ಬಾಗಲಕೋಟೆ | ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿದ ನಾಲ್ಕು ಲೇಬರ್ ಕೋಡ್ ಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಮುಷ್ಕರದ ಕರೆಯ ಮೇರೆಗೆ ಬಾಗಲಕೋಟೆಯಲ್ಲಿ ಬಾಗಲಕೋಟೆ ನಗರದ ಎಲ್‌ಐಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಿ, ಪ್ರತಿಭಟನಾ ಸಭೆ ನಡೆಸಿದರು.

ದೇಶದ ಕಾರ್ಮಿಕ ಸಂಘಟನೆಗಳು ಅನೇಕ ಸಲ ಸಂಘಟಿಸಿದ ಅಖಿಲ ಭಾರತ ಮುಷ್ಕರಗಳನ್ನು ಹಾಗೂ ದೇಶದ ಜನರ ಪ್ರತಿರೋಧವನ್ನು ಲೆಕ್ಕಿಸದೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಮತ್ತು ವಿದೇಶಿ ಬಂಡವಾಳಗಾರರ ಹಿತವನ್ನು ಕಾಪಾಡಲೆಂದು; ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆಗಳನ್ನಾಗಿ ಬದಲಾಯಿಸಿ ನವೆಂಬರ್ 21, 2025 ರಂದು ಜಾರಿಗೆ ತರುವದಾಗಿ ಘೋಷಿಸಿದೆ. ಈ ಸಂಹಿತೆಗಳು ಸಂಪೂರ್ಣ ದುಡಿಯುವ ಜನರ ಜೀವನವನ್ನು ವಿನಾಶ ಮಾಡುವ ಸ್ವರೂಪ ಹೊಂದಿವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಈ ವೇಳೆ ಶ್ರೀಕಾಂತ್ ಕೊಂಡುಗೂಳಿ ಮಾತನಾಡಿ, ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಶ್ಚಿತ ಅವಧಿಯ ಉದ್ಯೋಗ ಒಪ್ಪಂದವನ್ನು ಪ್ರಸ್ತಾಪಿಸಲಾಗಿದೆ. ಅಂದರೆ ಕಾಯಂ ಉದ್ಯೋಗವನ್ನು ನಾಶಗೊಳಿಸುವ ಹುನ್ನಾರ ಮಾಡಲಾಗಿದೆ. ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ 14 ದಿನದ ಮುಂಚಿತವಾಗಿ ಮುಷ್ಕರದ ಸೂಚನೆ ನೀಡಬೇಕೆನ್ನುವ ನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ. ಕೈಗಾರಿಕಾ ಸಂಸ್ಥೆಗಳ ಕಾರ್ಮಿಕರ ಸಂಖ್ಯೆಯನ್ನು 100 ರಿಂದ 300ಕ್ಕೆ ಹೆಚ್ಚಿಸಲಾಗಿದೆ. ಇದರಿಂದಾಗಿ ಪ್ರಮಾಣಿಕೃತ ಸ್ಥಾಯಿ ಆದೇಶವು ಶೇ.85ಕ್ಕಿಂತ ಹೆಚ್ಚು ಸಂಸ್ಥೆಗಳಿಗೆ ಅನ್ವಯ ಆಗದಂತೆ ಮಾಡಲಾಗಿದೆ. ರೂಪಾಯಿ 178 ಕ್ಕೆ ತಳಮಟ್ಟದ ವೇತನವನ್ನು ಪರಿಚಯಿಸಲಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೀತಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ಕಾರ್ಮಿಕರ ಅಲ್ಪಸ್ವಲ್ಪ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಮಾಲೀಕರ ಲಾಭವನ್ನು ಹೆಚ್ಚಿಸುವ, ಅವರಿಗೆ ಅನುಕೂಲ ಮಾಡಿಕೊಡುವ ಬದಲಾವಣೆಗಳನ್ನು ಈ ಸಂಹಿತೆಯಲ್ಲಿ ಮಾಡಲಾಗಿದೆ. ಆದ್ದರಿಂದ ಇಡೀ ದೇಶದ ಕಾರ್ಮಿಕರು ಹಾಗೂ ಎಲ್ಲ ಜನತೆ ಈ ಲೇಬರ್ ಕೋಡ್‌ಗಳನ್ನು ವಿರೋಧಿಸಿ ಬೃಹತ್ ಹೋರಾಟ ಬೆಳೆಸುವ ಅವಶ್ಯಕತೆ ಇದೆ ಎಂದರು.

ಇದನ್ನೂ ಓದಿ ವಿಜಯಪುರ | ಎಸ್‌ಐಆರ್ ಗೆ ಬಲಿ ಪಶುಗಳಾಗುವವರು; ಎಲ್ಲಾ ಜಾತಿ, ಧರ್ಮಿಯರು: ಚಿಂತಕ ಶಿವಸುಂದರ್

ಎಐಯುಟಿಯುಸಿ ಜಿಲ್ಲಾ ನಾಯಕಿ ಕಮಲಾ ತೇಲಿ, ರುಕ್ಸಾನಾ ನಾಗಠಾಣ, ಸೈನಾಜ್ ಜಂಗಿ, ಮಂಜುಳಾ ನಾಯಕ್, ವಾಸಂತಿ ಪುಜಾರಿ, ದಾನಮ್ಮ, ಭಾರತಿ ಚವ್ಹಾಣ, ಮಂಜುಳಾ ಸರ್ಕಾರ್, ಬಸಮ್ಮ ಕರಡಿ, ಗೀತಾ ಬದಾಮಿ, ಸುರೇಖಾ ಕಾಳೆ, ರಮೇಶ ಬಂಡಿವಡ್ಡರ, ನಾರಾಯಣ ಇಂಗಳೆ, ರಮೇಶ ಗೌಡರ್ ಹಾಗೂ ಸಂಘಟನಾಕಾರ ಹಯ್ಯಾಳಪ್ಪ ಎಚ್. ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...