ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಶುಕ್ರವಾರ ಐದು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಜಕಾತಿ, ಬ್ಲ್ಯೂ ಇಂಡಿಯಾ ಪಾರ್ಟಿಯಿಂದ ತಳವಾರ ಶಿವಕುಮಾರ ತಲಾ ಎರಡು ನಾಮಪತ್ರ ಸಲ್ಲಿಸಿದರೆ, ಉತ್ತಮ ಪ್ರಜಾಕೀಯ ಪಕ್ಷದಿಂದ ಅಂತೋಷ ಸವ್ವಾಸೆ, ಭಾರತೀಯ ಜನತಾ ಪಕ್ಷ(ಬಿಜೆಪಿ)ದಿಂದ ವೀರಭದ್ರಯ್ಯ ಚರಂತಿಮಠ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಿಂದ ಗೋವಿಂದರಾಜ ಟಿ. ಬಳ್ಳಾರಿ ತಲಾ ಒಂದು ನಾಮಪತ್ರ ಸೇರಿದಂತೆ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದ್ದಾರೆ.

ಪೊಟೋ ಲಗತ್ತಿಸಿದೆ.
೧ : ಪಕ್ಷೇತರ ಅಭ್ಯರ್ಥಿ ಆನಂದ ಜಕಾತಿ
೨ : ಬ್ಲೂ ಇಂಡಿಯಾ ಪಕ್ಷದಿಂದ ತಳವಾರ ಶಿವಕುಮಾರ
೩ : ಉತ್ತಮ ಪ್ರಜಾಕೀಯ ಪಕ್ಷದಿಂದ ಅಂತೋಷ ಸವ್ವಾಸೆ
೪ : ಬಿಜೆಪಿ ಪಕ್ಷದಿಂದ ವೀರಭದ್ರಯ್ಯ ಚರಂತಿಮಠ
೫ : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಿಂದ ಗೋವಿಂದರಾಜ ಬಳ್ಳಾರಿ
ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ: ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ವೀರಣ್ಣ ಚರಂತಿಮಠ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮಾ.23ರಂದು ಭಾರೀ ಮೆರವಣಿಗೆಯೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುತ್ತದೆ. ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.





