ಬಾಗಲಕೋಟೆ | ಕುರಿಗಾಹಿಗಳಿಗೆ ಆತ್ಮರಕ್ಷಣೆ ತರಬೇತಿಯ ಅಗತ್ಯವಿದೆ: ಡಿಸಿ ಜಾನಕಿ

Date:

ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲೆಯ ನವನಗರದ ಪೊಲೀಸ್ ಮಂಗಲ ಭವನದಲ್ಲಿ ಕುರಿಗಾಹಿಗಳಿಗಾಗಿ ಆಯೋಜಿಸಿದ್ದ ಬಂದೂಕು ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, “ಮಳೆ, ಬಿಸಿಲು ಎನ್ನದೆ ಗುಡ್ಡಗಾಡು ಪ್ರದೇಶಗಳಲ್ಲಿ ಒಬ್ಬಂಟಿಯಾಗಿ ತಮ್ಮ ಕುರಿಗಳನ್ನು ಮೇಯಿಸುತ್ತಾರೆ. ಈ ಹಿನ್ನೆಲೆ ಕುರಿಗಾಹಿಗಳು ಮತ್ತು ಅವರ ಕುರಿಗಳ ರಕ್ಷಣೆಗೆ ಸಹಾಯವಾಗುವಂತೆ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಕುರಿಗಾಹಿಗಳು ತಮ್ಮ ಕುರಿಗಳನ್ನು ಬೇರೆ ಬೇರೆ ಪ್ರದೇಶಗಳಿಗೆ ಮೇಯಿಸಲು ಹೋಗುವ ಸಂದರ್ಭದಲ್ಲಿ ಅವರ ರಕ್ಷಣೆಗಾಗಿ ಬಂದೂಕು ತರಬೇತಿ ನೀಡಲಾಗುತ್ತಿದೆ. ತರಬೇತಿಯಲ್ಲಿ ಏಕಾಗ್ರತೆಯಿಂದ ಪಾಲ್ಗೊಂಡು, ಉತ್ತೀರ್ಣರಾಗಿ ಬಂದೂಕು ಪರವಾ ನಗಿ ಪಡೆಯಬೇಕೆಂದರು.ಬಂದೂಕು ಜತೆ ನಡವಳಿಕೆ ಯಲ್ಲಿ ಅತ್ಯಂತ ಸೂಕ್ಷ್ಮತೆ ಅಗತ್ಯವಾಗಿದೆ. ಬಂದೂ ಕು ಭಾವನೆ ರಹಿತವಾಗಿದೆ. ಅದು ಜೀವಕ್ಕೆ ಅಪಾಯ ತರಬಲ್ಲದು. ಬಂದೂಕನ್ನು ಸರಿಯಾಗಿ ಇಟ್ಟುಕೊಳ್ಳ ಬೇಕು. ಫೋಟೋಗೆ ಇಲ್ಲವೆ ಪ್ರದರ್ಶನಕ್ಕಾಗಿ ಸ್ನೇಹಿತರಿಗೆ ಕೊಡಬಾರದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, “ಏಪ್ರಿಲ್ 13ರವರೆಗೆ ನಡೆಯುತ್ತಿರುವ ಈ ಶಿಬಿರದಲ್ಲಿ 500ಕ್ಕೂ ಹೆಚ್ಚು ಕುರಿಗಾಹಿಗಳು ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಗುರಿ ನಿಖರವಾಗಿ ಹೇಗೆ ಇಡಬೇಕು. ಬಂದೂಕು ಹಸ್ತಾಂತರಿಸುವ ವಿಧಾನ, ಕಾನೂನು ನಿಯಮಗಳು ಮತ್ತು ಶಿಸ್ತು ಕುರಿತು ತರಬೇತಿ ನೀಡಲಾಗುತ್ತಿದೆ. ತರಬೇತಿಯನಂತರ ಕಾಡುಪ್ರಾಣಿಗಳಿಗೆ ಯಾವುದೇ ರೀತಿಯತೊಂದರೆ ನೀಡಬಾರದು. ದುರುಪಯೋಗ ಪಡಿಸಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ಹೇಳಿದರು. ಶಿಬಿರದಲ್ಲಿ ಮೂರು ಮಹಿಳೆಯರು ಸಹ ಭಾಗವಹಿಸಿದ್ದರು.

ಇದನ್ನೂ ಓದಿ: ಬಾಗಲಕೋಟೆ | ಈದ್ ಮಿಲನ್ ಕಾರ್ಯಕ್ರಮ ಯಶಸ್ವಿ

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರೆ, ಕಾಶಿನಾಥ್ ಹುಡೇದ, ಹಾಲುಮತ ಸಮಾಜದ ರಾಜ್ಯ ಕಾರ್ಯದರ್ಶಿ ಸುವರ್ಣ, ತರಬೇತಿದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...