ಬಾಗಲಕೋಟೆ | ಎರಡು ಕೆರೆಗಳ ಅತಿಕ್ರಮಣದ ಸರ್ವೇ ಕಾರ್ಯ ಆರಂಭ: ಪೌರಾಯುಕ್ತ ಗೋಪಾಲ ಕಾಸೆ

Date:

ಖಾಸಗಿ ಶಿಕ್ಷಣ ಸಂಸ್ಥೆಗಳು ಕೆರೆಗಳನ್ನು ಅತಿಕ್ರಮಿಸಿಕೊಂಡಿವೆ ಎಂಬ ಆಪಾದನೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆರೆಗಳ ಸರ್ವೇಕಾರ್ಯ ಆರಂಭಿಸಲಾಗಿದೆ ಎಂದು ಮುಧೋಳ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಎರಡು ಕೆರೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಆಕ್ರಮಿಸಿಕೊಂಡಿದ್ದು, ಈ ಕುರಿತು ಏನು ಕ್ರಮ ಕೈಗೊಳ್ಳಲಾಗಿದೆಯೆಂದು ನಗರಸಭೆ ಸದಸ್ಯ ಸಂತೋಷ ಪಾಲೋಜಿಯವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಶೀಘ್ರವಾಗಿ ಕೆರೆಗಳ ಸರ್ವೇ ಕಾರ್ಯ ಕೈಗೊಂಡು ಅತಿಕ್ರಮಣ ತೆರವುಗೊಳಿಸಬೇಕೆಂದು ತೀರ್ಮಾನಿಸಲಾಗಿತ್ತು. ಅದರಂತೆ ನಗರದ ಸಿದ್ಧರಾಮೇಶ್ವರ ಕಾಲನಿಯ ಸರ್ವೇ ನಂ. 9ರಲ್ಲಿ ನಗರದ ಸಾಯಿ ನಿಕೇತನ ಶಿಕ್ಷಣ ಸಂಸ್ಥೆ ಹಾಗೂ ದತ್ತ ಮಂದಿರದ ಬಳಿಯಿರುವ ಸರ್ವೇ ನಂ. 558ರ 14 ಎಕರೆ 34 ಗುಂಟೆ ಜಾಗಗಳಲ್ಲಿ ಬಿವಿವಿ ಸಂಘದ ಶಾಲಾ ಕಾಲೇಜುಗಳು ಕೆರೆಗಳನ್ನು ಅತಿಕ್ರಮವಿಸಿಕೊಂಡಿವೆ ಎಂಬುದರ ಬಗ್ಗೆ ಭಾರೀ ವಿವಾದ ಹುಟ್ಟಿಕೊಂಡಿದ್ದು, ಇವುಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿಶೇಷಚೇತನರಿಗೆ ವೀಲ್‌ಚೇರ್, ಇತರೆ ಸಲಕರಣೆಗಳ ವಿತರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧವಾಗಿ ನಡೆದ ಚರ್ಚೆಯಲ್ಲಿ ಪೌರಾಯುಕ್ತರು ಸರ್ವೇ ಕಾರ್ಯ ಪ್ರಾರಂಭವಾಗಿದೆಯೆಂದು ತಿಳಿಸಿದರೂ, ಕೆಲವು ಸದಸ್ಯರು ಇದರ ಕುರಿತು ವಿವಿಧ ರೀತಿಯಿಂದ ತೀವ್ರವಾಗಿ ಪ್ರಶ್ನಿಸಿದರು. ಪೌರಾಯುಕ್ತರು ನೀಡಿದ ಮಾಹಿತಿಯ ಪ್ರಕಾರ, ನಗರದ ಸಾಯಿ ನಿಕೇತನ ಶಿಕ್ಷಣ ಸಂಸ್ಥೆ ಮತ್ತು ಬಿವಿವಿ ಸಂಘಗಳು ಅತಿಕ್ರಮಣ ಮಾಡಿವೆಯೆಂಬ ಆಪಾದನೆ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರ್ವೇ ಕಾರ್ಯ ನಡೆಯುತ್ತಿದೆ. ಅತಿಕ್ರಮಣಗೊಂಡಿರುವ ಜಾಗವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುವುದೆಂದು ಸದಸ್ಯರಿಗೆ ತಿಳಿಸಿದರು.

ಸರ್ವೇ ನಂ. 558ರಲ್ಲಿ 14 ಎಕರೆ 34 ಗುಂಟೆ ಜಮೀನಿನ ಪರಿಷ್ಕೃತ ವಿನ್ಯಾಸ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಕೆಲವು ಸದಸ್ಯರು ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಳ್ಳುವವರೆಗೆ ಯಾವುದೇ ಅನುಮೋದನೆ ನೀಡದಂತೆ ಹಾಗೂ ಕೆರೆಗಳನ್ನು ಉಳಿಸುವ ಸಲುವಾಗಿ, ಕೆರೆಗಳ ಬಳಿಯ ಜಮೀನನ್ನು ಬಫರ್ ಜೋನ್ ಮಾಡಿ ತಂತಿಬೇಲಿ ಹಾಕುವಂತೆ ಕೆಲವು ಸದಸ್ಯರು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...