ಬಾಗಲಕೋಟೆ | ನ.17ರ ಸಿಎಂ ಕಾರ್ಯಕ್ರಮಕ್ಕೆ ಮುತ್ತಿಗೆ: ಕಬ್ಬು ಬೆಳೆಗಾರರ ಎಚ್ಚರಿಕೆ

Date:

ಕಬ್ಬು ಬೆಳೆಗಾರರಿಗೆ ಬೆಂಬಲ‌ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ ರೈತ ಸಂಘದ ಮುಖಂಡ ಮುತ್ತಪ್ಪ ಕೋಮರ ಎಚ್ಚರಿಕೆ ನೀಡಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಸಕ್ಕರೆ ಕಾರ್ಖಾನೆಯ ಮಾಲೀಕರೊಂದಿಗೆ ಈ ಮೊದಲು ಮುಧೋಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಸಭೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಕಬ್ಬು ಬೆಳೆಗೆ ಬೆಂಬಲ‌ ಬೆಲೆ ನೀಡದೆ ಹೋದರೆ, ನ. 17ರ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಗೋದಾವರಿ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ₹3 ಸಾವಿರ ಬೆಲೆ ನೀಡುವುದಾಗಿ ಘೋಷಿಸಿದ್ದು ಅದನ್ನು ರೈತರು ಒಪ್ಪಿಕೊಳ್ಳುವುದಿಲ್ಲ. ಕನಿಷ್ಠ ಪ್ರತಿ ಟನ್‌ಗೆ ₹3,500 ನೀಡಬೇಕು. ಅದನ್ನು ಎಲ್ಲ ಕಾರ್ಖಾನೆಯವರು ಕೂಡಲೇ ಘೋಷಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮುಧೋಳ ಸೇರಿದಂತೆ ಎಲ್ಲೆಡೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತಿಂಗಳಿಂದ ಸಭೆ ನಡೆಸುವಂತೆ ಆಗ್ರಹಿಸುತ್ತಿದ್ದರೂ ಸಚಿವರೂ ರೈತರ ಪರವಾಗಿ ಬಾಯಿ ಬಿಡುತ್ತಿಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಕದ ಜಿಲ್ಲೆಗಳಿಂದ ಕಬ್ಬು ತರುವ ಕಾರ್ಖಾನೆಗಳವರು, ಕಬ್ಬು ಕಟಾವು, ಸಾಗಾಣಿಕೆಗಾಗಿ ಪ್ರತಿ ಟನ್‌ಗೆ ₹900 ರಿಂದ ₹1,000 ವಿಧಿಸುತ್ತಿದ್ದಾರೆ. ಇಲ್ಲಿಯವರೆಗೆ ಇಳುವರಿ ಪ್ರಮಾಣ ಅಳೆಯುವುದನ್ನು ರೈತರು ಕಂಡಿಲ್ಲ. ಮತ್ತು ಇಳುವರಿ ಪ್ರಮಾಣವೂ ಕಡಿಮೆ‌ ಆಗಿದೆ. ಇನ್ನು ಕಬ್ಬನ್ನು ನೆರೆ ಜಿಲ್ಲೆಗಳಿಂದ ತಂದರೂ ಅಧಿಕಾರಿಗಳು ಸುಮ್ಮನಿದ್ದು, ಕಾರ್ಖಾನೆಗಳೊಂದಿಗೆ ಶಾಮೀಲು ಆಗಿದ್ದಾರೆಂದು ಆರೋಪಿದರು.

ಮುಖಂಡ ಈರಪ್ಪ ಹಂಚಿನಾಳ ಮಾತನಾಡಿ, ಕಾರ್ಖಾನೆಯವರು ಹಿಂದಿನ ಬಾಕಿ ನೀಡಿಲ್ಲ. ವಾಣಿಜ್ಯ ಉದ್ದೇಶಕ್ಕೆ ಬಹುತೇಕ ಸಕ್ಕರೆ ಬಳಸಲಾಗುತ್ತದೆ. ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ ₹3,100 ಇದ್ದು, ಅದನ್ನು ₹4,100ಕ್ಕೆ ಏರಿಸಬೇಕು. ಬೆಂಬಲ ಬೆಲೆ ನಿಗದಿಯೂ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಸುದ್ಧಿಗೋಷ್ಠಿಯಲ್ಲಿ ಗೋವಿಂದಪ್ಪ ಮೆಟಗುಡ್ಡ, ಗಂಗಪ್ಪ ಮಾದರ, ಬಸವರಾಜ ಗೋನಾಳ, ರಾಜೇಂದ್ರ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...