ಬಾಗಲಕೋಟೆ | ಕವಿ ಚಕ್ರವರ್ತಿ ʼರನ್ನ ಮುಧೋಳʼವೆಂಬ ಮರುನಾಮಕರಣಕ್ಕೆ ಒತ್ತಾಯ

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆಯುವ ರನ್ನ ವೈಭವಕ್ಕೆ ಮುಧೋಳ ಹೆಸರನ್ನು ಕವಿ ಚಕ್ರವರ್ತಿ ರನ್ನ ಮುಧೋಳ ಎಂದು ಮರುನಾಮಕರಣ ಮಾಡಲು ರನ್ನ ವೈಭವದ ಕಾರ್ಯಕ್ರಮದಲ್ಲಿ ಸರ್ಕಾರ ನಿರ್ಣಯ ತೆಗೆದುಕೊಳ್ಳಬೇಕು ಎಂದು ಪ್ರಗತಿಪರ ಯುವರೈತ ಮುಖಂಡ ಡಾ. ಯಲ್ಲಪ್ಪ ಹೆಗಡೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕೆ ಪ್ರಕಟಣೆ ನೀಡಿರುವ ಅವರು, “ಕವಿ ಚಕ್ರವರ್ತಿ ರನ್ನನ ಜನ್ಮಭೂಮಿಯಾದ ಮುಧೋಳದಲ್ಲಿ ಫೆಬ್ರವರಿ 22ರಿಂದ 24ರವರೆಗೆ ರನ್ನ ವೈಭವ ಅದ್ದೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ರನ್ನನ ಇತಿಹಾಸ, ಸಾಹಿತ್ಯ ಮತ್ತು ಕಾವ್ಯಗಳ ಪ್ರಸಾರವನ್ನು ನಾಡಿನ ಜನರಿಗೆ ಮುಟ್ಟಿಸುವ ಕಾರ್ಯ ನಡೆಯುತ್ತದೆ” ಎಂದರು.

ರನ್ನ ಮುಧೋಳ ಹೆಸರಿಡುವಂತೆ ಯುವರೈತ ಆಗ್ರಹ

“ಕವಿ ಚಕ್ರವರ್ತಿ ರನ್ನನ ಹೆಸರನ್ನು ಶಾಶ್ವತವಾಗಿ ನೆನಪು ಮಾಡಿಕೊಳ್ಳಲು ಮತ್ತು ತಾಲೂಕಿನ ಜನರನ್ನು ರಾಜ್ಯದಲ್ಲಿ ಗುರುತಿಸಲು ಮುಧೋಳ ಹೆಸರನ್ನು ಕವಿ ಚಕ್ರವರ್ತಿ ರನ್ನ ಮುಧೋಳ ಎಂದು ನಾಮಕರಣ ಮಾಡಲು ನಾವೆಲ್ಲರೂ ಆಗ್ರಹಿಸಲು ಕಾರಣಗಳಿವೆ. ಅವುಗಳೆಂದರೆ ನಮ್ಮ ಮುಧೋಳ ನಗರವನ್ನು ಹೊರತುಪಡಿಸಿ ರಾಜ್ಯದಲ್ಲಿ 3 ಕಡೆ ಮುಧೋಳ ಎಂಬ ಹೆಸರು ಹೊಂದಿರುವ ಹಳ್ಳಿಗಳಿವೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳ, ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುಧೋಳ ಹಾಗೂ ಬೀದರ್ ಜಿಲ್ಲೆಯ ಆರೋಡ ತಾಲೂಕಿನ ಮುಧೋಳ ಬಿ ಎಂಬ ಊರುಗಳಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಇಳಿಸುವಂತೆ ಡಿವೈಎಫ್‌ಐ ಮನವಿ

“ಮುಧೋಳ ಎಂಬ ಊರುಗಳು ಮೂರ್ನಾಲ್ಕು ಕಡೆ ಇರುವುದರಿಂದ ನಮ್ಮ ಮುಧೋಳ ನಗರವನ್ನು ʼರನ್ನ ಮುಧೋಳʼ ಎಂಬ ಹೆಸರಿನಲ್ಲಿ ಮರುನಾಮಕಾರಣ ಮಾಡಬೇಕು. ಹೀಗೆ ಗುರುತಿಸುವುದರಿಂದ ನಮ್ಮ ನಾಡಿನಲ್ಲಿ ನಮಗೆ ಒಂದು ಹೆಮ್ಮೆಯ ಸಂಕೇತವಾಗುತ್ತದೆ. ಹಾಗಾಗಿ ಮುಧೋಳದ ಹೆಸರನ್ನು ಕವಿ ಚಕ್ರವರ್ತಿ ʼರನ್ನ ಮುಧೋಳʼವೆಂದು ನಾಮಕರಣ ಮಾಡುವಂತೆ ಎಲ್ಲ ನಾಗರಿಕ ಬಂಧುಗಳು ಹಕ್ಕೊತ್ತಾಯ ಮಾಡಬೇಕು” ಎಂದು ಮನವಿ ಮಾಡಿದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

    ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

    ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

    "ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

    ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

    ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

    ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

    ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...