ಬಾಗಲಕೋಟೆ | ಕಳ್ಳತನದ ಆರೋಪ: ಬಟ್ಟೆ ಬಿಚ್ಚಿಸಿ ಪರಿಶೀಲಿಸಿದ ಶಿಕ್ಷಕಿಯರು; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಶಿಕ್ಷಕಿಯೊಬ್ಬರ 2 ಸಾವಿರ ರೂ. ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯ ಕದಾಂಪೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಫ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.

ಮಾರ್ಚ್ 14ರಂದು ಗ್ರಾಮದ ಕದಾಂಪೂರ ಪ್ರೌಢಶಾಲೆಯ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಇವರ 2 ಸಾವಿರ ಹಣ ಕಳೆದಿತ್ತು. ಆಗ ಕನ್ನಡ ಶಿಕ್ಷಕಿ ಜಯಶ್ರೀ ಹಾಗೂ ಮುಖ್ಯಶಿಕ್ಷಕ ಇತರೆ ಶಿಕ್ಷಕರು 10ನೇ ತರಗತಿಯ ನಾಲ್ವರು, ಎಂಟನೇ ತರಗತಿಯ ದಿವ್ಯಾ ಮೇಲೆ ಸಂಶಯ ಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣ ಯಾರು ಕಳ್ಳತನ ಮಾಡಿದ್ದೀರಿ ಕೊಡಿ ಎಂದು ಗದರಿಸಿದ್ದರು. ಸಾಲದು ಎಂಬಂತೆ ಸಮವಸ್ತ್ರ ಬಿಚ್ಚಿಸಿ, ಪರಿಶೀಲನೆ ಕೂಡ ಮಾಡಿದ್ದಾರೆ. ಮೇಲಾಗಿ ಹಣ ಕೊಡದಿದ್ದರೆ ಟಿ.ಸಿ ಕೊಟ್ಟು ಮನೆಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಅವಮಾನ ತಾಳದೆ ಎಂಟನೇ ತರಗತಿ ವಿದ್ಯಾರ್ಥಿನಿ ದಿವ್ಯಾ ನಿನ್ನೆ (ಮಾ.16) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ದಿವ್ಯಾ ಕುಟುಂಬದವರ ಆಕ್ರಂದನ ಮುಗಿಲು‌ ಮುಟ್ಟಿದ್ದು, ಮಗಳ ಸಾವಿಗೆ ಶಿಕ್ಷಕಿ ಜಯಶ್ರೀ ಕಾರಣ ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಬಾಲಕಿಯ ಕುಟುಂಬ ಆಗ್ರಹಿಸಿದೆ.

ಈ ಬಗ್ಗೆ ಶಿಕ್ಷಕಿ ಜಯಶ್ರೀ ಹಾಗೂ ಮುಖ್ಯ ಶಿಕ್ಷಕ ಕೆ.ಎಚ್. ಮುಜಾವರ ವಿರುದ್ಧ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು (ಎಫ್‌ಐಆರ್‌) ದಾಖಲಾಗಿದೆ.

ಮಾರನೇ ದಿನ ಶಾಲೆಯ ಲ್ಯಾಬ್‌ನಲ್ಲಿ ಕಳೆದಿದ್ದ ಹಣ ಸಿಕ್ಕಿದೆ ಎಂದು ತಿಳಿದು ಬಂದಿದೆ. ವಿನಾಕಾರಣ ಸಂಶಯಪಟ್ಟು ಒಂದು ಜೀವ ಹೋಗಲು ಶಿಕ್ಷಕಿ ಕಾರಣರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್‌ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಡಿಪಿಐ ಬಿ.ಕೆ‌. ನಂದನೂರು, ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಶಿಕ್ಷಕಿಯರು ವಿದ್ಯಾರ್ಥಿನಿಯರ ಈ ರೀತಿ ಅವಮಾನ ಮಾಡಿದ್ದೇ ಆದರೆ ಖಂಡಿತ ಸಹಿಸೋದಕ್ಕೆ ಸಾಧ್ಯವಿಲ್ಲ. ನಾಳೆ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಿ, ಪರಿಶೀಲನೆ ನಡೆಸಿ ಸೂಕ್ತ‌ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...