ಬಾಗಲಕೋಟೆ | ಶ್ರೀ ಗಂಗಾಧರ ಶಾಸ್ತ್ರಿ ಪ್ರತಿಷ್ಠಾನ ಸದಸ್ಯನಾಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ನೇಮಕ; ಸರ್ಕಾರದ ವಿರುದ್ಧ ಜನಾಕ್ರೋಶ

Date:

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯಲ್ಲಿ ಶ್ರೀ ಗಂಗಾಧರ ಶಾಸ್ತ್ರಿ ಪ್ರತಿಷ್ಠಾನವನ್ನು ರಚಿಸಿ, ಅಧ್ಯಕ್ಷರು ಮತ್ತು ಏಳು ಜನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಪೈಕಿ ಒಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಯುವ ಮೋರ್ಚಾದ ಮುಖಂಡನನ್ನು ಸದಸ್ಯರನ್ನಾಗಿ ನೇಮಿಸಿರುವುದು ಸ್ಥಳೀಯ ಜನಾಕ್ರೋಶಕ್ಕೆ ಕಾರಣವಾಗಿದೆ.

ಉತ್ತರ ಕರ್ನಾಟಕ ಭಾಗದ ಖ್ಯಾತ ರಂಗಭೂಮಿ ಕಲಾವಿದರಾದ ಹುನಗುಂದ ತಾಲೂಕಿನ ಚಿತ್ತರಗಿಯ ಗಂಗಾಧರ ಶಾಸ್ತ್ರಿಯವರು ಕೀರ್ತನಕಾರ, ನಟ ಮತ್ತು ಮಾಲೀಕರಾಗಿ ರಂಗಭೂಮಿಗೆ ಇವರ ಕೊಡುಗೆ ಗಮನಾರ್ಹವಾಗಿರುವುದನ್ನು ಪರಿಗಣಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಇವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ರಚಿಸಿದೆ. ಆದರೆ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಸದಸ್ಯರನ್ನಾಗಿ ನೇಮಿಸಿರುವುದು ಪಕ್ಷದ ನಿಷ್ಠಾವಂತ ಮತ್ತು ಜಾತ್ಯತೀತ ತತ್ವದ ಮೇಲೆ ನಂಬಿಕೆ ಇರುವ ಕಾರ್ಯಕರ್ತರು ಸರ್ಕಾರದ ಈ ನಡೆಯ ವಿರುದ್ಧ ಕಿಡಿಕಾರುತ್ತಿದ್ದಾರೆ.

ಹುನಗುಂದ ತಾಲೂಕಿನ ಇಳಕಲ್ ನಗರದ ಕಾಂಗ್ರೆಸ್ ಪಕ್ಷದ ವಿರೋಧಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾದ ಮುಖಂಡ ಪರಸಪ್ಪ ಹನುಮಂತಪ್ಪ ಬೀಸಲದಿನ್ನಿ(ಪರಶು ಮೋದಿ) ಇವರನ್ನು ಗಂಗಾಧರ ಶಾಸ್ತ್ರಿ ಪ್ರತಿಷ್ಠಾನಕ್ಕೆ ಸದಸ್ಯರನ್ನಾಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ನಾಯಕತ್ವದ ಸೈದ್ದಾಂತಿಕ ಬದ್ಧತೆಯ ಮತ್ತು ಜಾತಿ ರಾಜಕಾರಣದ ಅಸಲಿ ಮುಖ ಅನಾವರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಶುರಾಮ ಬೀಸಲದಿನ್ನಿ ಎನ್ನುವ ವ್ಯಕ್ತಿಯೂ ಕಟ್ಟಾ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿಯ ಪಕ್ಷದ ಅಧಿಕೃತ ಯುವ ಮೋರ್ಚಾದ ಮುಖಂಡನಾಗಿ ಗುರುತಿಸಿಕೊಂಡಿದ್ದಾನೆ.

