ಬಾಗಲಕೋಟೆ | ವಕ್ಫ್‌ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ

Date:

ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡಿರುವ ವಿಶ್ವದ ಅತಿ ದೊಡ್ಡ ಪ್ರಜಾ ಪಭುತ್ವ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ 2014 ರಿಂದ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ ಸರ್ಕಾರ ಒಂದು ನಿರ್ದಿಷ್ಟವಾದ ಸಮುದಾಯದ ಆಚರಣೆ, ಧಾರ್ಮಿಕ ವ್ಯವಸ್ಥೆಯ ಮೇಲೆ ಸಂವಿಧಾನದ ಆಶಯಕ್ಕೆ ವಿರೋಧವಾಗಿ ಧರ್ಮದ ಜನರನ್ನು ಹತ್ತಿಕ್ಕಲು ಹಾಗೂ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಿರಂತರವಾಗಿ ಪಯತ್ನ ಮಾಡುತ್ತಲೆ ಇದೆ. ಈ ಕಾರ್ಯಸೂಚಿಯ ಮುಂದುವರೆದ ಭಾಗವೇ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಎಂದು ಮೌಲಾನಾ ದಾವೂದ್ ಖಾಜಿ ಹೇಳಿದರು.

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಕರ್ನಾಟಕ ಮುಸ್ಲಿಂ ಯುನಿಟಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರತಿಭಟನೆ ಉದ್ದೇಶಿಸಿ ದಲಿತ ಮುಖಂಡ ಮಹದೇವ ಹಾದಿಮನಿ, ನ್ಯಾಯವಾದಿ ಸಂತೋಷ ಬಗಲಿ ಕೂಡ ಮಾತನಾಡಿದರು.

ಪ್ರತಿಭಟನಾ ರ್ಯಾಲಿಯು ಅಂಜುಮನ್ ಶಾದಿ ಮಹಲದಿಂದಾ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ್ ವೃತ್ತ ಹಾಗೂ ಗಾಂಧಿ ವೃತ್ತದ ಮಾರ್ಗದ ಮೂಲಕ ಘೋಷಣೆಗಳನ್ನು ಕೂಗುತ್ತ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 29 at 12.04.53 PM

“ಸಂವಿಧಾನವನ್ನು ಅನುಸರಣೆ ಮಾಡಿಕೊಂಡು ಜಾತ್ಯತೀತ ಮನೋಭಾವನೆಯಲ್ಲಿ ಗಟ್ಟಿಯಾದ ಸಾಮಾಜಿಕ ತಳಹದಿಯನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತವಾಗಿದೆ” ಎಂದು ದಲಿತ ಮುಖಂಡ ಮಹಾದೇವ ಹಾದಿಮನಿ ಹೇಳಿದರು.

“ನಮ್ಮ ದೇಶದ ವಕ್ಫ್ ಕಾಯ್ದೆಗೆ ಶತಮಾನದ ಇತಿಹಾಸ ಇದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕಾಯ್ದೆಯ ತಿದ್ದುಪಡಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಇಡೀ ವಕ್ಫ್ ಆಸ್ತಿಯನ್ನು ಸರ್ಕಾರದ ಹಿಡಿತಕ್ಕೆ ತೆಗೆದುಕೊಳ್ಳುವ ವ್ಯವಸ್ಥಿತವಾದ ಪಿತೂರಿ ನಡೆಸಿದೆ.‌ ಕಳೆದ ಹತ್ತು ವರ್ಷಗಳಲ್ಲಿ ದೇಶದ ಮುಸ್ಲಿಮರ ಸಾಮಾಜಿಕ ಅಭಿವೃದ್ಧಿಗೆ ಚಿಂತಿಸದ ಕೇಂದ್ರ ಸರ್ಕಾರ ಪೌರತ್ವ ಕಾಯಿದೆ, ವಿಶೇಷ ಸ್ಥಾನಮಾನ ರದ್ದತಿ, ಹಿಜಾಬ್, ಹಲಾಲ್ ಹೆಸರಿನಲ್ಲಿ ಮುಸ್ಲಿಮರನ್ನು ಸಮಾಜದ ಮುಖ್ಯ ವಾಹಿನಿಯಿಂದ ದೂರ ತಳ್ಳುವ ಪ್ರಯತ್ನ ಮಾಡುತ್ತಿದೆ. ಈಗ ಸಂಸತ್ತಿನಲ್ಲಿ ಅಂಗೀಕಾರವಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ 15,‌ 25, 26ನೇ ವಿಧಿ ಮತ್ತು ಧಾರ್ಮಿಕ ದತ್ತಿ ಕಾಯ್ದೆಗೆ ವಿರುದ್ಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಾಗಲಕೋಟೆ | ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಿ: ಮಹಾಂತೇಶ ಹಟ್ಟಿ

ಪ್ರತಿಭಟನೆಯಲ್ಲಿ ಅಬುಷಮಾ ಖಾಜಿ, ಕಾಸಿಮಲಿ ಗೋಟೆ, ಚಿನ್ನಪ್ಪ ಬಂಡಿವಡ್ಡರ,ದಾವೂದ್ ಖಾಜಿ, ಹಾಸಿಂಪಿರ್ ಮುಜಾವರ್, ಸಂತೋಷ್ ಬಗಲಿ, ಮೌಲಾನಾ ಅಬ್ದುಲವಹಾಬ್ ಖಾಜಿ,ಇರ್ಫಾನ್ ಅಥಣಿ, ಅಜೀಜ್ ಬಾಯಿಸರ್ಕಾರ್, ಸಾದಿಕ್ ಬಾಗವಾನ್ ಹಾಗೂ ಅಪಾರ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...