ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

Date:

ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ ಕಿಸಾನ್ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ ಆಗ್ರಹಿಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕದ ಸಹಯೋಗದಲ್ಲಿ ಈರುಳ್ಳಿ ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಆಡಳಿತ ಸೌಧದ ಮುಂದೆ ರೈತರು ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ಬೀಜ, ರಸಗೊಬ್ಬರ, ಕೀಟನಾಶಕ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ ಬಿತ್ತನೆಗೆ ಕನಿಷ್ಟ ನಲವತ್ತು ಸಾವಿರ ರೂಪಾಯಿಗಳ ಖರ್ಚು ಮಾಡಿದ್ದು, ಆ ಬೆಳೆ ನೀರು ಪಾಲಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಎಲ್ಲಾ ನೀರುಪಾಲಾಗಿ ಅಳಿದುಳಿದ ಈರುಳ್ಳಿಯನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಹೋದರೆ ಅದರ ದರ ಸಂಪೂರ್ಣ ಕುಸಿದಿದ್ದು ಬೆಳೆಯನ್ನು ಬೆಳೆಯಲು ಹಾಕಿದ ಖರ್ಚು ಕೂಡ ಬಾರದೇ ಇರುವುದು ರೈತರನ್ನು ಚಿಂತೆಗೀಡುಮಾಡಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಂಡು ಬೆಂಬಲ ಬೆಲೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉ.ಪ್ರಾ. ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ, “ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಕಂಪನಿ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯವರು ಸರಿಯಾಗಿ ಪರಿಶೀಲನೆ ನಡೆಸದೇ ಇರುವುದರಿಂದ ರೈತರು ವಿಮಾ ಕಂಪನಿ ನೀಡುವ ಕ್ಲೇಮ್ ನಿಂದ ವಂಚಿತರಾಗುತ್ತಿದ್ದಾರೆ. ಸರಕಾರ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಾಗಲಕೋಟೆ | ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್‌ ಬಿ ತಿಮ್ಮಾಪೂರ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಪ್ರಧಾನ ಕಾರ್ಯದರ್ಶಿ ಗುರು ಅನಗವಾಡಿ, ಜಿಲ್ಲಾ ಕೋಶಾಧ್ಯಕ್ಷ ಮುದುಕಪ್ಪ ವಡವಾಣಿ, ಜಿಲ್ಲಾ ಮಹಿಳಾ ಪ್ರಮುಖರಾದ ರೇಣುಕಾ ಹುಲ್ಲಿಕೇರಿ, ರೈತ ಮುಖಂಡರಾದ ಶಿವನಗೌಡ ಪಾಟೀಲ, ಡೊಂಗ್ರಿಸಾಬ ನದಾಪ, ಚಂದ್ರಶೇಖರ ಕಾಖಂಡಕಿ ಬಸವಂತ ಸಂಕಾನಟ್ಟಿ, ಸುರೇಶ ಹೂಗಾರ, ಮಂಜು ಬಾವಿ, ಹಣಮಂತ ದೊರೆಗೊಳ, ಶಾಂತಯ್ಯ ಪಂಚಗಟ್ಟಿಮಠ, ಲಕ್ಷ್ಮಣ ಸವನಾಳ, ಯಲ್ಲಾಲಿಂಗ ಕುರಿ, ಸಿದ್ದಪ್ಪ ಕೂಗಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...