ಬಾಗಲಕೋಟೆ | ರಾಷ್ಟ್ರ ನಿರ್ಮಾಣಕ್ಕೆ ಬಸವದಳ ಮಹತ್ವದ ಕೊಡುಗೆ ನೀಡಿದೆ: ಮಾತೆ ಗಂಗಾದೇವಿ

Date:

35 ವರ್ಷದ ಹಿಂದೆ ಆರಂಭವಾದ ರಾಷ್ಟ್ರೀಯ ಬಸವದಳ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಬಸವ ಧರ್ಮಪೀಠದ ಮಾತೆ ಗಂಗಾದೇವಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಬಸವ ಧರ್ಮ ಪೀಠದಲ್ಲಿ ಆರಂಭವಾದ 39ನೇ ಶರಣ ಮೇಳದ ಮೊದಲ ದಿನದ ರಾಷ್ಟ್ರೀಯ ಬಸವ ದಳದ 35ನೇ ಅಧಿವೇಶನ ಹಾಗೂ ವ್ಯಸನ ಮುಕ್ತ ಸಮಾಜ ನಿರ್ಮಾಣ ಚಿಂತನೆಗೋಷ್ಟಿ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ರಾಷ್ಟ್ರೀಯ ಬಸವದಳ ಕಾರ್ಯನಿರ್ವಹಣೆಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ದೇಶದ 10 ರಾಜ್ಯಗಳಲ್ಲಿ ಸಂಘಟನೆ ಹೊಂದಿದ್ದು, ಇನ್ನಷ್ಟು ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಬಸವದಳ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ ಲಿಂಗಾಯತ ಮಾತನಾಡಿ, “ಈ ವರ್ಷ 12 ಜಿಲ್ಲೆಗಳಲ್ಲಿ ನಾನು ಲಿಂಗಾಯತ ಅಭಿಯಾನ ಮಾಡುವ ಮೂಲಕ ಲಿಂಗಾಯತ ಧರ್ಮ ಸಂಘಟನೆ, ಜಾಗೃತಿ ಮಾಡಲಾಗುವುದು. ಅಭಿಯಾನದಲ್ಲಿ ರಾಷ್ಟ್ರೀಯ ಬಸವದಳ ಸಂಘಟನೆ ಕುರಿತು ಚರ್ಚಿಸಲಾಗುವುದು. ಕಳೆದ ವರ್ಷ ಆರು ಜಿಲ್ಲೆಗಳಲ್ಲಿ ರಾಷ್ಟ್ರೀಯ ಬಸವ ದಳದ ಅಭಿಯಾನವನ್ನು ಯಶಸ್ವಿಯಾಗಿ ಮಾಡಲಾಗಿದೆ. ಪ್ರತಿ ತಿಂಗಳು ಒಂದು ಜಿಲ್ಲೆಯಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದರು.

ಸಾನಿಧ್ಯ ವಹಿಸಿದ್ದ ಬಿದರಿನ ಬಸವ ಗಿರಿಯ ಪ್ರಭುದೇವ ಸ್ವಾಮೀಜಿ ಮಾತನಾಡಿ, “ಶರಣ ಮೇಳದಂತಹ ಧಾರ್ಮಿಕ ಕಾರ್ಯಕ್ರಮಗಳು ಸದ್ಗುಣ ಮೂಡಿಸುತ್ತಿವೆ. ತಾತ್ವಿಕ ಚರಿತ್ರೆ ಹೊಂದಿದ ಲಿಂಗಾಯತ ಧರ್ಮಕ್ಕೆ ಸಾಮಾಜಿಕ ಮಾನ್ಯತೆ ಅಗತ್ಯವಿದೆ. ವಚನ ಸಾಹಿತ್ಯ, ಪ್ರವಚನದ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ” ಎಂದರು.

ರಾಷ್ಟ್ರೀಯ ಬಸವದಳದ ರಾಜ್ಯ ಅಧ್ಯಕ್ಷ ಕೆವಿ ವೀರೇಶ ಮಾತನಾಡಿ, “ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧಿವೇಶನವನ್ನು ಪ್ರತಿ ವರ್ಷ ಫೆಬ್ರವರಿ ತಿಂಗಳ ಎರಡನೇ ಭಾನುವಾರ ಹಮ್ಮಿಕೊಳ್ಳಲಾಗುವುದು. ಈ ವರ್ಷದ ಅಧಿವೇಶನವನ್ನು ಬೆಂಗಳೂರಿನ ಕುಂಬಳಗೋಡು ಬಸವ ಗಂಗೋತ್ರಿ ಆಶ್ರಮದಲ್ಲಿ ಫೆ.8ರಂದು ಹಮ್ಮಿಕೊಳ್ಳಲಾಗಿದೆ. ಎಲ್ಲ ರಾಷ್ಟ್ರೀಯ ಬಸವದಳದ ಪದಾಧಿಕಾರಿಗಳೂ ಕಾರ್ಯಕ್ರಮಕ್ಕೆ ಬರಬೇಕು. ಈ ಅಧಿವೇಶನದಲ್ಲಿ ರಾಷ್ಟ್ರೀಯ ಬಸವದಳದ ಸಂಘಟನೆ, ಲಿಂಗಾಯತ ಧರ್ಮಕ್ಕೆ ತೊಂದರೆ ಕೊಡುತ್ತಿರುವ ವೀರಶೈವ, ಹಿಂದೂ ಪದಗಳ ಕುರಿತು ಚರ್ಚಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧಕ್ಕೆ ಗ್ರಾಮಸ್ಥರ ಸಭೆ; ಶನಿವಾರದವರೆಗೆ ಮದ್ಯ ಮಾರಾಟ ನಿಲ್ಲಿಸಲು ಗಡುವು

ಧಾರವಾಡದ ಅಕ್ಕಮಹಾದೇವಿ ಅನುಭವ ಪೀಠದ ಮಾತೆ ಜ್ಞಾನೇಶ್ವರಿ, ಉಳವಿಯ ಅಕ್ಕ ನಾಗಲಾಂಬಿಕೆ ಪೀಠದ ಮಾತೆ ಜ್ಞಾನೇಶ್ವರಿ, ಬೆಂಗಳೂರು ಬಸವ ಮಂಟಪದ ಪ್ರಭುಲಿಂಗ ಸ್ವಾಮೀಜಿ, ತೆಲಂಗಾಣ ರಾಷ್ಟ್ರೀಯ ಬಸವದಳ ಅಧ್ಯಕ್ಷ ಶಂಕರ್ಯಪ್ಪ ಪಾಟೀಲ, ರಾಷ್ಟ್ರೀಯ ಬಸವದಳ ರಾಜ್ಯ ಗೌರವಾಧ್ಯಕ್ಷ ಬಸವರಾಜ ಕೊಂಡಗುಳಿ, ಮುಖಂಡರಾದ ಹುಬ್ಬಳ್ಳಿಯ ಎಸ್ ಬಿ ಜೋಡಳ್ಳಿ, ಬಿದಿರಿನ ಸೋಮಶೇಖರ ಪಾಟೀಲ ಗಾದಗೆ, ಕೊಪ್ಪಳದ ವೀರಣ್ಣ ಲಿಂಗಾಯತ, ಕೆ ವಿ ರವಿಶಂಕರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...