ಬೈಕ್‌ ಕಳ್ಳತನದ ಜಾಲ ಭೇದಿಸಿದ ಹುನಗುಂದ ಪೊಲೀಸರು; 27 ಮೋಟರ್ ಸೈಕಲ್‌ ವಶಕ್ಕೆ

Date:

ಮೋಟಾರ್ ಸೈಕಲ್ ಕಳ್ಳತನದ ಜಾಲ ಭೇದಿಸಿರುವ ಹುನಗುಂದ ಪೊಲೀಸರು, ಕಳ್ಳತನವಾಗಿದ್ದ 27 ಮೋಟರ್ ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಭಾಗಿಯಾದ ಮೂವರ ವಿರುದ್ದ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಬೈಕ್ ಕಳೆದುಕೊಂಡಿದ್ದ ತಾಲೂಕಿನ ಹಡಗಲಿ ಗ್ರಾಮದ ಸಂಗಪ್ಪ ಬಸಪ್ಪ ಅಂಗಡಿ ನೀಡಿದ ದೂರಿನ ಮೇರೆಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಸಿದ್ದಾರ್ಥ ಗೋಯಲ್, ಡಿವೈಎಸ್ಪಿ, ಸಂತೋಷ ಬನ್ನಟ್ಟಿ, ಸಿಪಿಐ. ಎಸ್.ಬಿ. ಅಜೂರ ಮಾರ್ಗದರ್ಶನದಲ್ಲಿ ಪಿಎಸ್‌ಐ, ಎಸ್.ಜಿ. ಆಲದಕಟ್ಟಿ ನೇತೃತ್ವದ ತಂಡ ಈ ಕುರಿತು ತನಿಖೆ ಕೈಗೊಂಡಿತ್ತು ಎಂದು ಮಾಹಿತಿ ನೀಡಿದರು.

ಯಾದಗಿರಿಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದ ಹುಲಗಪ್ಪ ಹನಮಂತ ಮೋಡಕೇರ, ರಾಯಚೂರು ಜಿಲ್ಲೆ ದೇವದುರ್ಗ ಮೂಲದ ಹಣಮಂತ ರಾಮಣ್ಣ ಮೋಡಕೇರ ಹಾಗೂ ಆಂಜನೇಯ ಬಂಧಿತ ಆರೋಪಿಗಳು. ಇವರಿಂದ ಒಟ್ಟು 27 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು ₹16 ಲಕ್ಷ ಆಗಬಹುದು. ಅಮೀನಗಡ ಠಾಣೆಯಲ್ಲಿ 30, ಇಳಕಲ್ ಠಾಣೆಯಲ್ಲಿ 5, ಹುನಗುಂದ ಠಾಣೆಯಲ್ಲಿ 27 ಸೇರಿ ಒಟ್ಟು 62 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶ ಪಡಿಸಿಕೊಂಡ ಬೈಕ್‌ಗಳು ರಾಜ್ಯವಲ್ಲದೇ ಹೊರ ರಾಜ್ಯಕ್ಕೂ ಸೇರಿದ್ದಾಗಿವೆ. ಇದು ವರ್ಷದ ದೊಡ್ಡ ಪ್ರಕರಣ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ ಸಿಪಿಐ ಎಸ್.ಬಿ. ಅಜೂರ, ಪಿಎಸ್‌ಐ.ಗಳಾದ ಎಸ್.ಜಿ. ಆಲದಕಟ್ಟಿ ಹಾಗೂ ಎನ್‌.ಎಸ್. ಸಿಮಾನಿ, ಸಿಬ್ಬಂದಿಗಳಾದ ಎಸ್.ಬಿ. ಅಮಲಿಹಾಳ, ಆಯ್.ಎಸ್. ಮಂಟ್ಕಾಳ, ಕೆ.ವಾಯ್. ವಾಲಿಕಾರ, ಎಂ.ಎಸ್. ನಾರಗಲ್ಲ, ಸಿದ್ದಪ್ಪ ಕೌಲಗಿ, ಬಿ.ಎನ್. ಗೌಡರ, ಎ.ಬಿ. ಯರದಾಳ, ಯಲ್ಲಪ್ಪ ಅಂಬಿಗೇರ, ಗಣೇಶ ಪವಾರ, ಆನಂದ ಗೋಲಪ್ಪನವರ, ಚಂದ್ರು ಜಟ್ಟೆಪ್ಪಗೋಳ, ಬಸವರಾಜ ಜಗಲಿ ಇವರ ಕಾರ್ಯವನ್ನು ಎಸ್ಪಿ ಸಿದ್ದಾರ್ಥ ಶ್ಲಾಘಿಸಿದರು.

ಇದನ್ನೂ ಓದಿ: ಮುಂಡಗೋಡ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು 20 ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾ ಶಿಬಿರಕ್ಕೆ ಚಾಲನೆ

ಡಿವೈಎಸ್ಪಿ ಸಂತೋಷ ಬನ್ನಟ್ಟಿ, ಸಿಪಿಐ ಎಸ್.ಬಿ. ಅಜೂರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...