ಬಾಗಲಕೋಟೆ | ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಸ ಆ್ಯಂಬುಲೆನ್ಸ್‌

Date:

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆ್ಯಂಬುಲೆನ್ಸ್‌ಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ವೀಕ್ಷಣೆ ಮಾಡಿ ಮಾತನಾಡಿ, “ಹುನುಗುಂದ ಹಾಗೂ ಇಳಕಲ್ ಅವಳಿ ತಾಲೂಕಿಗೆ ಆ್ಯಂಬುಲೆನ್ಸ್ ಅವಶ್ಯಕತೆ ಇತ್ತು. ಇದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಆ್ಯಂಬುಲೆನ್ಸ್ ಒದಗಿಸುವಂತೆ ಮನವಿ ಮಾಡಿಕೊಂಡಾಗ ಅದಕ್ಕೆ ಸ್ಪಂದಿಸಿ ಅವಳಿ ತಾಲೂಕಿಗೆ ಎರಡು ನೂತನ ಆ್ಯಂಬುಲೆನ್ಸ್ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದರು.

“ಕಳೆದ ಐದಾರು ವರ್ಷಗಳಿಂದ ಸಾರ್ವಜನಿಕ ಮತ್ತು ಸಮುದಾಯದ ಆಸ್ಪತ್ರೆಗಳಿಗೆ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಮೂಲಸೌಕರ್ಯಗಳ ಕಾಮಗಾರಿಗಳಿಗೆ ಈಗಾಗಲೇ ಭೂಮಿ ಪೂಜೆ ಮಾಡಲಾಗಿದೆ. ಹುನಗುಂದ ತಾಲೂಕು, ಆಸ್ಪತ್ರೆಗೆ ತಾಯಿ-ಮಗು ಆಸ್ಪತ್ರೆಗೆ ಈಗಾಗಲೇ ಮಂಜೂರಾತಿ ದೊರೆತಿದೆ. ಹುನಗುಂದ ಸಾರ್ವಜನಿಕ ಆಸ್ಪತ್ರೆಯ ಕೆಲವು ಕೊಠಡಿಗಲ್ಲಿ ಕೆಳಗಿನಿಂದ ನೀರಿನ ಬುಗ್ಗೆಗಳು(ಸೆಲೆ) ಉಂಟಾಗಿದ್ದರಿಂದ, ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರ ರಿಪೇರಿ ಹಾಗೂ ಸುರಕ್ಷಿತವಾಗಿ ನಿರ್ಮಾಣಕ್ಕೆ ಕ್ರಮ ಹಾಗೂ ಶಿಥಿಲಾವಸ್ಥೆ ಕಟ್ಟಡಗಳನ್ನು ಪುನಃ ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನ.25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ

ಆರೋಗ್ಯ ಸಮಿತಿ ಉಪಾಧ್ಯಕ್ಷ ಶಿವಾನಂದ ಕಂಠಿ, ಸಂಜು ಜೋಶಿ, ಸಂಗಣ್ಣ ಗಂಜಿಹಾಳ, ವಿಜಯ ಗದ್ದನಕೇರಿ, ತಾಲೂಕು ವೈದ್ಯಧಿಕಾರಿ ಡಾ. ಎಸ್ ಎಸ್ ಅಂಗಡಿ, ಮುಖ್ಯ ವೈದ್ಯಾಧಿಕಾರಿ ಡಾ. ಮಂಜುನಾಥ ಅಂಕೋಲ್ಕರ, ಸಂಗಣ್ಣ ಅವಾರಿ, ರಫೀಕ್ ವಾಲಿಕಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...