ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಉಪ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಹಿಳಾ ಸಂಘಟನೆಗಳ ಒಕ್ಕೂಟದ ಅಧ್ಯಕ್ಷೆ ಮಹಾದೇವಿ ಬೀಳಗಿ ಮಾತನಾಡಿ, ಒಲಂಪಿಕ್ಸ್ ನಲ್ಲಿ ದೇಶಕ್ಕೆ ಚಿನ್ನದ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪುಟಗಳ ಮೇಲೆನ ಲೈಂಗಿಕ ಕಿರುಕುಳದ ವಿರುದ್ಧ ಪಟುಗಳ ಹಲವಾರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಭಾರತಕ್ಕೆ ಪದಕ ತಂದು ಕೊಟ್ಟವರ ಪರಿಸ್ಥಿತಿ ಹೀಗಾದರೆ ಇನ್ನು ಜನ ಸಾಮಾನ್ಯರ ಪರಿಸ್ಥಿತಿ ಯಾವ ಲೆಕ್ಕ. ಪುಧಾನ ಮಂತ್ರಿಗಳು ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳುತ್ತಾರೆ. ಇದು ಎಲ್ಲಿದೆ ಎಂದು ಪ್ರಶ್ನಿಸಿದರು.
ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯೆ ಸುಮಂಗಲ ಗುತ್ತೆಣ್ಣವರ ಮಾತನಾಡಿ, ಭಾರತಕ್ಕೆ ಪದಕ ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಘಟನೆಯ ವಿರುದ್ಧ ರೈತ ಸಮುದಾಯ ಸಂಯುಕ್ತ ಕಿಸಾನ್ ಮೋರ್ಚಾ ದೇಶ ವ್ಯಾಪಿ ಹೋರಾಟಕ್ಕೆ ಕರೆ ನೀಡಿದೆ. ಇದು ಮಹಿಳಾ ಆತ್ಮ ಗೌರವಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದರು.
ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಕುಸ್ತಿ ಪಟುಗಳ ಹೋರಾಟವನ್ನೇ ಹತ್ತಿಕ್ಕುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಹಾಗಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಇಂದಿರಾ ಕಲಾದಗಿ ಹಾಗೂ ಒಕ್ಕೂಟದ ಸದ್ಯಸರು ಹಾಜರಿದ್ದರು.
ಈ ಸುದ್ದಿ ಓದಿದ್ದೀರಾ? ಗದಗ | ಮುಂಗಾರು ಹಂಗಾಮು ಪ್ರಾರಂಭ; ಕೃಷಿಕರಿಗೆ ಅಧಿಕಾರಿಗಳಿಂದ ಸಲಹೆ-ಸೂಚನೆ




