ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.
ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ತಾಯಿ ರೂಪಾ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
2018ರಲ್ಲಿ ಹನಮಂತ ಬಾದಾಮಿ ಎನ್ನುವಾತನೊಂದಿಗೆ ರೂಪಾ ಮದುವೆಯಾಗಿತ್ತು. ಆದರೆ ಕಾಲಕ್ರಮೇಣ ಅತ್ತೆ ರೇಣವ್ವ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತ ರೂಪಾ ಮೊದಲು ತನ್ನ ಮೂವರು ಮಕ್ಕಳಿಗೆ ಹಗ್ಗದಿಂದ ಮನೆಯ ಜಂತಿಗೆ ನೇಣು ಹಾಕಿ ಕೊಂದಿದ್ದಾಳೆ. ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ
ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಹಾಗೂ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಏನೂ ಅರಿಯದ ಮುಗ್ಧ ಜೀವಗಳು ಬಲಿಯಾಗಿರುವುದು ಇಡೀ ಜಿಲ್ಲೆಯ ಮನ ಕಲಕಿದೆ.






