ ಮತ್ತು ಶರಣರ ವಚನ ಸಾಹಿತ್ಯವನ್ನು ನೀಡಿ, ಈಶ್ವರಪ್ಪನವರು ರಾಜಕೀಯ ಸಂಧ್ಯಾ ಕಾಲದಲ್ಲಿ ಬದಲಾವಣೆಯಾಗಲಿ” ಎಂದು ಕೋರಿದರು.

ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಮುಧೋಳ ತಾಲೂಕು ಅಧ್ಯಕ್ಷ ಶೇಖರ್ ಕಾಂಬಳೆ, ಕೃಷ್ಣಾ ಮುಧೋಳ ಮತ್ತು ಸುರೇಶ ಕಿಲಾರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...