ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

Date:

ಅಕ್ಟೋಬರ್‌ 20ರಂದು ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಹು-ಅಂಬೇಡ್ಕರ್ ಪರ್ವ ಎಂಬ ವಿಚಾರ ಸಂಕಿರಣ ಬೀಳಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಜಿಎಲ್‌ಬಿಸಿಐಬಿಯಲ್ಲಿ ಸತ್ಯಶೋಧಕ ಸಂಘದಿಂದ ಛತ್ರಪತಿ ಶಾಹು ಮಹಾರಾಜ ಹಾಗೂ ಬಿ ಆರ್ ಅಂಬೇಡ್ಕರ್‌ ಜಯಂತಿಯ ಅಂಗವಾಗಿ ಅ.20ರಂದು ಬೀಳಗಿಯ ಅಂಜುಮನ್ ಶಾದಿಮಹಲ್‌ನಲ್ಲಿ ನಡೆಯಲಿರುವ ಶಾಹು-ಅಂಬೇಡ್ಕರ್ ಪರ್ವ ಕಾರ್ಯಕ್ರಮದ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

“ಮೀಸಲಾತಿ ತೆಗೆದುಕೊಳ್ಳದೇ ಇರುವವರು ಭಾರತ ದೇಶದಲ್ಲಿ ಯಾರೂ ಉಳಿದಿಲ್ಲ. ಮೀಸಲಾತಿ ಬಡತನ ನಿರ್ಮೂಲಣೆ ಮಾಡಲು ಇರುವ ಸಂವಿಧಾನಾತ್ಮಕ ಕಾರ್ಯಕ್ರಮವಲ್ಲ. ಎಸ್‌ಸಿ/ಎಸ್‌ಟಿ/ಓಬಿಸಿ ಅಂದರೆ ಏನೆನ್ನುವುದನ್ನು ತಿಳಿಸುವದು, ಹಾಗೂ ಈ ಕಾರ್ಯಕ್ರಮ ಮಿಸಲಾತಿ-ಸಾಮಾಜಿಕ ಪ್ರಾತಿನಿಧ್ಯ ಮತ್ತು ಖಾಸಗೀಕರಣದ ಸವಾಲುಗಳನ್ನು ಮನದಟ್ಟು ಮಾಡುವ ವಿಚಾರ ಸಂಕಿರಣದ ಕಾರ್ಯಕ್ರಮವಾಗಿದೆ. ವಿಶೇಷವಾಗಿ ಈ ಕಾರ್ಯಕ್ರದಲ್ಲಿ ನೌಕರರು ಮತ್ತು ವಿದ್ಯಾರ್ಥಿಗಳಿಗೆ ಹೇಚ್ಚು ಅನುಕೂಲಕರವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ ಮಾತನಾಡಿ, “ಈ ವಿಚಾರ ಸಂಕಿರಣದ ಉದ್ಘಾಟನೆಯನ್ನು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ ಟಿ ಪಾಟೀಲ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಹಾಗೂ ಅಹಿಂದ ಜಿಲ್ಲಾಧ್ಯಕ್ಷ ಡಾ. ಸಾಗರ ತೆಕ್ಕೆನ್ನವರ, ವಿಶೇಷ ಉಪನ್ಯಾಸವನ್ನು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ, ಮುಖ್ಯ ಅತಿಥಿಗಳಾಗಿ ಯುವ ಮುಖಂಡರಾದ ಬಸವಪ್ರಭು ಸರನಾಡಗೌಡರ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಎನ್ ಪಾಟೀಲ, ಜಿ.ಪಂ. ಮಾಜಿ ಅಧ್ಯಕ್ಷ ಯಮನಪ್ಪ ರೊಳ್ಳಿ, ಜಿ.ಪಂ. ಮಾಜಿ ಸದಸ್ಯ ಹನಮಂತ ಕಾಖಂಡಕಿ, ತಾ.ಪಂ. ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಅಬುಶಮಾ ಖಾಜಿ ಸೆರಿದಂತೆ ಇನ್ನೂ ಅನೇಕ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕುರಿಪಾಳ್ಯದಲ್ಲಿ ಮನೆಕುಸಿತ : ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ರಾಜು ಬೋರ್ಜಿ, ತಾಲೂಕು ಅಹಿಂದ ಅಧ್ಯಕ್ಷ ಸಿದ್ದು ಸಾರಾವರಿ, ಚಿನ್ನಪ್ಪ ಬಂಡಿವಡ್ಡರ, ಕೊರ್ತಿ ಗ್ರಾ.ಪಂ. ಸದಸ್ಯ ಶಿವು ಚಲವಾದಿ, ಶಿಖಂದರ ಹುದ್ದಾರ, ಖಾಶಿಮಲಿ ಗೋತೆ, ಮಹಮದ್ ರಫೀಕ ಮುಜಾವರ, ತಹಶೀಲ್ದಾರ್‌ ಸ್ವಾಜಾಮೈನುದ್ದೀನ, ಸಂತೋಷ ಕೋಟಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...