ಬಾಗಲಕೋಟೆ | ರೈತ ಹೋರಾಟಗಾರನ ವಿರುದ್ಧ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಸಂಘಟನೆಗಳ ಆಗ್ರಹ

Date:

ರೈತ ಹೋರಾಟಗಾರರ ಮೇಲೆ ಹಲ್ಲೆ ನಡೆಸುವ ನಿಮ್ಮ ಧರ್ಮ ಯಾವುದಯ್ಯ, ಕೊಲ್ಲುವ ಸಂಸ್ಕೃತಿ ನಿಮ್ಮದಾದರೆ, ಕಾಯಕ ಸಂಸ್ಕೃತಿ ನಮ್ಮದು ಎಂದು ಭಾರತೀಯ ಶರಣರ ಸೇನೆಯ ರಾಷ್ಟ್ರೀಯ ಸಂಚಾಲಕ ರಾಯಸಂದ್ರ ರವಿಕುಮಾರ್ ಹೇಳಿದರು.

ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಅಹಿಂದ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ತಾಲೂಕಿನ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳ ನೇತೃತ್ವದಲ್ಲಿ ರೈತಪರ ಹೋರಾಟಗಾರ ಯಲ್ಲಪ್ಪ ಹೆಗಡೆಯವರ ಮೇಲಿನ ಮಾರಣಾಂತಿಕ ಕೃತ್ಯ ಖಂಡಿಸಿ ಹಾಗೂ ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೀಳಗಿ ಪಟ್ಟಣದ ಕನಕ ವೃತ್ತದ ಬಳಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಕರವೇ‌ ಜಿಲ್ಲಾ ಅಧ್ಯಕ್ಷ ಬಸವರಾಜ್ ಧರ್ಮಂತಿ ಮಾತನಾಡಿ, “ನಾನು ಪೋಲಿಸರಿಗೆ, ಸರ್ಕಾರಕ್ಕೆ ಮುರಗೇಶ್ ನಿರಾಣಿ ಹಾಗೂ ಅವರ ತಮ್ಮನನ್ನು ಬಂಧಿಸುವಂತೆ ಸವಾಲ್ ಹಾಕಿದ್ದೆ. ಇವತ್ತಿಗೂ ಬಂಧನ ಮಾಡಿಲ್ಲ. ಪೊಲೀಸರು, ಸಚಿವರು, ಶಾಸಕರು ತನಿಖೆ ನಡೆದಿದೆ ಎಂದು‌ ಹೇಳುತ್ತಿದ್ದಾರೆಯೇ ಹೊರತು ಸರಿಯಾಗಿ ತನಿಖೆ ನಡೆಸುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಲ್ಲಪ್ಪ ಹೆಗಡೆ ಒಂದು ಶಕ್ತಿ. ಸಮಾಜ, ಜನರ ಮೇಲೆ ಕಾಳಜಿ ಹೊಂದಿದವವರು, ಯಾರೂ ಇಲ್ಲದೇ ಇದ್ದರೂ ಹೋರಾಟವನ್ನು ಮುನ್ನಡೆಸಿಕೊಂಡು ಹೋಗುವ ವ್ಯಕ್ತಿತ್ವ ಅವರದು. ಅಂಥವರ ಮೇಲೆ ಹಲ್ಲೆ ಮಾಡಿದ್ದು ನಾಚಿಕೆಗೇಡಿನ ಸಂಗತಿ. ಹಾಗಾಗಿ ಕೂಡಲೇ ಮುರಗೇಶ್ ನಿರಾಣಿಯನ್ನು ಬಂಧಿಸಿ, ಪ್ರಜಾಪ್ರಭುತ್ವದ ಮೇಲಿರುವ ನಂಬಿಕೆಯನ್ನು ಉಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೃಷಿ ಮೇಳಗಳು ಜಾತ್ರೆಯಾಗದೇ ಕೃಷಿ ಕ್ಷೇತ್ರದ ಅಭಿವೃದ್ಧಿ ಹೆಚ್ಚಿಸಲಿ: ಸಿಎಂ ಸಿದ್ದರಾಮಯ್ಯ

ಎಸ್ ಎಚ್ ತೆಕ್ಕನ್ನವರ ಮಾತನಾಡಿ, “ಹೋರಾಟಗಾರನ ಮೇಲೆ ಹಲ್ಲೆ‌ ಮಾಡಿರುವುದು ಹೇಯ ಕೃತ್ಯ. ಇಂತಹ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಹೋರಾಟಗಾರರಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಪಡಿಯಪ್ಪ ಕರಿಗಾರ, ಸತ್ಯಪ್ಪ ಮೆಲ್ನಾಡ್, ರಾಮನಗೌಡ ಜಕ್ಕನಗೌಡ್ ಪಾಟೀಲ್, ಬಸವರಾಜ್ ಹಳ್ಳದಮನಿ, ಮಹಾದೇವ್ ಹಾದಿಮನಿ, ಡಾ ಎಸ್ ಎಚ್ ತೆಕ್ಕೆನ್ನವರ್, ಸಿದ್ದಪ್ಪ ಬಳಗಾನೂರ, ಕಿರಣ್ ಎ ಬಾಳಾಗೊಳ್, ಹಣಮಂತ ಕಾಖಂಡಕಿ, ಕಾಶಿಮಲಿ ಗೋಟೆ, ಹಾಶಿಂಪೀರ್ ಮುಜಾವರ, ಸಿದ್ದು ಸಾರಾವರಿ, ಅನಿಲ್ ಗಚ್ಚಿನಮಣಿ, ಸದಾಶಿವ ಅಗೋಜಿ ಸೇರದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...