ಇಳಕಲ್ | ಒಳಮೀಸಲಾತಿ: ಮಾ.25ರಂದು ಬಲಗೈ ಸಮುದಾಯಗಳಿಂದ ಬೃಹತ್ ಪ್ರತಿಭಟನೆ

Date:

‌ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಇದೇ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಚಲವಾದಿ ಸಮಾಜದ ಗಿರೀಶ್ ಹಾಸನವರ ತಿಳಿಸಿದರು.

ಇಳಕಲ್ ನಗರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, “ಈ ಪ್ರತಿಭಟನೆಯು ಜ್ಞಾನಪ್ರಕಾಶ್ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿದೆ” ಎಂದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಶರಣಪ್ಪ ಅಮದಿಹಾಳ ಮಾತನಾಡಿ, “ಮೀಸಲಾತಿಯ ರೋಸ್ಟರ್ ವ್ಯವಸ್ಥೆಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ʼಬೆಂಗಳೂರು ಚಲೋʼ ಪ್ರತಿಭಟನೆ ಆಯೋಜಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುನಗುಂದ ಹಾಗೂ ಇಲಕಲ್ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ. ಸರ್ಕಾರ ತಕ್ಷಣ ಸಮಸ್ಯೆಯನ್ನು ಪರಿಹರಿಸಿ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಚಲವಾದಿ ಸಮಾಜದ ಮುಖಂಡ ಸುರೇಶ್ ಜಂಗ್ಲಿ ಮಾತನಾಡಿ, “ನಾಗಮೋಹನ್ ದಾಸ್ ವರದಿಯನ್ನು ಪರಿಷ್ಕರಿಸಬೇಕು ಅಥವಾ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂಬುದು ಬಲಗೈ ಸಮುದಾಯದ ಪ್ರಮುಖ ಬೇಡಿಕೆಯಾಗಿದೆ. ಒಳಮೀಸಲಾತಿ ವಿಷಯದಲ್ಲಿ ಚಲವಾದಿ ಸಮುದಾಯದ ಉಳಿವಿನ ಪ್ರಶ್ನೆ ಉದ್ಭವಿಸಿರುವುದರಿಂದ, ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯಮನೂರು ಚಲವಾದಿ, ಶಾಮಣ್ಣ ಮುಧೋಳ, ಬಸವರಾಜ್ ಚಲವಾದಿ, ಯಮನಪ್ಪ ಬೀಳಗಿ, ಆನಂದ ಚಲವಾದಿ, ಅಂಬಣ್ಣ ಚಲವಾದಿ, ರಾಮಣ್ಣ ಬೆನಕಂಡೋಣಿ, ಪಾವಡಪ್ಪ ಚಲವಾದಿ, ಹೇಮಂತ ಚಲವಾದಿ, ಗೈಬು ಚಲವಾದಿ, ನಾಗೇಶ್ ಮುದುಗಲ್ಲ, ಸಂಗಮೇಶ ಜಂಗ್ಲಿ, ವಸಂತ ಮುಧೋಳ, ಗುರು ನಾಡಿಗೇರ, ಸುರೇಶ್ ದೊಡ್ಡಮನಿ, ಮಹಾಂತೇಶ ನಾರಾಯಣಿ ಸೇರಿದಂತೆ ಅನೇಕರು ಬಹುತೇಕರು ಇದ್ದರು.

ವಿಜಯಪುರ ನಗರದ ಸಾರಿ ಪುತ್ರ ಬುದ್ದ ವಿಹಾರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಚಲವಾದಿ ಸಮಾಜದ ಜಿಲ್ಲಾ ಮುಖಂಡ ರಾಜಶೇಖರ ಯಡಳ್ಳಿ ಅವರು ಮಾತನಾಡಿ, “ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡುವುದು, ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು” ಎಂದರು.

ಒಳಮೀಸಲಾತಿ ವಿಜಯಪುರ

ಶಶಿಕಾಂತ ಹೊನವಾಡಕರ್ ಮಾತನಾಡಿ, “ರಾಜ್ಯ ಸರ್ಕಾರವು‌ 2025ರ ಸೆಪ್ಟೆಂಬರ್ 03ರಂದು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯುವುದು, ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ – A, B ಮತ್ತು C ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ, ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸುವುದು, ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸುವುದು, ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸುವುದು, ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ ಕೇವಲ 223 ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರುಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ದೋಚಿದ ಸೈಬರ್ ವಂಚಕರು: ಬೆಳಗಾವಿಯಲ್ಲಿ ವೃದ್ಧ ಉದ್ಯಮಿ ಕಂಗಾಲು

ಈ ಪತ್ರಿಕಾಗೋಷ್ಠಿಯಲ್ಲಿ ಶಶಿಕಾಂತ್ ಹೊನವಾಡಕರ್, ಅಡಿವೆಪ್ಪ ಸಾಲಗಲ್ಲ, ನಾಗರಾಜ ಲಂಬು, ರಮೇಶ ಕೌಲಗಿ, ಶರಣು ಸಿಂಧೆ, ಪರಶುರಾಮ ದಿಂಡವಾರ, ಯಮನಪ್ಪ ಗುಣಕಿ, ಚನ್ನು ಕಟ್ಟಿಮನಿ, ರಾಜು ತೊರವಿ, ಸುರೇಶ ಬಬಲೇಶ್ವರ, ಮಲ್ಲು ಹಾದಿಮನಿ ಮತ್ತು ಅನಿಲ ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...