ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

Date:

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಟಿಕೆಟ್ ನೀಡಿ, ಶುಲ್ಕ ಪಡೆದಿದ್ದರು. ಇದನ್ನು ಪ್ರಶ್ನಿಸಿ ಬಾಲಕನ ತಾಯಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು.

ಮುಧೋಳ ತಾಲೂಕು ಅನಂತಪುರ ಗ್ರಾಮದ ನಿವಾಸಿ ದೀಪಾ ಹಿರೇಮಠ ಅವರು ಪುತ್ರನೊಂದಿಗೆ ಕಳೆದ ವರ್ಷ ಜುಲೈ 1ರಂದು ಮುಧೋಳದಿಂದ ವಿಜಯಪುರಕ್ಕೆ ಹೊರಟಿದ್ದರು. ಈ ವೇಳೆ ಪುತ್ರನಿಗೆ 10 ವರ್ಷ 11 ತಿಂಗಳು ಆಗಿದ್ದು ಅರ್ಧ ಟಿಕೆಟ್‌ ನೀಡಿ ಎಂದು ದೀಪಾ ಅವರು ಕಂಡಕ್ಟರ್‌ಗೆ ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಡುಗ 12 ವರ್ಷ ಮೇಲ್ಪಟ್ಟಿದ್ದಾನೆ, ಪೂರ್ಣ ಟಿಕೆಟ್‌ ಪಡೆಯಬೇಕು ಎಂದು ಕಂಡಕ್ಟರ್ ಸೂಚಿಸಿದರು. ಆಗ ಜನ್ಮ ದಾಖಲೆಯ ಆಧಾರ್ ಕಾರ್ಡ್ ತೋರಿಸಿದರೂ ಒಪ್ಪದ ಅವರು, ಬಸ್‌ನಿಂದ ಕೆಳಗೆ ಇಳಿಯಿರಿ ಎಂದಿದ್ದರು. ಆಗ ದೀಪಾ ಅವರು ಪೂರ್ಣ ಟಿಕೆಟ್‌ ಪಡೆದೇ ಪ್ರಯಾಣಿಸಿದ್ದರು.

ನಂತರ ಈ ವಿಷಯವನ್ನು ಡಿಪೊ ವ್ಯವಸ್ಥಾಪಕರ ಗಮನಕ್ಕೆ ತಂದು, ಕಂಡಕ್ಟರ್ ವಿರುದ್ಧ ಕ್ರಮ ಕೈಗೊಂಡು, ಟಿಕೆಟ್‌ ಹಣ ವಾಪಸ್‌ ಕೊಡಬೇಕು ಎಂದು ಕೋರಿದರು. ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ವಕೀಲರಿಂದ ನೋಟಿಸ್ ಕಳುಹಿಸಿದರೂ ಸ್ಪಂದಿಸದ ಕಾರಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಕೆಎಸ್‌ಆರ್‌ಟಿಸಿ ನಿಯಮಾವಳಿ ಉಲ್ಲಂಘಿಸಿ ಪೂರ್ಣ ಟಿಕೆಟ್‌ ಕೊಟ್ಟು ಸೇವಾ ನ್ಯೂನತೆ ಮತ್ತು ಅನುಚಿತ ವ್ಯಾಪಾರ ಮಾಡಿದ್ದು ಸಾಬೀತಾಗಿದೆ. ದೂರುದಾರರಿಂದ ಹೆಚ್ಚುವರಿಯಾಗಿ ಪಡೆದ 50 ರೂಪಾಯಿ ಟಿಕೆಟ್‌ ಹಣವನ್ನು ಶೇ. 9ರ ಬಡ್ಡಿಯೊಂದಿಗೆ ಎರಡು ತಿಂಗಳಲ್ಲಿ ಬಡ್ಡಿ ಸಮೇತ ನೀಡಬೇಕು. ಜೊತೆಗೆ ಮಾನಸಿಕ ಹಿಂಸೆ ಅನುಭವಿಸಿರುವುದರಿಂದ ವಿಶೇಷ ಪರಿಹಾರವಾಗಿ 2 ಸಾವಿರ ರೂ, ಪ್ರಕರಣದ ಖರ್ಚಾಗಿ ಒಂದು ಸಾವಿರ ರೂ. ನೀಡಬೇಕು ಎಂದು ಆಯೋಗ ಆದೇಶಿಸಿದೆ.

ಅಧ್ಯಕ್ಷ ಡಿ.ವೈ. ಬಸಾಪುರ, ಸದಸ್ಯರಾದ ಸಿ.ಎಚ್‌. ಸಮಿಉನ್ನಿಸಾ ಅಬ್ರಾರ್, ಕಮಲಕಿಶೋರ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...