ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ಯುವಕ

Date:

ಬಾಲಿವುಡ್ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಖಾಸಗಿ ವಾಹಿನಿಯಲ್ಲಿ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಬಡಕುಟುಂಬದ 22 ರ ಹರೆಯದ ಯುವಕ ರಮಜಾನ್ ಮಲಿಕ್ ಸಾಬ ಫಿರಜಾದೆ ಭಾಗವಹಿಸಿ 50 ಲಕ್ಷ ರೂಪಾಯಿಗಳನ್ನು ಗೆದಿದ್ದಾರೆ.

ಚಿಮ್ಮಡಗಲ್ಲಿಯ ಬಡಕುಟುಂಬದ ರಮಜಾನ ತಂದೆ ಮಲ್ಲಿಸಾಬಸಾಬ-ಮುನೇರಾ ದಂಪತಿಯ ಸುಪುತ್ರ. ಇವರ ತಂದೆ ಗೋಕಾಕ ರಸ್ತೆಯಲ್ಲಿ ಗ್ಯಾರೇಜ್‌ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ಗ್ಯಾಸ್ ವೆಲ್ಡರ್ ಕೆಲಸದ ಆದಾಯದಲ್ಲಿ ಮಕ್ಕಳ ಶಿಕ್ಷಣ ಮತ್ತು ಮನೆ ನಿರ್ವಹಣೆ ಮಾಡುತ್ತಿದ್ದಾರೆ. ರಮಜಾನಗೆ ಒಬ್ಬ ತಮ್ಮ, ಇಬ್ಬರು ತಂಗಿಯರಿದ್ದಾರೆ.

ಕಾರ್ಯಕ್ರಮದಲ್ಲಿ ಹದಿನಾಲ್ಕು ಜಟೀಲ ಪ್ರಶ್ನೆಗಳಿಗೆ ಉತ್ತರಿಸಿ, ಕೊನೆಯ 15ನೇ ಪ್ರಶ್ನೆಗೆ ಜಾಣ್ಮೆಯ ಕ್ವಿಟ್ ಪಡೆದು ಅಗ್ರ ಶ್ರೇಯಾಂಕದ ಒಂದು ಕೋಟಿ ಸಿಗದೇ ಹೋದರೂ 50 ಲಕ್ಷ ಮೊತ್ತದ ಚೆಕ್‌ ಪಡೆದುಕೊಂಡಿದ್ದಾರೆ. ಸಂದರ್ಭದಲ್ಲಿ ನಟ ಅಮಿತಾಬ್ ಅವರು ರಮಜಾನ್‌ಗೆ ಶುಭ ಹಾರೈಸಿ ಕೆಬಿಸಿ ನೀಡಿರುವ ಹಣದಿಂದ ಸುಭದ್ರ ಬದುಕು ಕಟ್ಟಿಕೊಂಡು ಹಣವನ್ನು ಸದುಪಯೋಗ ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ. ರಮಜಾನ್ ಭಾಗವಹಿಸಿದ ಕಾರ್ಯಕ್ರಮ ಮುಂದಿನ ವಾರದ ಸಂಚಿಕೆಯಲ್ಲಿ ಪ್ರಸಾರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಮೂರನೇ ಬಾರಿಯ ಪ್ರಯತ್ನದಲ್ಲಿ ಆಯ್ಕೆಯಾದ ರಮಜಾನ್ ಜ.10ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಟ್ ಸೀಟ್ ಅಲಂಕರಿಸುವ ಸುವರ್ಣಾವಕಾಶ ಪಡೆದುಕೊಂಡಿದ್ದರು.

ರಮಜಾನ ಅವರು ಚಿಕ್ಕಂದಿನಿಂದಲೂ ಬಡತನದಲ್ಲಿಯೇ ಬೆಳೆದ ಹುಡುಗ. ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್‌ಸಿ ಪದವಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ರಮಜಾನ ಪಟ್ಟಣದ ಎಸ್.ಎಚ್ ಮೆಳವಂಕಿ ಅವರ ಆಕಾಶ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದುಕೊಂಡಿದ್ದಾನೆ. ಸದ್ಯ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಪಡೆಯುತ್ತಿದ್ದಾರೆ.

ಮನೆಯ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಪಟ್ಟಣದ ಹೋಟೆಲ್ ಒಂದರಲ್ಲಿ ನಿತ್ಯ 5 ಗಂಟೆಗಳ ಕಾಲ ಸರ್ವಿಸ್ ಕೆಲಸ ಮತ್ತು ರಾತ್ರಿ ವೇಳೆ ಪಟ್ಟಣದ ಕೆಎಲ್ಇ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ವಾಚಮನ್ ಆಗಿ ಕೆಲಸ ಮಾಡಿ ಬರುವ ಹಣದಲ್ಲಿಯೇ ಶಾಲೆ ಮತ್ತು ಸ್ವಂತ ಖರ್ಚನ್ನು ನೋಡಿಕೊಂಡು ಓದು ಮುಂದುವರೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...