ಬಾಗಲಕೋಟೆ | ಶಾಹೂ ಅಂಬೇಡ್ಕರ್ ಪರ್ವ-2024

Date:

ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳ ಜೊತೆಗೆ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತು ಎಲ್ಲರಿಗೂ ಸಮಾನವಾದ ಮತದಾನದ ಹಕ್ಕನ್ನು ನೀಡಿದ ಡಾ ಅಂಬೇಡ್ಕರ್ ಹಾಗೂ ಮೀಸಲಾತಿ ಜಾರಿಗೆ ತಂದ ಛತ್ರಪತಿ ಶಾಹೂ ಮಹಾರಾಜರ ಕೊಡುಗೆ ಅಪಾರವಾಗಿದ್ದು, ಸಾಮಾಜಿಕವಾಗಿ ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಶಾಸಕ ಜೆ ಟಿ ಪಾಟೀಲ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ನಗರದ ಸರ್ಕಾರಿ ಆಸ್ಪತ್ರೆ ಹತ್ತಿರದ ಅಂಜುಮನ್ ಶಾದಿ ಮಹಲ್‌ನಲ್ಲಿ ಭಾನುವಾರ ನಡೆದ ಸತ್ಯ ಶೋಧಕ ಸಂಘ ಕರ್ನಾಟಕ ಬೀಳಗಿ ತಾಲೂಕು ಘಟಕದಿಂದ ನಡೆದ ಶಾಹೂ ಅಂಬೇಡ್ಕರ್ ಪರ್ವ-2024, ಮೀಸಲಾತಿ ಜನಕ ಛತ್ರಪತಿ ಶಾಹೂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್ ಜಯಂತಿ ಅಂಗವಾಗಿ ಮೀಸಲಾತಿ ಸಾಮಾಜಿಕ ಪ್ರಾತಿನಿಧ್ಯ ಮತ್ತು ಖಾಸಗೀಕರಣದ ಸವಾಲುಗಳು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಹೊಸ ಹೊಸ ನಿಯಮಗಳಂತೆ ಮೀಸಲಾತಿ ಮತ್ತು ಪ್ರಾತಿನಿಧ್ಯ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಡಾ.ಅಂಬೇಡ್ಕರ್‌ವರ ಶಿಕ್ಷಣ ಸಂಘಟನೆ ಮತ್ತು ಹೋರಾಟಕ್ಕೆ ಆದ್ಯತೆ ನೀಡಬೇಕಾಗಿದೆ. ನಮ್ಮ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದರೆ ಮಾತ್ರ ಅದಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತುಕೊಟ್ಟು ಮೀಸಲಾತಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸತ್ಯ ಶೋಧಕ ಸಂಘಟನೆ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತ್ಯ ಶೋಧಕ ಸಂಘಟನೆ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಮಾತನಾಡಿ, “ಸಾಮಾಜಿಕ, ನ್ಯಾಯಸಮ್ಮತವಾದ ಮೀಸಲಾತಿ ಬೇಕಾಗಿದೆ. ಸಾಮಾಜಿಕ ಅಸಮಾನತೆ ಇನ್ನೂ ಜೀವಂತವಾಗಿದೆ. ಸಕಾರತ್ಮಕ ತಾರತಮ್ಯದ ಅಡಿಯಲ್ಲಿ ಸಾಗುವುದು ಅವಶ್ಯವಿದ್ದು, ಇಂದಿನ ಬದಲಾವಣೆ ಕಾಲ ಘಟ್ಟದಲ್ಲಿ ಬರುವ ದಿನಗಳಲ್ಲಿ ಮೀಸಲಾತಿ ಎನ್ನುವುದೇ ಇರುವುದಿಲ್ಲ. ಇದರ ಕುರಿತಾಗಿ ದೇಶದಲ್ಲಿ ದೊಡ್ಡ ಮಟ್ಟದ ಒಂದು ಹುನ್ನಾರ ನಡೆಯುತ್ತಿದೆ. ಇದರ ಬಗ್ಗೆ ಜಾಗೃತರಾಗಬೇಕಾಗಿದೆ. ಇನ್ನೂ ನಮ್ಮ ಕೆಳಮಟ್ಟದಲ್ಲಿ ಕಾಣುವ ಮನಸ್ಥಿತಿಗಳಿವೆ. ನಾವು ನಮ್ಮ ಉಳಿವಿಗೆ ಮತ್ತು ಸಂವಿಧಾನ ಉಳಿವಿಗಾಗಿ ಜಾಗೃತರಾಗಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿಗಾಗಿ ಮಾದಿಗ-ಛಲವಾದಿ ಸಮಾಜ ಒಗ್ಗೂಡಿ ಹೋರಾಟ; ರಾಜ್ಯಕ್ಕೆ ಮಾದರಿ

ವಿಶ್ರಾಂತ ಪ್ರಾಂಶುಪಾಲ ಡಾ. ಸಾಗರ ತೆಕ್ಕೆನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಮೀಸಲಾತಿ ಪಡೆಯಲಾರದವರು ಈ ದೇಶದಲ್ಲಿ ಯಾರೂ ಇಲ್ಲ. ಜಾತಿ ಜಾತಿಯಲ್ಲಿ ದ್ವೇಷ ಬೆಳಸದೆ ಎಲ್ಲರೂ ಒಂದಾಗಿ ನಡೆಯಬೇಕಾಗಿದೆ” ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ, ಮಾಜಿ ತಾಪಂ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಪಪಂ ಮಾಜಿ ಅಧ್ಯಕ್ಷ ಅನಿಲ ಗಚ್ಚಿನಮನಿ, ಮಾಜಿ ಜಿಪಂ ಸದಸ್ಯ ಯಮನಪ್ಪ ರೊಳ್ಳಿ, ಡಿಎಸ್‌ಎಸ್ ಮುಖಂಡ ಬಸವರಾಜ ಹಳ್ಳದಮನಿ, ಪಪಂ ಸದಸ್ಯ ಪಡಿಯಪ್ಪ ಕರಿಗಾರ, ಶ್ರೀಶೈಲ ಅಂಟಿನ, ಶಿವಾನಂದ ಮಾದರ, ಸಿದ್ದು ಸಾರಾವರಿ, ಕಾಶಿಂಅಲಿ ಗೋಡೆ, ಅಬುಶಮಾ ಖಾಜಿ, ರಫೀಕ ಮುಜಾವರ, ಡಿಗ್ರಿ ಕಾಲೇಜು ಪ್ರಾಂಶುಪಾಲ ಸುನಿಲ ನಾರಾಯಣಿ, ಆಶಾ ಬೀಳಗಿ, ಪಪಂಸದಸ್ಯ ಅಬೇದಾಜುಮನಾಳ, ರವಿನಾಗನಗೌಡರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...