ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

Date:

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಒಡಲದನಿ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ನಮ್ಮ ಸಂಶೋಧನಾ ಅಧ್ಯಯನದ ದಿನಗಳಲ್ಲಿಈ ಬಗ್ಗೆ ಮನವರಿಕೆಯಾಗಿದೆ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ವಲಸೆಯನ್ನು ತಡೆಯುವ ಯತ್ನವಾಗಿ ‘ಒಡಲದನಿ’ ಮಹಿಳಾ ಒಕ್ಕೂಟ ಆರಂಭವಾಯಿತು. ಒಕ್ಕೂಟದ ಮೂಲಕ ನೂರಾರು ಜನ ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಿಲು ಸಾಧ್ಯವಾಗಿದೆ. ತಮ್ಮ ಒಕ್ಕೂಟದ ಮಹಿಳೆಯರು ಶಕ್ತಿ ಯೋಜನೆಯನ್ನು ಸಮರ್ಥವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ ಮಾತನಾಡಿ, ವಲಸೆಯಂತಹ ಸಾಮಾಜಿಕ ಸಮಸ್ಯೆಗೆ ‘ಒಡಲದನಿ’ ಹಾಗೂ ಅದರ ಸಂಸ್ಥಾಪಕರು ಕಂಡುಕೊಂಡಿರುವ ನವೀನ ಹಾಗೂ ಪರಿಣಾಮಕಾರಿ ಮಾರ್ಗವನ್ನು ಶ್ಲಾಘಿಸಿದರು.

ಇದನ್ನೂ ಓದಿ: ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಸಾವಿತ್ರಿ ತಪೇಲಿ ಮಾತನಾಡಿದರು. ಪ್ರಾಚಾರ್ಯ ಸಿಕಂದರ್‌ ಧನ್ನೂರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಎಸ್. ಜಿ.ಎಮ್ಮಿ, ಸಿ.ಜಿ.ಹವಾಲ್ದಾರ, ದೇವು ಡಂಬಳ, ರಾಣಿ ತೋಪಲಕಟ್ಟಿ, ಬಸವರಾಜ ಹೊಸಮನಿ, ಬಿ.ವೈ.ಕೊಡಗಾನೂರ ಮಹಿಳಾ ವೇದಿಕ ಸಂಚಾಲಕಿ ದಾನಮ್ಮ ಮಠದ, ಸುರೇಶ ಎಚ್‌. ಎಸ್. ಬಿ. ವೈ.ಆಲೂರ ಇದ್ದರು. ಸನಾ ಶಿರಸಂಗಿ ನಿರೂಪಿಸಿದರು, ನಾಗವೇಣಿ ಗರಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...