ಬಾಗಲಕೋಟೆ | ಸಾಹಿತಿಗಳು ಸ್ವಾವಲಂಬಿಗಳಾಗಬೇಕು: ಶ್ರೀಧರ ಬಳಿಗಾರ

Date:

ಸಾಹಿತಿಗಳು ಪರಾವಲಂಬಿಗಳಾಗಬಾರದು. ಸಂವಿಧಾನವನ್ನು ರಾಜಕೀಯ ಪಠ್ಯವಾಗಿ ನೋಡದೆ ಸಾಂಸ್ಕೃತಿಕ ಪಠ್ಯವಾಗಿ ಅರಿಯಬೇಕಾಗಿದೆ ಎಂದು ಕಾದಂಬರಿಕಾರ ಸಾಹಿತಿ ಶ್ರೀಧರ ಬಳಿಗಾರ ಹೇಳಿದರು.

ಬಾಗಲಕೋಟೆ ನವನಗರದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಭಾನುವಾರ ಯಂಡಿಗೇರಿಯ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

“ಪ್ರಶಸ್ತಿಗಳು ವ್ಯಕ್ತಿಗಲ್ಲ, ಆತನ ಕೃತಿಗೆ ಕೊಡುತ್ತಿರುವುದು ಖುಷಿಯ ಸಂಗತಿ. ಸಾಹಿತ್ಯ ಅನನ್ಯವಾದ ಸಂವೇದನೆ, ದಿನನಿತ್ಯ ಬಳಸುವ ಶಬ್ದಗಳನ್ನು, ಪದಗಳನ್ನು ಅನನ್ಯವಾದ ಅನುಭವವನ್ನು ಅಭಿವ್ಯಕ್ತಿ ಮಾಡಬೇಕಾಗುತ್ತದೆ. ಜೊತಗೆ ಓದುಗನು ಕೂಡ ಅನುಭವಿಸುವಂತೆ ಮಾಡಬಹುದಾದ ಶಕ್ತಿ ಸಾಹಿತ್ಯಕ್ಕಿದೆ. ಓದುಗನಲ್ಲಿರುವ ಸಾಂಸ್ಕೃತಿಕ ಸ್ಮೃತಿಗಳನ್ನು ಜಾಗೃತಗೊಳಿಸಬೇಕು. ಬರವಣಿಗೆಯಲ್ಲಿ ಕಲಾತ್ಮಕತೆ ಅಗತ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಮಾತನಾಡಿ, “ನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಸಾಹಿತಿಗಳು ಚಿಂತನೆಮಾಡಬೇಕಿದೆ. ಆ ನಿಟ್ಟಿನಲ್ಲಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ಸಮಾಜಮುಖಿ ಕಾರ್ಯ ಶ್ಲಾಘನೀಯ. ಸಾಹಿತ್ಯ ಜನರನ್ನು ಸದಾ ಎಚ್ಚರಿಸುವ ಸಾಧನ. ಇಂದಿನ ಸಾಹಿತ್ಯದ ದಿಕ್ಕು ಎತ್ತ ಸಾಗಿದೆ ಎಂಬುದನ್ನು ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ. ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸುವಲ್ಲಿ ಸಾಹಿತಿಗಳು ಚಿಂತನೆ ಮಾಡಬೇಕಿದೆ” ಎಂದರು.

ತೀರ್ಪುಗಾರರಾಗಿದ್ದ ವಿಮರ್ಶಕ ಎಸ್.ಆರ್. ವಿಜಯಶಂಕರ ಮಾತನಾಡಿ, “ಕಾದಂಬರಿಗಳು ಜನರಿಗೆ ಬೇಕಾದ ಸಂಪೂರ್ಣ ಮಾಹಿತಿಯನ್ನು ಕೊಡಬಹುದಾಗಿವೆ. ಪ್ರಜ್ಞಾವಂತ ಲೇಖಕರು ಸಾಮಾಜಿಕ ಸಮಸ್ಯೆಗಳನ್ನು ಹತ್ತಿರದಿಂದ ನೋಡಿ ಪ್ರಶ್ನಿಸುವುದು ಅಗತ್ಯವಾಗಿದೆ. ಪ್ರಶ್ನಿಸುವುದರಿಂದ ಸತ್ಯಾಸತ್ಯಗಳನ್ನು ಹೊರಗೆಳೆಯಲು ಸಹಾಯವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

ಕಾರ್ಯಕ್ರಮದಲ್ಲಿ ಸಾಹಿತಿ ಕೇಶವ ಮಳಗಿ, ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ ಶೆಲ್ಲಿಕೇರ, ಸಂಗಮೇಶ ಪಾನಶೆಟ್ಟಿ, ಡಾ. ಚಂದ್ರಶೇಖರ ಕಾಳನ್ನವರ, ಶಿವಾನಂದ ಶೆಲ್ಲಿಕೇರಿ, ಗುರು ಗಾಣಗೇರ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...