ದ್ವೇಷ ಭಾಷಣ, ಕೋಮುವಾದಿ ಹೇಳಿಕೆಗಳಿಂದ ಸದಾ ಪ್ರಚಲಿತದಲ್ಲಿರುವ ಈ ವ್ಯಕ್ತಿಯೂ ಅನೇಕ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿದ್ದಾನೆ. ಅಲ್ಲದೆ ರೌಡಿ ಶೀಟರ್‌ನಲ್ಲಿ ಈತನ ಹೆಸರಿದೆ ಎನ್ನಲಾಗುತ್ತಿದೆ. ಇಂತಹ ವ್ಯಕ್ತಿಗಳಿಗೆ ಜಾತಿ ಮತ್ತು ವೈಯಕ್ತಿಕ ಕಾರಣಗಳಿಂದ ಸರ್ಕಾರದಲ್ಲಿ ಅಧಿಕಾರ ನೀಡುವ ಸಚಿವರು ಹಾಗೂ ಶಾಸಕರ ಕ್ರಮವೂ ಪಕ್ಷಕ್ಕಿಂತ ಜಾತಿ ಪ್ರೇಮ ಹೆಚ್ಚು, ಪಕ್ಷದ ಸಿದ್ಧಾಂತದ ಬಗೆಗಿನ ಇವರ ಬದ್ಧತೆಯೂ ಶೂನ್ಯ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಇದು ಕಾಂಗ್ರೆಸ್ ಸರ್ಕಾರದ ಅತ್ಯಂತ ಹೇಸಿಗೆ ಕೆಲಸ, ಇವರ ಪಕ್ಷವನ್ನು ಅಧಿಕಾರಕ್ಕೆ ತರಲು ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಜಾತಿಯವರು ಹಗಲಿರುಳು ದುಡಿಯಬೇಕು. ಆದರೆ ಅಧಿಕಾರ ಮತ್ತು ಸ್ಥಾನಮಾನದ ಸಂದರ್ಭದಲ್ಲಿ ವಿರೋಧ ಪಕ್ಷದ ಮುಖಂಡರಿಗೆ ನೀಡುತ್ತಾರೆ. ಅಂದರೆ ಪಕ್ಷದ ಸಚಿವರು ಮತ್ತು ಶಾಸಕರ ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್ ಅನಾವರಣಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೆಎಸ್ಆರ್ ಟಿಸಿ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ

ಕಾಂಗ್ರೆಸ್ ಸರ್ಕಾರದ ಈ ಇಬ್ಬಗೆಯ ನೀತಿ ಮತ್ತು ಪಕ್ಷದ ಸಚಿವರು ಹಾಗೂ ಶಾಸಕರ ಸೈದ್ಧಾಂತಿಕ ಅಸ್ಪಷ್ಟತೆ ಎದ್ದು ಕಾಣುತ್ತದೆ, ಇದು ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷದ ಸಂವಿಧಾನದ ಮೇಲಿನ ಬದ್ಧತೆ, ಜಾತ್ಯಾತೀತ ತತ್ವದ ಹೆಸರಿನ ರಾಜಕಾರಣವು ಕೇವಲ ಅಧಿಕಾರಕ್ಕಾಗಿ ಮಾತ್ರ ಎನ್ನುವ ಅನುಮಾನ ಮೂಡುತ್ತಿದೆ.

ಈ ಅಧಿಸೂಚನೆಯನ್ನು ಹಿಂಪಡೆದು, ರದ್ದುಗೊಳಿಸಿ ಪಕ್ಷದ ನಿಷ್ಠಾವಂತ ಮತ್ತು ಜಾತ್ಯತೀತ ಮೌಲ್ಯದ ಬಗ್ಗೆ ರಾಜಿ ಇಲ್ಲದ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿರುವ ಕಾರ್ಯಕರ್ತರನ್ನು ಅಥವಾ ಪರಿಣಿತರನ್ನೇ ಸದಸ್ಯರನ್ನಾಗಿ ಮರು ಆದೇಶ ಹೊರಡಿಸಬೇಕೆಂಬುದು ಜನರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...