ಬಾಗಲಕೋಟೆ | ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಅ.17ರಂದು ಪ್ರತಿಭಟನೆ

Date:

ಭಾರತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆದ ಘಟನೆಯನ್ನು ವಿರೋಧಿಸಿ ಬಾಗಲಕೋಟೆಯಲ್ಲಿ ವಿವಿಧ ದಲಿತ ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಪರಶುರಾಮ ಮಹಾರಾಜನವರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವುದು ಬರೀ ವ್ಯಕ್ತಿಯ ವಿರುದ್ಧವಲ್ಲ, ಅದು ಈ ದೇಶದ ನ್ಯಾಯಾಂಗ, ಸಂವಿಧಾನ, ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ವಕೀಲ ನಡೆಸಿರುವ ದಾಳಿಯಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತರವೇ ಅಡಗಿದೆ. ನ್ಯಾಯಮೂರ್ತಿ ಗವಾಯಿ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸಂವಿಧಾನದ ಆಧಾರದ ಮೇಲೆ ನೀಡಿರುವ ಕೆಲವು ಪ್ರಕರಣಗಳಲ್ಲಿ ನೀಡಿರುವ ಐತಿಹಾಸಿಕ ತೀರ್ಪು ಅವುಗಳಿಂದ ಯಾರಿಗೆ ಹಿನ್ನಡೆ ಆಗಿದೆ ಎಂದು ಸೂಕ್ಷ್ಮವಾಗಿ ಗಮನಿಸಿದಾಗ ಅವರ ಮೇಲೆ ಗೊತ್ತಾಗುತ್ತದೆ” ಎಂದು ಹೇಳಿದರು.

“ಈ ದೇಶದ ಸಂವಿಧಾನವನ್ನು ಒಪ್ಪದ ಮನಸ್ಥಿತಿಯಲ್ಲಿ ಇರುವ ಮನುಸ್ಮೃತಿಯನ್ನು ಶಾಸನವಾಗಿ ಮರು ಪ್ರತಿಷ್ಠಾಪಿಸುವ ಹುನ್ನಾರ ಇದರಲ್ಲಿ ಅಡಗಿದೆ. ಯಾವುದೇ ದೇಶದಲ್ಲಿ ನಡೆಯುವ ಚುನಾವಣೆಗಳ ಬಗ್ಗೆ ಕೆಲವೇ ನಿಮಿಷಗಳಲ್ಲಿ ಪ್ರತಿಕ್ರಿಯಿಸುವ ಪ್ರಧಾನಿ ನರೇಂದ್ರ ಮೋದಿ ಶೂ ಎಸೆದ ಘಟನೆ ನಡೆದ ಒಂಬತ್ತು ಗಂಟೆಗಳ ಬಳಿಕ ಕಾಟಾಚಾರಕ್ಕೆ ಎಂಬಂತೆ ಟ್ವೀಟ್ ಮಾಡಿದ್ದಾರೆ. ಇನ್ನೂ ಘಟನೆಯನ್ನು ದೇಶದ ಬಿಜೆಪಿ ಮುಖಂಡರು ಗಟ್ಟಿ ಧ್ವನಿಯಲ್ಲಿ ಖಂಡಿಸಲಿಲ್ಲ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲವನ್ನು ತಿಳಿದುಕೊಂಡಿರುವ ವಕೀಲ ನ್ಯಾಯಾಂಗ ವ್ಯವಸ್ಥೆ ಮೇಲೆ ದಾಳಿ ನಡೆಸಿದ್ದಾನೆ. ಇದರಿಂದ ಪ್ರಪಂಚದ ಮುಂದೆ ಭಾರತ ತಲೆತಗ್ಗಿಸುವಂಥ ಆಗಿದೆ. ಸೆ.16ರಂದು ಗಾವಾಯಿ ಅವರು ಹೇಳಿಕೆ ನೀಡಿದ್ದರು. ಅದಾದ 20 ದಿನಗಳ ಬಳಿಕ ವಕೀಲ ಶೂ ಎಸೆಯುತ್ತಾನೆ. ಆದರೂ ನ್ಯಾಯಮೂರ್ತಿಗಳು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ಕರುಣೆ ತೋರಿಸಿದ್ದಾರೆ. ಆದರೆ, ಅದನ್ನು ನಾವು ಮಾಡಲು ಸಾಧ್ಯವಿಲ್ಲ. ಇದರ ಹಿಂದೆ ದೊಡ್ಡ ಹುನ್ನಾರ ಇದೆ. ದಲಿತ ನ್ಯಾಯಮೂರ್ತಿಗಳಿಗೆ ಮಾಡಿರುವ ದಾಳಿ ಇದಾಗಿದೆ. ಇದನ್ನು ಖಂಡಿಸಿ ಉಗ್ರ ಪ್ರತಿಭಟನೆ ನಡೆಸುತ್ತೇವೆ” ಎಂದರು.

ಇದನ್ನೂ ಓದಿ: ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ದಲಿತ ಮುಖಂಡ ಪೀರಪ್ಪ ಮ್ಯಾಗೇರಿ ಮಾತನಾಡಿ, “ಅಂಬೇಡ್ಕರ್ ಅವರ ರಚಿಸಿದ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯದಲ್ಲಿ ದಲಿತ ನ್ಯಾಯಮೂರ್ತಿ ಮೇಲೆ ಶೋ ಎಸೆದಿರುವುದನ್ನು ದೇಶದ ಜನರು ಬಲವಾಗಿ ಖಂಡಿಸುತ್ತಾರೆ ಅಲ್ಲದೆ ಆರೋಪಿ ವಕೀಲನೆಗೆ ಗಲ್ಲು ಶಿಕ್ಷೆ ವಿಧಿಸಬೇಕು. ದಲಿತರು ಹಿಂದುಗಳಲ್ಲವೇ? ದೇಶದಲ್ಲಿ ದಲಿತರನ್ನು ಹತ್ತಿಕ್ಕುವ ಕೆಲಸ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಇದೇ ಕಾರಣಕ್ಕೆ ಅಂಬೇಡ್ಕರ್ ಅವರು ಹಿಂದೂ ಧರ್ಮ ಬಿಟ್ಟು ಬೌದ್ಧ ಧರ್ಮ ಸ್ವೀಕರಿಸಿದ್ದು” ಎಂದು ಹೇಳಿದರು.

ಯಮರಾಜ ಬಂಡಿ ಮಾತನಾಡಿ, “ಅ.17ರಂದು ನಗರಸಭೆಯಿಂದ ಆರಂಭವಾಗಿ ಎಲ್ಐಸಿ ವೃತ್ತದ ಮಾರ್ಗವಾಗಿ ಜಿಲ್ಲಾಡಳಿತ ಭವನದವರೆಗೂ ಪ್ರತಿಭಟ ಮೆರವಣಿಗೆ ನಡೆಯುತ್ತದೆ. ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುತ್ತದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...