ಬಾಗಲಕೋಟೆ | ಸಕ್ಕರೆ ಕಾರ್ಖಾನೆಗಳ ತೂಕ ಮೋಸ ತಡೆಗೆ ಮುನ್ನೆಚ್ಚರಿಕೆ; 15ಕ್ಕೂ ಹೆಚ್ಚು ಯಂತ್ರಗಳ ಸಿದ್ಧತೆ

Date:

ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸುವಾಗ ತೂಕದಲ್ಲಿ ಮೋಸವಾಗುತ್ತದೆಂಬ ಆರೋಪ ಮಾಡುವ ಮುನ್ನ ದೂರು ನೀಡಿದರೆ ಕೂಡಲೇ ತೂಕದ ಯಂತ್ರ ತರಿಸಿ ಅಳವಡಿಸಿಕೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಈಗಾಗಲೇ 15ಕ್ಕೂ ಹೆಚ್ಚು ತೂಕದ ಯಂತ್ರಗಳನ್ನು ತರಿಸಿ ಇಡಲಾಗಿದೆ. ರೈತರು ದೂರು ಕೊಡಲು ಮುಂದೆ ಬರುತ್ತಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದು, ಖಾಸಗಿ ಸಕ್ಕರೆ ಕಾರ್ಖಾನೆಗಳ ಪೈಪೋಟಿ ಮಧ್ಯೆಯೂ ಸಹಕಾರಿ ಸಂಘದ ಸಕ್ಕರೆ ಕಾರ್ಖಾನೆಯೂ ಎಲ್ಲವನ್ನು ಸರಿಪಡಿಸಿಕೊಂಡು ಕಬ್ಬಿನ ಹಂಗಾಮ ಮುಂದುವರಿಸಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಕರ್ನಾಟಕದಿಂದಲೇ ಅತಿ ಹೆಚ್ಚು ಕಬ್ಬು ನುರಿಸಲಾಗುತ್ತಿದೆ. ಒಂದೇ ಜಿಲ್ಲೆ ಒಂದು ತಾಲೂಕಿನ ಸಕ್ಕರೆ ಕಾರ್ಖಾನೆಗಳಿದ್ದರೂ ರಿಕವರಿ ಮಾತ್ರ ಬೇರೆ ಬೇರೆಯಾಗುತ್ತದೆ. ಭೂಮಿ, ನೀರು ಒಂದೇ ಇದ್ದಾಗ ರಿಕವರಿ ಬೇರೆ ಯಾಕೆಂಬ ಜಿಜ್ಞಾಸೆ ಎದುರಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನೆರೆ ಹಾವಳಿಗೆ ನಾಶವಾದ ಮನೆಗಳು; ನೈಜ ಫಲಾನುಭವಿಗಳಿಗಿಲ್ಲ ಆಶ್ರಯ

“ಕಬ್ಬು ಪೂರೈಸಿದ ರೈತರ ಕಬ್ಬಿನ ಬೆಳೆಗೆ 9, 10, 11 ರಿಕವರಿ ಬಂದಾಗ ಗೊಂದಲಕ್ಕೆ ಈಡಾಗುತ್ತಿದ್ದಾನೆ. ಇದನ್ನು ಕಾರ್ಖಾನೆಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ಕಬ್ಬು ನೀಡುತ್ತಿರುವುದರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಭಾರತ ದೇಶದಲ್ಲಿಯೇ ಉತ್ತರ ಕರ್ನಾಟಕದ ಸರ್ಕಾರ ಕಾರ್ಖಾನೆಗಳು ಸಕ್ಕರೆ ಧಾರಣೆ ನೀಡುತ್ತವೆ. ರೈತರು, ಕಾರ್ಮಿಕರ ಸಹಕಾರ ಬೇಕು. ಮಾಲೀಕರಲ್ಲಿ ಹೃದಯ ವೈಶಾಲ್ಯತೆ ಇದ್ದಾಗಲೇ ಬೆಲೆ ಸಿಗಲು ಸಾಧ್ಯವಿದೆ” ಎಂದರು.

“ಸಹಕಾರ ರಂಗದಲ್ಲಿ ಕೆಲವರು ನಿರ್ದೇಶಕರಾಗಿ ಸ್ವಂತ ಸಕ್ಕರೆ ಕಾರ್ಖಾನೆ ಆರಂಭಿಸಿರುವ ದಾಖಲೆಗಳಿವೆ. ಅವಳಿ ಜಿಲ್ಲೆಯಲ್ಲಿ 1997ರಿಂದ ಡಿಸಿಸಿ ಬ್ಯಾಂಕ್‌ನಿಂದ ರಾಜ್ಯದ 27 ಸಕ್ಕರೆ ಕಾರ್ಖಾನೆಗಳಿಗೆ ಸಾಲ ಕೊಟ್ಟಿದ್ದೇವೆ. ಸಹಕಾರ ರಂಗದ ಮೂಲಕ ಸಕ್ಕರೆ ಕಾರ್ಖಾನೆಗಳಿಗೆ ಶಕ್ತಿ ಬಂದಂತಾಗಿದೆ” ಎಂದು ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...