ಬಾಗಲಕೋಟ | ಬಾಕಿ ಹಣ ಬಿಡುಗಡೆ ಮಾಡುವಂತೆ ಕಬ್ಬು ಬೆಳೆಗಾರರು ಒತ್ತಾಯ

Date:

ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು” ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ ಒತ್ತಾಯಿಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕಳೆದ ವರ್ಷದ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

“ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರರವರು ಹಾಗೂ ಜಿಲ್ಲಾಧಿಕಾರಿಗಳು ಕಾರ್ಖಾನೆಗಳಿಂದ ಬರಬೇಕಾಗಿದ್ದ ಬಾಕಿ ಹಣದ ಕುರಿತು ರೈತರು ಹಾಗೂ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಧ್ಯಸ್ಥಿಕೆ ವಹಿಸಿ, ಡಿಸೆಂಬರ್  ಡಿ. 31 ರೊಳಗಾಗಿ ಹಣ ಪಾವತಿಸುವಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.ಹೇಳಿದ ಮಾತನ್ನು ಉಳಿಸಿಕೊಳ್ಳಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಾಣಿ ಕಾರ್ಖಾನೆ ಬಾಕಿ ಹಣದಲ್ಲಿ ಒಂಬತ್ತು ಕೋಟಿ ಮತ್ತು ಗುಡಗುಂಟಿ ಕಾರ್ಖಾನೆಯ ಮೂರು ಕೋಟಿಯಷ್ಟು ನೀಡಿದ್ದಾರೆ. ರೈತರ ಉಳಿದ ಬಾಕಿ ಹಣವನ್ನು ನೀಡಿಲ್ಲ. ಜನವರಿ ಹದಿನೈದು ಆದರೂ   ರೈತರಿಗೆ ಬಾಕಿ ಹಣ ಕಾರ್ಖಾನೆಯವರು ಪಾವತಿಸಿರುವುದಿಲ್ಲ. ಆದ್ದರಿಂದ ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು” ಎಂದು ಬಸವಂತ ಕಾಂಬಳೆ ಹೇಳಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ದುಂಡಪ್ಪ ಯರಗಟ್ಟಿ ಮಾತನಾಡಿ, “ಈ ಕುರಿತು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದರೆ, ಎಫ್ ಆರ್ ಪಿ ಪ್ರಕಾರ ಮಾತ್ರ ತಾವು ನಡೆದುಕೊಳ್ಳಲು ಸಾಧ್ಯವೆಂದು ತಿಳಿಸಿದ್ದಾರೆ. ಅಲ್ಲದೇ ಎಫ್ ಆರ್ ಪಿ ಕಾಯ್ದೆ ಪ್ರಕಾರ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಹದಿನಾಲ್ಕು ದಿನಗಳ ಒಳಗೆ ಬಿಲ್ ಪಾವತಿಸಬೇಕು. ತಪ್ಪಿದಲ್ಲಿ ಶೇ ಹದಿನೆಂಟರಷ್ಟು ಬಡ್ಡಿ ಸಮೇತ ಬಿಲ್ ಪಾವತಿಸಬೇಕಾಗುತ್ತದೆ. ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಪತ್ರಿಕಾ ಗೋಷ್ಠಿಯಲ್ಲಿ  ರೈತ ಮುಖಂಡ ಸುಭಾಷ ಶಿರಭೂರ, ಮಹೇಶ ಪಾಟೀಲ, ಹನಮಂತಗೌಡ ಪಾಟೀಲ, ಕಲ್ಮೇಶ ಹಣಗುಜಿ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...