ಬಾಗಲಕೋಟೆ | ದೇಶದ ಬೆನ್ನುಲುಬು ರೈತನ ಪರಿಸ್ಥಿತಿ ಸಂಕಷ್ಟದಲ್ಲಿದೆ: ಡಾ. ರವೀಂದ್ರ ಬೆಳ್ಳಿ

Date:

ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಮಹಾಲಿಂಗಪುರದ ರೋಹಿಣಿ ಸಂಸ್ಥೆಯ ಬೋಧಿ ವೃಕ್ಷ ಸವಾಂಗಣದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ರೋಹಿಣಿ ಬಯೋಟೆಕ್ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾದ ಕೃಷಿ ಪರವಾದ ಬೃಹತ್ ರೈತ ಮೇಳದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಸುಸ್ಥಿರ, ಸಾವಯವ, ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡ ಸ್ವಾಲಂಬಿ ಬದುಕು ರೂಪಿಸಿಕೊಳ್ಳಬೇಕು. ಇಂದು ರೈತರು ಅಗತ್ಯಕ್ಕಿಂತ ಹೆಚ್ಚಿಗೆ ನೀರು, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಬಳಕೆಯಿಂದಾಗಿ, ಬೆಳೆಯುವ ಆಹಾರ ವಿಷವಾಗಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಕಾರಣ ರೈತರು ಮಣ್ಣು ಮತ್ತು ನೀರನ್ನು ಸಂರಕ್ಷಿಸಬೇಕು ಬೆಳೆಗಳಿಗೆ ಸಾವಯವ ಗೊಬ್ಬರಗಳ ಬೆಳಕೆಯನ್ನು ಹೆಚ್ಚಿಗೆ ಮಾಡಿಕೊಳ್ಳಬೇಕು. ಉಪ ಕಸಬುಗಳಾದ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ, ರೇಷ್ಮೆ ಕೃಷಿ ಮಾಡಬೇಕು, ಕೃಷಿ ತಜ್ಞರ ಸಲಹೆಯನ್ನು ನಿರಂತರವಾಗಿ ಪಡೆದು ಆರ್ಥಿಕವಾಗಿ ಸ್ವಾಲಂಬಿಗಳಾಗಬೇಕು ಎಂದರು.

ರೋಹಿಣಿ ಬಯೋಟೆಕ್ ಸಂಸ್ಥಾಪಕ ಡಾ. ಎಂ. ವೈ. ಕಟ್ಟಿ ಮಾತನಾಡಿ, ರೋಹಿಣಿ ಬಯೋಟೆಕ್ ಸಂಸ್ಥೆ ಕಟ್ಟುವಾಗ ಬಹಳ ಸಮವಹಿಸಿದ್ದು, ಇಂದು ಎರಡು ನೂರುಕ್ಕಿಂತ ಹೆಚ್ಚಿನ ಜನರಿಗೆ ಉದ್ಯೋಗ ನೀಡಿ, ವಿವಿಧ ಜೈವಿಕ ಪರಿಕರಗಳ ಉತ್ಪಾದನೆ, ಮಣ್ಣು ನೀರು ಪ್ರಯೋಗಾಲಯ, ಗುಣಮಟ್ಟದ ಟೆಶ್ಯೊ ಕಲ್ಚರ್ ಸಸಿಗಳ ಉತ್ಪಾದನೆ, ಸಾವಯವ ಡೈರಿ ಮುಂತಾದ ಉದ್ಯಮಗಳನ್ನು ಸ್ಥಾಪಿಸಲು ಸಾಧ್ಯವಾಯಿತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ಕಾರ್ಯಕ್ರಮದಲ್ಲಿ ಬಾಗಲಕೋಟ್ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಆರ್ ವಿ ನಂದಗಾವಿ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಎಸ್ ಎಸ್ ಚೌಹಾಣ, ವಿಜ್ಞಾನಿ ಡಾ. ವೆಂಕಣ್ಣ ಬಳಗಾನೂರ, ಡಾ. ರಮಿತಾ ರೈತರಿಗೆ ವಿವಿಧ ತಾಂತ್ರಿಕತೆಗಳ ಕುರಿತು ಸಂವಾದ ನಡೆಸಿಕೊಟ್ಟರು. ಕೃಷಿ ಅಧಿಕಾರಿ ಟಿಸಿಕಿನ್ ಡಾಂಗೆ ಇಲಾಖೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಬ್ಯಾಂಕಿನ ಕ್ಷೇತ್ರಾಧಿಕಾರಿ ಶ್ರದ್ಧಾ ಸ್ವಾಗತಿಸಿದರು. ಶ್ರೀಕಾಂತ್ ಕುಂಬಾರ್ ಕಾರ್ಯಕ್ರಮವನ್ನು ನಿರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...