ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

Date:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಎಚ್.ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಣಕ್ಕಿಳಿಸಲು ಆಡಳಿತಾರೂಢ ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಪಕ್ಷವು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯ ನಂತರ, ಕುಟುಂಬದ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳು ಶಮನಗೊಂಡಿವೆ. ಉಮೇಶ್ ಮೇಟಿಗೆ ಟಿಕೆಟ್‌ ಕೊಡಲು ಮೇಟಿ ಕುಟುಂಬದಲ್ಲಿ ಒಮ್ಮತದ ಸಮ್ಮತಿ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಸ್ಥಾನವನ್ನು ತಮ್ಮದೇ ಕುಟುಂಬಕ್ಕೆ ನೀಡಬೇಕೆಂದು ಶಾಮನೂರು ಕುಟುಂಬ ಪಟ್ಟು ಹಿಡಿದಿದೆ. ಇನ್ನೊಂದೆಡೆ, ಅಲ್ಪಸಂಖ್ಯಾತ ನಾಯಕರು, ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ, ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಮನೂರು ಶಿವಶಂಕರಪ್ಪ ಅವರ 27 ವರ್ಷದ ಮೊಮ್ಮಗ ಸಮರ್ಥ್ ಶಾಮನೂರು, ಪಕ್ಷವು ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸುವ ಮೊದಲೇ ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ರಮವು ಅಲ್ಪಸಂಖ್ಯಾತ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಶಿವಶಂಕರಪ್ಪ ಅವರು ತಮ್ಮ ಅವಧಿಯ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಅಭ್ಯರ್ಥಿಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರೆಂದು ಕೆಲವು ನಾಯಕರು ಹೇಳುತ್ತಿದ್ದಾರೆ.

ಸಮರ್ಥ್ ಅವರು ನಾಮಪತ್ರ ಸಲ್ಲಿಸಿರುವುದನ್ನು ಲಘುವಾಗಿ ಪರಿಗಣಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಅದೊಂದು ಶುಭ ದಿನವಾಗಿದ್ದರಿಂದ ಮಾತ್ರ ನಾಮಪತ್ರ ಸಲ್ಲಿಸಲಾಗಿದೆ ಎಂಬುದಾಗಿ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ (ಸಮರ್ಥ್ ತಂದೆ) ಸ್ಪಷ್ಟಪಡಿಸಿದ್ದಾರೆ. ಪಕ್ಷವು ಬೇರೆ ನಿರ್ಧಾರ ಕೈಗೊಂಡರೆ ನಾಮಪತ್ರವನ್ನು ಹಿಂಪಡೆಯುತ್ತಾರೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ, 85,000 ಮುಸ್ಲಿಂ ಮತದಾರರನ್ನು ಹೊಂದಿರುವ ದಾವಣಗೆರೆ ದಕ್ಷಿಣ ಕ್ಷೇತ್ರವು ಅಲ್ಪಸಂಖ್ಯಾತರಿಗೆ ಪ್ರಬಲ ಹಕ್ಕು ಇರುವ ಕೆಲವೇ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಮುಸ್ಲಿಂ ನಾಯಕರು ವಾದಿಸಿದ್ದಾರೆ. ಹೆಚ್ಚಿನ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಪಟ್ಟು ಹಿಡಿದಿದ್ದಾರೆ. ಆದಾಗ್ಯೂ, ಮತಗಳ ವಿಭಜನೆಯನ್ನು ತಪ್ಪಿಸಲು ಈ ಸಮಸ್ಯೆಯು ಸೌಹಾರ್ದಯುತವಾಗಿ ಬಗೆಹರಿಯಲಿದೆ ಎಂಬ ಆಶಾವಾದವನ್ನು ಮುಸ್ಲಿಂ ನಾಯಕರು ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ಎರಡು ದಿನಗಳಿಂದ ಅಲ್ಪಸಂಖ್ಯಾತ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. “ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತನ ಅಭಿಪ್ರಾಯವೂ ನಮಗೆ ಮುಖ್ಯವಾಗಿರುವುದರಿಂದ ನಾವು ಸುದೀರ್ಘವಾಗಿ ಚರ್ಚಿಸಲು ಬಯಸಿದ್ದೆವು. ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ.ಸಿ ವ್ಯಾಲಿ ನೀರು ಸುರಕ್ಷಿತ: ಮಣ್ಣಿನ ಗುಣಮಟ್ಟವೂ ವೃದ್ಧಿ  

'ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಅಂತರ್ಜಲ...

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...