ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ಕಬ್ಬು ಬೆಳೆಗಾರರ ಒತ್ತಾಯ

Date:

ಈಗಾಗಲೇ ಕೃಷಿ ಬೆಳೆ ಬಹುತೇಕ ಒಣಗುವ ಹಂತ ತಲುಪಿವೆ. ಇದರಿಂದ ರೈತ ಸಾಲಗಾರನಾಗಿದ್ದಾನೆ. ಕೆಲವು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗೆ ನೆರವು ನೀಡಿ, ರೈತರ ನಷ್ಟವನ್ನು ತಪ್ಪಿಸಲು ಹಿಡಕಲ್ ಜಲಾಶಯದಿಂದ ನೀರು ಹರಿಸಬೇಕು ಎಂದು ಕಬ್ಬು ಬೆಳೆಗಾರರು ಒತ್ತಾಯಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುದೋಳದಲ್ಲಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ ಸೂರಗಾವಿ, “ಘಟಪ್ರಭಾ ನದಿಯ ನೀರುನೀರು ಸಂಪೂರ್ಣ ಖಾಲಿಯಾಗಿ ಸುಮಾರು ನಲವತ್ತು ದಿನಗಳು ಕಳೆದಿವೆ. ಇದರಿಂದ ಘಟಪ್ರಭಾ ನದಿಯ ಅವಲಂಬಿತ ಮುಧೋಳ ಹಾಗೂ ಮಹಾಲಿಂಗಪೂರ ಪಟ್ಟಣಗಳು ಒಳಗೊಂಡಂತೆ ಸುಮಾರು 30 ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಚಟುವಟಿಕೆಗೆ ನೀರು ಇಲ್ಲದ ಕಾರಣ ಇತರೆ ಬೆಳೆಗಳು ಸಂಪೂರ್ಣ ಒಣಗುತ್ತಿವೆ. ಇಂತಹ ಬೆಳೆಗಳಿಗೆ ಹಿಡಕಲ್ ಜಲಾಶಯದಿಂದ 2 ಟಿ.ಎಂ.ಸಿ ತಿಂಗಳಿಗೊಮ್ಮೆ ನೀರನ್ನು ಬಿಡಿಸಲು ನಮ್ಮ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆರ್.ಬಿ.ತಿಮ್ಮಾಪೂರ ಮೌಖಿಕವಾಗಿ ಹೇಳಿದರು ಇದೂವರೆಗೂ ಕ್ರಮ ಜರುಗಿಸದಿರುವುದು ಎಂದು ರೈತರ ಮೇಲೆ ಎಷ್ಟು ಕಾಳಜಿ ಇದೆ ಎಂದು ಗೊತ್ತಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಬ್ಬು ಬೆಳೆಗಾರರ ಸಂಘಟನೆ ಜಿಲ್ಲಾ ಕಾರ್ಯದರ್ಶಿ ದುಂಡಪ್ಪ ಯರಗಟ್ಟಿ ಮಾತನಾಡಿ, “ಪ್ರಸಕ್ತ ವರ್ಷವು ಹಿಡಕಲ್ ಜಲಾಶಯದಲ್ಲಿ ಸುಮಾರು 36 ಟಿ.ಎಂ.ಸಿ ನೀರು ಇಲ್ಲಿಯವರೆಗೂ ಸಂಗ್ರಹವಿದ್ದರೂ ನಮ್ಮ ಜಿಲ್ಲೆಗೆ ಬರಬೇಕಾದಂತಹ ಘಟಪ್ರಭಾ ನದಿಯ ನೀರನ್ನು ಬಿಟ್ಟಿರುವುದಿಲ್ಲ. ಕಾರಣ ತಾಲೂಕ ಆಡಳಿತ ಹಾಗೂ ಜಿಲ್ಲಾಡಳಿತ ಇಂತಹ ಘಟನೆಗಳಿಗೆ ಆಸ್ಪದ ನೀಡದೇ ನ್ಯಾಯಬದ್ಧವಾಗಿ ನಮ್ಮ ನದಿಯ ನೀರನ್ನು ಈ ಕೂಡಲೇ ನೀರು ಹರಿಸಲು ಜರೂರು ಕ್ರಮ ಜರುಗಿಸಬೇಕು. ತಪ್ಪಿದಲ್ಲಿ ಮುಧೋಳ ತಾಲೂಕಾ ರೈತರು ಹಾಗೂ ಕಾರ್ಮಿಕರು ಮತ್ತು ಜನಸಾಮಾನ್ಯರು ಸೇರಿ ಮುಧೋಳ ನಗರದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಮ್ ಡಿ ಗಾಯಕವಾಡ. ಮಹೇಶ ಗೌಡ ಪಾಟೀಲ್, ತಿಮಣ್ಣ ಬಟಗುಡಕ್, ಮುತ್ತು ಹೊಸಕೋಟೆ, ಎಸ್ ಎಸ್ ಅಕ್ಕಿ ರೈತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...